Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೊಂದು ಬೇಸ್​ಲೆಸ್ ಆರೋಪ: ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಐಟಿ ದಾಳಿ ವೇಳೆ ಬರೋಬ್ಬರಿ 40 ಕೋಟಿ ರೂ. ನಗದು ಸಿಕ್ಕಿದ್ದು, ಯಾರದ್ದು ಎನ್ನುವ ಚರ್ಚೆ ರಾಜ್ಯ ರಾಜಕೀಯ ಬಿರುಗಾಳಿಯನ್ನೇ ಎಬ್ಬಿಸಿದೆ. ಆಡಳಿತ ಪಕ್ಷ-ವಿಪಕ್ಷಗಳ ಮಧ್ಯೆ ಆರೋಪ ಪ್ರತ್ಯಾರೋಪಕ್ಕೆ ವೇದಿಕೆಯಾಗಿದೆ. ಸದ್ಯ ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು,  ಇದೊಂದು ಬೇಸ್​ಲೆಸ್ ಆರೋಪ ಎಂದು ತಿರುಗೇಟು ನೀಡಿದ್ದಾರೆ.

ಇದೊಂದು ಬೇಸ್​ಲೆಸ್ ಆರೋಪ: ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
ಸಿಎಂ ಸಿದ್ದರಾಮಯ್ಯ
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಗಂಗಾಧರ​ ಬ. ಸಾಬೋಜಿ

Updated on:Oct 15, 2023 | 5:13 PM

ಮೈಸೂರು, ಅಕ್ಟೋಬರ್​​​​ 15: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದ ಐಟಿ ರೇಡ್, ರಾಜ್ಯಾದ್ಯಂತ ಭಾರಿ ಸದ್ದು ಮಾಡುತ್ತಿದೆ. ಐಟಿ ದಾಳಿ ವೇಳೆ ಬರೋಬ್ಬರಿ 40 ಕೋಟಿ ರೂ. ನಗದು ಸಿಕ್ಕಿದ್ದು, ಯಾರದ್ದು ಎನ್ನುವ ಚರ್ಚೆ ರಾಜ್ಯ ರಾಜಕೀಯ ಬಿರುಗಾಳಿಯನ್ನೇ ಎಬ್ಬಿಸಿದೆ. ಆಡಳಿತ ಪಕ್ಷ-ವಿಪಕ್ಷಗಳ ಮಧ್ಯೆ ಆರೋಪ ಪ್ರತ್ಯಾರೋಪಕ್ಕೆ ವೇದಿಕೆಯಾಗಿದೆ. ಸದ್ಯ ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯೆ ನೀಡಿದ್ದು,  ಇದೊಂದು ಬೇಸ್​ಲೆಸ್ ಆರೋಪ ಎಂದು ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರು ಯಾವ ಪಕ್ಷಕ್ಕೂ ಸೇರಿದವರಲ್ಲ. ಗುತ್ತಿಗೆದಾರರು ಕೇಳೋದು ಇಲ್ಲ, ನಾವೂ ಕೊಡೋದು ಇಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್​ ವಿರುದ್ಧ ಮಾಜಿ ಶಾಸಕ ಸಿ.ಟಿ.ರವಿ ವಾಗ್ದಾಳಿ

ಪಂಚರಾಜ್ಯಗಳ ಚುನಾವಣೆಗೆ ಈ ಸರ್ಕಾರವನ್ನು ಎಟಿಎಂ ಮಾಡಿಕೊಂಡಿದ್ದಾರೆ. ಇದಕ್ಕೆ ಅಂಬಿಕಾಪತಿ, ಬಿಲ್ಡರ್ ಸಂತೋಷ್​ ಮನೆಯಲ್ಲಿ ಸಿಕ್ಕ ಹಣವೇ ಸಾಕ್ಷಿ ಎಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಜಿ ಶಾಸಕ ಸಿ.ಟಿ.ರವಿ ವಾಗ್ದಾಳಿ ಮಾಡಿದ್ದರು. 98 ಜನ ಬೇನಾಮಿಯ ಹೆಸರು ಹೊರ ಬರಬೇಕು. ಲೋಕಸಭೆ ಚುನಾವಣೆಗೆ 2 ಸಾವಿರ ಕೋಟಿ ಕೊಡ್ತೀನಿ ಅನ್ನೋ ಚರ್ಚೆ ಆಗುತ್ತಿದೆ. ಭ್ರಷ್ಟ ಬೆಂಗಳೂರು ಮಾಡಲು ಹೋಗುತ್ತಿದ್ದಾರೆ ಎಂದು ಕಿಡಿಕಾರಿದ್ದರು.

ಇದನ್ನೂ ಓದಿ: ಸಿಕ್ಕಸಿಕ್ಕ ಕಡೆ ಬಾಯಿ ಹಾಕುತ್ತಿರುವ ‘ಪರ್ಸಂಟೇಜ್ ಪಟಾಲಂ’ ಈಗ ಕಸಕ್ಕೂ ಬಾಯಿ: ಯಾರ ಮೇಲೆ ಕುಮಾರಸ್ವಾಮಿ ಟ್ವೀಟ್ ದಾಳಿ?

ತಮ್ಮ ಪ್ರಾಮಾಣಿಕತೆ ಸಾಬೀತುಪಡಿಸಿಕೊಳ್ಳಬೇಕಾದ್ರೆ ಸಿಬಿಐಗೆ ವಹಿಸಿ. ಗುತ್ತಿಗೆದಾರರ ಮನೆ ಮೇಲೆ ದಾಳಿಯಾದ್ರೆ ಡಿಸಿಎಂ ಡಿಕೆ ಶಿವಕುಮಾರ್​ ರಾಜಕೀಯ ಅಂತಾರೆ. ಐಟಿ ದಾಳಿ ಬಗ್ಗೆ ಸಚಿವ ಪ್ರಿಯಾಂಕ್​ ಖರ್ಗೆ ಕೂಡ ಪ್ರಶ್ನೆ ಮಾಡುತ್ತಾರೆ. ಒಬ್ಬೊಬ್ಬರ ಮನೆಯಲ್ಲಿ 40, 42 ಕೋಟಿ ರೂ. ಸಿಕ್ಕಿದೆಯಲ್ಲ ಏನ್ ಹೇಳ್ತೀರಿ ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ: ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ರಾಜೀನಾಮೆ ವಾಪಸ್ ಪಡೆದು ಕಣ್ಮರೆ, ಆಪರೇಷನ್ ಹಸ್ತಕ್ಕೆ ಇಳಿದ ಕಾಂಗ್ರೆಸ್

ನಾಡಿಗೆ ಕಳಂಕ ತರುವ ರೀತಿಯಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ. ಸಮಾಜಕ್ಕೆ ಯಾವುದು ದುಷ್ಟವಾಗಿ ಕಾಡ್ತಿದೆಯೋ ಅದು ದಮನವಾಗಲಿ. ರಾಜೀವ್ ತಾರನಾಥ್ ಅವರ ಮೈಸೂರು ದಸರಾ ಕಾರ್ಯಕ್ರಮ ಆಯೋಜನೆಗೆ 5 ಲಕ್ಷ ರೂ. ಲಂಚ ಕೇಳುತ್ತಾರೆ. ನಾಡಹಬ್ಬಕ್ಕೆ ಇದಕ್ಕಿಂತ ಕಳಂಕ ಮತ್ತೊಂದು ಇಲ್ಲ. ಗುತ್ತಿಗೆದಾರರು, ಯೋಜನೆಗೆ ಮಾತ್ರ ಕಮಿಷನ್​ ದಂಧೆ ಸೀಮಿತವಾಗಿಲ್ಲ. ಕಲಾವಿದರ ಗೌರವಧನದವರೆಗೆ ಈ ದಂಧೆ ಮುಂದುವರೆದಿದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:04 pm, Sun, 15 October 23

ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ಪಿಲಿಭಿತ್ ಅಭಯಾರಣ್ಯದಲ್ಲಿ ಹೆಬ್ಬಾವನ್ನು ತಿಂದು ವಾಂತಿ ಮಾಡಿದ ಹುಲಿ
ಪಿಲಿಭಿತ್ ಅಭಯಾರಣ್ಯದಲ್ಲಿ ಹೆಬ್ಬಾವನ್ನು ತಿಂದು ವಾಂತಿ ಮಾಡಿದ ಹುಲಿ
ಜಿಲ್ಲೆಯಲ್ಲಿ ಬಿಜೆಪಿಗೆ ಉತ್ತಮ ಫಲಿತಾಂಶ ಕೊಡಿಸುವ ಸವಾಲು ಸ್ವೀಕಾರ: ಬಿವೈವಿ
ಜಿಲ್ಲೆಯಲ್ಲಿ ಬಿಜೆಪಿಗೆ ಉತ್ತಮ ಫಲಿತಾಂಶ ಕೊಡಿಸುವ ಸವಾಲು ಸ್ವೀಕಾರ: ಬಿವೈವಿ
ಜನಿವಾರದಿಂದ ನೇಣು ಬಿಗಿದುಕೊಂಡರೆ? ಕಾಲೇಜು ಸಿಬ್ಬಂದಿಯ ಮೂರ್ಖ ವಾದ!
ಜನಿವಾರದಿಂದ ನೇಣು ಬಿಗಿದುಕೊಂಡರೆ? ಕಾಲೇಜು ಸಿಬ್ಬಂದಿಯ ಮೂರ್ಖ ವಾದ!