AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೊಂದು ಬೇಸ್​ಲೆಸ್ ಆರೋಪ: ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಐಟಿ ದಾಳಿ ವೇಳೆ ಬರೋಬ್ಬರಿ 40 ಕೋಟಿ ರೂ. ನಗದು ಸಿಕ್ಕಿದ್ದು, ಯಾರದ್ದು ಎನ್ನುವ ಚರ್ಚೆ ರಾಜ್ಯ ರಾಜಕೀಯ ಬಿರುಗಾಳಿಯನ್ನೇ ಎಬ್ಬಿಸಿದೆ. ಆಡಳಿತ ಪಕ್ಷ-ವಿಪಕ್ಷಗಳ ಮಧ್ಯೆ ಆರೋಪ ಪ್ರತ್ಯಾರೋಪಕ್ಕೆ ವೇದಿಕೆಯಾಗಿದೆ. ಸದ್ಯ ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು,  ಇದೊಂದು ಬೇಸ್​ಲೆಸ್ ಆರೋಪ ಎಂದು ತಿರುಗೇಟು ನೀಡಿದ್ದಾರೆ.

ಇದೊಂದು ಬೇಸ್​ಲೆಸ್ ಆರೋಪ: ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
ಸಿಎಂ ಸಿದ್ದರಾಮಯ್ಯ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Oct 15, 2023 | 5:13 PM

Share

ಮೈಸೂರು, ಅಕ್ಟೋಬರ್​​​​ 15: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದ ಐಟಿ ರೇಡ್, ರಾಜ್ಯಾದ್ಯಂತ ಭಾರಿ ಸದ್ದು ಮಾಡುತ್ತಿದೆ. ಐಟಿ ದಾಳಿ ವೇಳೆ ಬರೋಬ್ಬರಿ 40 ಕೋಟಿ ರೂ. ನಗದು ಸಿಕ್ಕಿದ್ದು, ಯಾರದ್ದು ಎನ್ನುವ ಚರ್ಚೆ ರಾಜ್ಯ ರಾಜಕೀಯ ಬಿರುಗಾಳಿಯನ್ನೇ ಎಬ್ಬಿಸಿದೆ. ಆಡಳಿತ ಪಕ್ಷ-ವಿಪಕ್ಷಗಳ ಮಧ್ಯೆ ಆರೋಪ ಪ್ರತ್ಯಾರೋಪಕ್ಕೆ ವೇದಿಕೆಯಾಗಿದೆ. ಸದ್ಯ ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯೆ ನೀಡಿದ್ದು,  ಇದೊಂದು ಬೇಸ್​ಲೆಸ್ ಆರೋಪ ಎಂದು ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರು ಯಾವ ಪಕ್ಷಕ್ಕೂ ಸೇರಿದವರಲ್ಲ. ಗುತ್ತಿಗೆದಾರರು ಕೇಳೋದು ಇಲ್ಲ, ನಾವೂ ಕೊಡೋದು ಇಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್​ ವಿರುದ್ಧ ಮಾಜಿ ಶಾಸಕ ಸಿ.ಟಿ.ರವಿ ವಾಗ್ದಾಳಿ

ಪಂಚರಾಜ್ಯಗಳ ಚುನಾವಣೆಗೆ ಈ ಸರ್ಕಾರವನ್ನು ಎಟಿಎಂ ಮಾಡಿಕೊಂಡಿದ್ದಾರೆ. ಇದಕ್ಕೆ ಅಂಬಿಕಾಪತಿ, ಬಿಲ್ಡರ್ ಸಂತೋಷ್​ ಮನೆಯಲ್ಲಿ ಸಿಕ್ಕ ಹಣವೇ ಸಾಕ್ಷಿ ಎಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಜಿ ಶಾಸಕ ಸಿ.ಟಿ.ರವಿ ವಾಗ್ದಾಳಿ ಮಾಡಿದ್ದರು. 98 ಜನ ಬೇನಾಮಿಯ ಹೆಸರು ಹೊರ ಬರಬೇಕು. ಲೋಕಸಭೆ ಚುನಾವಣೆಗೆ 2 ಸಾವಿರ ಕೋಟಿ ಕೊಡ್ತೀನಿ ಅನ್ನೋ ಚರ್ಚೆ ಆಗುತ್ತಿದೆ. ಭ್ರಷ್ಟ ಬೆಂಗಳೂರು ಮಾಡಲು ಹೋಗುತ್ತಿದ್ದಾರೆ ಎಂದು ಕಿಡಿಕಾರಿದ್ದರು.

ಇದನ್ನೂ ಓದಿ: ಸಿಕ್ಕಸಿಕ್ಕ ಕಡೆ ಬಾಯಿ ಹಾಕುತ್ತಿರುವ ‘ಪರ್ಸಂಟೇಜ್ ಪಟಾಲಂ’ ಈಗ ಕಸಕ್ಕೂ ಬಾಯಿ: ಯಾರ ಮೇಲೆ ಕುಮಾರಸ್ವಾಮಿ ಟ್ವೀಟ್ ದಾಳಿ?

ತಮ್ಮ ಪ್ರಾಮಾಣಿಕತೆ ಸಾಬೀತುಪಡಿಸಿಕೊಳ್ಳಬೇಕಾದ್ರೆ ಸಿಬಿಐಗೆ ವಹಿಸಿ. ಗುತ್ತಿಗೆದಾರರ ಮನೆ ಮೇಲೆ ದಾಳಿಯಾದ್ರೆ ಡಿಸಿಎಂ ಡಿಕೆ ಶಿವಕುಮಾರ್​ ರಾಜಕೀಯ ಅಂತಾರೆ. ಐಟಿ ದಾಳಿ ಬಗ್ಗೆ ಸಚಿವ ಪ್ರಿಯಾಂಕ್​ ಖರ್ಗೆ ಕೂಡ ಪ್ರಶ್ನೆ ಮಾಡುತ್ತಾರೆ. ಒಬ್ಬೊಬ್ಬರ ಮನೆಯಲ್ಲಿ 40, 42 ಕೋಟಿ ರೂ. ಸಿಕ್ಕಿದೆಯಲ್ಲ ಏನ್ ಹೇಳ್ತೀರಿ ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ: ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ರಾಜೀನಾಮೆ ವಾಪಸ್ ಪಡೆದು ಕಣ್ಮರೆ, ಆಪರೇಷನ್ ಹಸ್ತಕ್ಕೆ ಇಳಿದ ಕಾಂಗ್ರೆಸ್

ನಾಡಿಗೆ ಕಳಂಕ ತರುವ ರೀತಿಯಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ. ಸಮಾಜಕ್ಕೆ ಯಾವುದು ದುಷ್ಟವಾಗಿ ಕಾಡ್ತಿದೆಯೋ ಅದು ದಮನವಾಗಲಿ. ರಾಜೀವ್ ತಾರನಾಥ್ ಅವರ ಮೈಸೂರು ದಸರಾ ಕಾರ್ಯಕ್ರಮ ಆಯೋಜನೆಗೆ 5 ಲಕ್ಷ ರೂ. ಲಂಚ ಕೇಳುತ್ತಾರೆ. ನಾಡಹಬ್ಬಕ್ಕೆ ಇದಕ್ಕಿಂತ ಕಳಂಕ ಮತ್ತೊಂದು ಇಲ್ಲ. ಗುತ್ತಿಗೆದಾರರು, ಯೋಜನೆಗೆ ಮಾತ್ರ ಕಮಿಷನ್​ ದಂಧೆ ಸೀಮಿತವಾಗಿಲ್ಲ. ಕಲಾವಿದರ ಗೌರವಧನದವರೆಗೆ ಈ ದಂಧೆ ಮುಂದುವರೆದಿದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:04 pm, Sun, 15 October 23

ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ