AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನಕಪುರ ಬೆಂಗಳೂರಿಗೆ ಸೇರಿಸುವ ವಿಚಾರ: ನನ್ನ ಜೊತೆ ಯಾರೂ ಚರ್ಚಿಸಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ಬಿಜೆಪಿ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ಮಾಡುತ್ತಿರುವುದು ನಿಜ. ಬಿಜೆಪಿಯವರು ಈ ಪ್ರಯತ್ನದಲ್ಲಿ ಸಫಲ ಆಗಲ್ಲ. ಅವರು ಹಗಲುಗನಸು ಕಾಣುತ್ತಿದ್ದಾರೆ. ಒಮ್ಮೆ ಆಪರೇಷನ್ ಕಮಲ ಮಾಡಿ ಸಕ್ಸಸ್ ಆಗಿರಬಹುದು. ಆದರೆ, ಯಾವಾಗಲೂ ಹಾಗೆ ಆಗಲ್ಲ, ವಿಫಲ ಪ್ರಯತ್ನ ಎಂದರು.

ಕನಕಪುರ ಬೆಂಗಳೂರಿಗೆ ಸೇರಿಸುವ ವಿಚಾರ: ನನ್ನ ಜೊತೆ ಯಾರೂ ಚರ್ಚಿಸಿಲ್ಲ ಎಂದ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Oct 28, 2023 | 4:32 PM

Share

ಉಡುಪಿ, ಅ.28: ಕನಕಪುರವನ್ನು ಬೆಂಗಳೂರಿಗೆ ಸೇರಿಸುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​ ಹೇಳಿಕೆ ವಿಚಾರ ‘ ಈ ಬಗ್ಗೆ ನನ್ನ ಜೊತೆ ಯಾರೂ ಚರ್ಚೆ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ(Siddaramaiah) ಅವರು ಹೇಳಿದ್ದಾರೆ. ಉಡುಪಿಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬಂಟ ಸಮಾವೇಶದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಕನಕಪುರ ಸೇರಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ಆಗಿಲ್ಲ ಎಂದರು. ಈ ಹೇಳಿಕೆ ಸಿಎಂ ಹಾಗೂ ಡಿಸಿಎಂ ನಡುವೆ ವೈಮನಸ್ಸು ಇರುವುದು ತೋರುತ್ತಿದೆ.

ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯಿಂದ 50 ಕೋಟಿ ಆಫರ್ ವಿಚಾರವಾಗಿ ಮಾತನಾಡಿದ ಸಿಎಂ ‘ಆ ವಿಚಾರವನ್ನು ರವಿ ಗಾಣಿಗ ಬಳಿಯೇ ಕೇಳಿ, ಬಿಜೆಪಿ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ಮಾಡುತ್ತಿರುವುದು ನಿಜ. ಬಿಜೆಪಿಯವರು ಈ ಪ್ರಯತ್ನದಲ್ಲಿ ಸಫಲ ಆಗಲ್ಲ. ಅವರು ಹಗಲುಗನಸು ಕಾಣುತ್ತಿದ್ದಾರೆ. ಒಮ್ಮೆ ಆಪರೇಷನ್ ಕಮಲ ಮಾಡಿ ಸಕ್ಸಸ್ ಆಗಿರಬಹುದು. ಆದರೆ, ಯಾವಾಗಲೂ ಹಾಗೆ ಆಗಲ್ಲ, ವಿಫಲ ಪ್ರಯತ್ನ ಎಂದರು. ಬಿಜೆಪಿಯವರು ಅಧಿಕಾರಕ್ಕೋಸ್ಕರ ಏನು ಬೇಕಾದರೂ ಮಾಡುತ್ತಾರೆ. ನಮ್ಮ ಪಕ್ಷದ ಒಬ್ಬ ಶಾಸಕನೂ ಅವರ ಆಮಿಷಕ್ಕೆ ಒಳಗಾಗಲ್ಲ ಎಂದರು ಹೇಳಿದರು.

ಇದನ್ನೂ ಓದಿ:ವಿಶ್ವ ಬಂಟರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ, ಅಸೆಂಬ್ಲಿ ಸ್ಪೀಕರ್ ಯುಟಿ ಖಾದರ್ ಉಪಸ್ಥಿತಿ

ಇನ್ನು ವಿಶ್ವ ಬಂಟ ಸಮಾವೇಶದಲ್ಲಿ ಮಾತನಾಡಿದ ಅವರು ‘ ಜಗತ್ತಿನ ಅನೇಕ ಪ್ರದೇಶಗಳಿಗೆ ಬಂಟರು ವಿಸ್ತರಿಸಿದ್ದು, ಉದ್ಯೋಗ ಹಾಗೂ ಉದ್ದಿಮೆ ಅರಸುತ್ತಾ ಸರ್ವವ್ಯಾಪಿಯಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು. ಇಂದು (ಅ.28) ಉಡುಪಿಯಲ್ಲಿ ಹಮ್ಮಿಕೊಂಡಿದ್ದ ವಿಶಿಷ್ಟ ಸಂಸ್ಕೃತಿ ಪರಂಪರೆ ಇರುವ ಸಮುದಾಯ ಬಂಟರದ್ದು, ರಾಜಕೀಯ ಕ್ರೀಡೆ, ಸಿನೆಮಾ ಉದ್ಯಮದಲ್ಲಿ ಬಂಟರ ಛಾಪು ಇದೆ ಎಂದರು.

ತುಳುವರು ಭಾಷೆ ಸಂಸ್ಕೃತಿ ಯನ್ನು ಎಂದಿಗೂ ಬಿಟ್ಟುಕೊಡಲ್ಲ

‘ಎಲ್ಲೇ ಇದ್ದರೂ ತಮ್ಮ ತನವನ್ನು ಮರೆತಿಲ್ಲ. ಗುಂಪಿನಲ್ಲಿ ಇಬ್ಬರು ತುಳುವರು ಸಿಕ್ಕರೆ ತುಳು ಮಾತು ಆರಂಭಿಸುತ್ತೀರಿ. ಭಾಷೆ ಸಂಸ್ಕೃತಿಯನ್ನು ಎಂದಿಗೂ ಬಿಟ್ಟುಕೊಡಲ್ಲ. ಬಂಟರು ಜಾತ್ಯಾತೀತ ಸಮುದಾಯದವರು. ಮನುಷ್ಯ ಮನುಷ್ಯರನ್ನು ದ್ವೇಷ ಮಾಡುವ ಪ್ರವೃತ್ತಿ ಬಿಡಬೇಕು. ಮನುಷ್ಯತ್ವ ಮೊದಲು, ಬದುಕು ಆಮೇಲೆ. ವಿಶ್ವಮಾನವರಾಗುವ ದಾರಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡಿ ಎಂದು ಹೇಳಿದರು.

ಮುಂದಿನ ಬಜೆಟ್ ಮಂಡಿಸುವಾಗ ಬಂಟ ನಿಗಮ ಘೋಷಣೆ ಮಾಡುತ್ತೇನೆ

ಸಮಾವೇಶದಲ್ಲಿ ಬಂಟರ ಅಭಿವೃದ್ಧಿ , ಸಂಘಟನೆ ಬಗ್ಗೆ ಚರ್ಚೆ ಮಾಡಿ. ನಿಮ್ಮ ಸಂಸ್ಕೃತಿ ಬೇರೆಯವರು ಕೂಡ ಅಳವಡಿಸುವಂತಾಗಲಿ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಂಟರ ಅಭಿವೃದ್ಧಿ ನಿಗಮ  ಇತ್ತು. ಮುಂದಿನ ಬಜೆಟ್ ಮಂಡಿಸುವಾಗ ಬಂಟ ನಿಗಮ ಘೋಷಣೆ ಮಾಡುತ್ತೇನೆ. ಬಂಟರ ಸಮ್ಮೇಳನ ಯಶಸ್ವಿಯಾಗಲಿ ಎಂದು ಹಾರೈಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:31 pm, Sat, 28 October 23

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?