AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಮನೆ, ಸರ್ಕಾರದ ಮಧ್ಯೆ ಕಾನೂನು ಸಮರ‌: ನಾಳೆ ತುರ್ತು ಸಂಪುಟ ಸಭೆ ಕರೆದ ಸಿಎಂ

ಸಿಎಂ ಸಿದ್ದರಾಮಯ್ಯ ನಾಳೆ ಮಧ್ಯಾಹ್ನ 3 ಗಂಟೆಗೆ ತುರ್ತು ಸಂಪುಟ ಸಭೆ ಕರೆದಿದ್ದಾರೆ. ಅರಮನೆ ಮತ್ತು ಸರ್ಕಾರದ ನಡುವಿನ ಭೂಮಿ ವಿವಾದ ಮತ್ತು ಟಿಡಿಆರ್ ನೀಡುವ ವಿಷಯದಲ್ಲಿ ಈ ಸಭೆ ಮಹತ್ವದ್ದಾಗಿದೆ. ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸುವ ಮೊದಲು ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವ ಸಾಧ್ಯತೆಯಿದೆ.

ಅರಮನೆ, ಸರ್ಕಾರದ ಮಧ್ಯೆ ಕಾನೂನು ಸಮರ‌: ನಾಳೆ ತುರ್ತು ಸಂಪುಟ ಸಭೆ ಕರೆದ ಸಿಎಂ
ಅರಮನೆ, ಸರ್ಕಾರದ ಮಧ್ಯೆ ಕಾನೂನು ಸಮರ‌: ನಾಳೆ ತುರ್ತು ಸಂಪುಟ ಸಭೆ ಕರೆದ ಸಿಎಂ
ಪ್ರಸನ್ನ ಗಾಂವ್ಕರ್​
| Edited By: |

Updated on: Jan 23, 2025 | 10:10 PM

Share

ಬೆಂಗಳೂರು, ಜನವರಿ 23: ಮೈಸೂರು ರಾಜಮನೆತನ ಮತ್ತು ರಾಜ್ಯ ಸರ್ಕಾ ರದ ನಡುವಿನ ಜಟಾಪಟಿ ಮತ್ತೊಂದು ಹಂತಕ್ಕೆ ತಲುಪಿದೆ. ಅರಮನೆ ಭೂಮಿಗೆ ಟಿಡಿಆರ್ ನೀಡುವ ವಿಚಾರದಲ್ಲಿ ತಿಕ್ಕಾಟ ನಡೆದಿದೆ. ಹೀಗಾಗಿ ಅರಮನೆ ಮತ್ತು ಸರ್ಕಾರದ ನಡುವಿನ ಕಾನೂನು ಸಮರ‌ ಹಿನ್ನೆಲೆ ಸಿಎಂ ಸಿದ್ದರಾಮಯ್ಯ (Siddaramaiah) ನಾಳೆ ಮಧ್ಯಾಹ್ನ 3 ಗಂಟೆಗೆ ತುರ್ತು ಸಂಪುಟ ಸಭೆ ಕರೆದಿದ್ದಾರೆ. ಸದ್ಯ ತುರ್ತು ಸಂಪುಟ ಸಭೆ ಕರೆದಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಅರಮನೆ ಭೂಮಿಗೆ ಟಿಡಿಆರ್ ನೀಡುವ ವಿಚಾರದಲ್ಲಿ ರಾಜಮನೆತನ ಮತ್ತು ರಾಜ್ಯ ಸರ್ಕಾ ರದ ನಡುವಿನ  ತಿಕ್ಕಾಟ ನಡೆಯುತ್ತಿದೆ. ಸುಪ್ರೀಂಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಬೇಕಾದ ಹಿನ್ನೆಲೆ ಸರ್ಕಾರ ಸಂಪುಟ ಸಭೆಯಲ್ಲಿ ನಿರ್ಣಯ ಮಾಡಬೇಕಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ನಾಳೆ ಸಂಪುಟ ಸಭೆ ಕರೆದಿದ್ದಾರೆ.

ಇದನ್ನೂ ಓದಿ: ರಸ್ತೆ ಅಗಲೀಕರಣಕ್ಕೆ ಅರಮನೆ ಜಾಗ ಸ್ವಾಧೀನ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರೋಷಾವೇಷ

ನಾಳೆಯ ಸಂಪುಟ ಸಭೆಯಲ್ಲಿ ಭೂಸ್ವಾಧೀನ ಪ್ರಕ್ರಿಯೆಯನ್ನು ಸರ್ಕಾರ ಕೈಬಿಡುವ ಸಾಧ್ಯತೆ ಇದೆ. ರಸ್ತೆ ಅಗಲೀಕರಣ ಮಾಡದೇ ಇರಲು ಸರ್ಕಾರ ತೀರ್ಮಾನಿಸಿದ್ದು, ಟಿಡಿಆರ್​ ನೀಡಿದರೆ ಮುಂದಿನ ಭೂಸ್ವಾಧೀನ‌ ಪ್ರಕ್ರಿಯೆಗಳಿಗೆ ಮಾನದಂಡ ಆಗುವ ಆತಂಕ ಎದುರಾಗಿದೆ. ಹೀಗಾಗಿ ಇಡೀ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಲು ಸರ್ಕಾರದ ನಿರ್ಧಾರವಾಗಿದ್ದು, ನಾಳೆಯ ತುರ್ತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡು ಸುಪ್ರೀಂಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಲು ಸರ್ಕಾರ ತೀರ್ಮಾನ ಮಾಡಿದೆ.

ಇದನ್ನೂ ಓದಿ: ರೈತರಿಗೆ ಭೂಮಿಯನ್ನು ಸರ್ಕಾರ ಕೊಡಬೇಕು, ನಾನು ಹೇಗೆ ಕೊಡಲು ಸಾಧ್ಯ? ಹೆಚ್ ಡಿ ಕುಮಾರಸ್ವಾಮಿ

ಇನ್ನು ಟಿಡಿಆರ್ ಪರಿಹಾರ ನೀಡಲು ವಿಳಂಬ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಮೈಸೂರು ರಾಜಮನೆತನ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಸಾಲು ಸಾಲು ಕಠಿಣ ಕ್ರಮ ಕೈಗೊಳ್ಳುವಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಸಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು