AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯಗೆ ಈಗಲೂ ಬಿಜೆಪಿಯಿಂದ ಜೀವ ಬೆದರಿಕೆ: ಕೆಪಿಸಿಸಿ ವಕ್ತಾರ ಗಂಭೀರ ಆರೋಪ

ಸಿಎಂ ಸಿದ್ದರಾಮಯ್ಯರಿಗೆ ಈಗಲೂ ಬಿಜೆಪಿಯಿಂದ ಜೀವ ಬೆದರಿಕೆ ಇದೆ. ಹಾಗಾಗಿ ಅಶ್ವತ್ಥ್​ ನಾರಾಯಣ ಅವರನ್ನು ಪೊಲೀಸರು ಇಂದು ಸಂಜೆಯೊಳಗೆ ವಶಕ್ಕೆ ಪಡೆಯಬೇಕೆಂದು ಕೆಪಿಸಿಸಿ ವಕ್ತಾರ ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯಗೆ ಈಗಲೂ ಬಿಜೆಪಿಯಿಂದ ಜೀವ ಬೆದರಿಕೆ: ಕೆಪಿಸಿಸಿ ವಕ್ತಾರ ಗಂಭೀರ ಆರೋಪ
ಸಿಎಂ ಸಿದ್ದರಾಮಯ್ಯ
ರಮೇಶ್ ಬಿ. ಜವಳಗೇರಾ
|

Updated on:May 25, 2023 | 12:25 PM

Share

ಮುಖ್ಯಾಂಶಗಳು

  • ಸಿಎಂ ಸಿದ್ದರಾಮಯ್ಯರಿಗೆ ಈಗಲೂ ಬಿಜೆಪಿಯಿಂದ ಜೀವ ಬೆದರಿಕೆ ಇದೆ
  • ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಗಂಭೀರ ಆರೋಪ
  • ಸಿಎಂ ಸಿದ್ದರಾಮಯ್ಯರಿಗೆ ಏನೇ ಆದರು ಅದಕ್ಕೆ ಬಿಜೆಪಿ, ಅಶ್ವಥ್ ನಾರಾಯಣ್ ಹೊಣೆ ಎಂದ ಎಂ ಲಕ್ಷ್ಮಣ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗಲೂ ಬಿಜೆಪಿಯಿಂದ ಜೀವ ಬೆದರಿಕೆ ಇದೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಗಂಭೀರ ಆರೋಪ ಮಾಡಿದ್ದಾರೆ. ಮೈಸೂರಿನಲ್ಲಿ ಇಂದು(ಮೇ 23) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಲೂ ಬಿಜೆಪಿಯಿಂದ ಸಿದ್ದರಾಮಯ್ಯನವರಿಗೆ ಜೀವ ಬೆದರಿಕೆ ಇದೆ. ಅದೇ ಕಾರಣಕ್ಕೆ ಅಶ್ವತ್​ ನಾರಾಯಣ್ ವಿರುದ್ಧ ನೀಡಿದ್ದ ದೂರಿನ ಮೇಲೆ ಕ್ರಮಕ್ಕೆ ಒತ್ತಾಯಿಸುತ್ತಿದೇವೆ. ಉರಿಗೌಡ, ನಂಜೇಗೌಡ ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನ ಹೊಡೆದು ಹಾಕಿ ಎಂದಿದ್ದ ಅಶ್ವತ್ಥ್ ನಾರಾಯಣ್‌‌ ಅವರ ಈ ಹೇಳಿಕೆ ವಿಡಿಯೋ ಈಗಲೂ ವೈರಲ್ ಆಗುತ್ತಿದೆ. ಇದರಿಂದ ಸಿದ್ದರಾಮಯ್ಯರ ಮೇಲೆ ಮತ್ತೆ ದಾಳಿಯಾಗುವ ಸಾಧ್ಯತೆ ಇದೆ ಎಂದರು.

ಇದನ್ನೂ ಓದಿ: ‘ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯನನ್ನು ಹೊಡೆದು ಹಾಕಿ’: ಮಾಜಿ ಸಚಿವ ಡಾ ಅಶ್ವತ್ಥ್ ನಾರಾಯಣ ವಿರುದ್ಧ FIR ದಾಖಲು

ಸಿಎಂ ಸಿದ್ದರಾಮಯ್ಯರಿಗೆ ಏನೇ ಆದರು ಅದಕ್ಕೆ ಬಿಜೆಪಿ, ಅಶ್ವತ್​ ನಾರಾಯಣ್ ಹೊಣೆ‌. ಈ ಕೂಡಲೇ ಅಶ್ವಥ್ ನಾರಾಯಣ್‌ರನ್ನು ಪೊಲೀಸರು ಬಂಧಿಸಬೇಕು. ನಾವು ದೇವರಾಜ ಪೊಲೀಸ್ ಠಾಣೆಯಲ್ಲಿ ದೂರು ನೀಡಿಲಾಗಿದೆ. ಈ ಹಿನ್ನೆಲೆ ಪೊಲೀಸರು ಈ ಬಗ್ಗೆ ಸ್ಪೀಕರ್‌ಗೆ ಮಾಹಿತಿ ನೀಡಿದ್ದಾರೆ. ಅಶ್ವತ್ಥ್ ನಾರಾಯಣ್ ಯಾವ ಉದ್ದೇಶದಿಂದ ಈ ಹೇಳಿಕೆ ಕೊಟ್ಟಿದ್ದರು ಎಂಬುದು ತಿಳಿಯಬೇಕಿದೆ. ಅವರ ಮೇಲೆ ಕಠಿಣ ಕ್ರಮವೂ ಆಗಬೇಕು ಎಂದು ಹೇಳಿದರು.

ರಾಜ್ಯಾದ್ಯಂತ ಹಿಂದೆ ಬಿಜೆಪಿ ವಿರುದ್ಧ ನೀಡಿಲಾಗಿರುವ ದೂರಿನ ಕ್ರಮಕ್ಕೆ ಒತ್ತಾಯಿಸುತ್ತೇವೆ. ಹಿಂದೆ ಪೊಲೀಸರು ಬಿಜೆಪಿ ಏಜೆಂಟರಂತೆ ವರ್ತಿಸಿದ್ದರು. ಹೀಗಾಗಿ ದೂರಿನ ಬಗ್ಗೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈಗ ಇಂದು ಸಂಜೆ ವೇಳೆಗೆ ಅಶ್ವತ್ಥ್ ನಾರಾಯಣ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳಬೇಕು. ಸಮಗ್ರವಾದ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

ಅಶ್ವತ್ಥ್  ನಾರಾಯಣ ವಿರುದ್ಧ ಎಫ್​ಐಆರ್

ಕಳೆದ ಫೆಬ್ರವರಿ 14ರಂದು ಮಂಡ್ಯ ಜಿಲ್ಲೆಯ ಸಾತನೂರಿನಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಅಶ್ವತ್ಥ್ ನಾರಾಯಣ್ ಅವರು, ಉರಿಗೌಡ ಮತ್ತು ನಂಜೇಗೌಡರು ಟಿಪ್ಪು ಸುಲ್ತಾನನ್ನು ಹೇಗೆ ಕೊಂದು ಹಾಕಿದರೋ, ಹಾಗೆ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಈ ಸಂಬಂಧ ಇಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು ಮೈಸೂರು ಜಿಲ್ಲಾ ಕಾಂಗ್ರೆಸ್ ನಿಯೋಗದೊಂದಿಗೆ ದೇವರಾಜ ಪೊಲೀಸ್ ಠಾಣೆಗೆ ತೆರಳಿ, ಅಶ್ವತ್ಥನಾರಾಯಣ ವಿರುದ್ಧ ದೂರು ದಾಖಲಿಸಿದ್ದಾರೆ. ಪೊಲೀಸರು ಐಪಿಸಿ ಸೆಕ್ಷನ್ 506, 153 ರಡಿ ಎಫ್ಐಆರ್ ದಾಖಲಿಸಿದ್ದಾರೆ.

ಕಳೆದ ಫೆಬ್ರವರಿಯಲ್ಲೇ ಈ ಸಂಬಂಧ ಕಾಂಗ್ರೆಸ್ ನಾಯಕರು ಅಶ್ವತ್ಥನಾರಾಯಣ್ ವಿರುದ್ಧ ದೂರು ನೀಡಿದ್ದರೂ ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ. ಇದೀಗ ಕಾಂಗ್ರೆಸ್ ಅಧಿಕಾರಕ್ಕೆ ಬಂದ ವಾರದಲ್ಲೇ ಅಶ್ವತ್ಥ್ ನಾರಾಯಣ್ ವಿರುದ್ಧ ದೂರು ದಾಖಲಿಸಲಾಗಿದೆ.

Published On - 12:21 pm, Thu, 25 May 23

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?