Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನಕಪುರ ಬೆಂಗಳೂರಿಗೆ ಸೇರಿಸುವ ವಿಚಾರ: ನನ್ನ ಜೊತೆ ಯಾರೂ ಚರ್ಚಿಸಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ಬಿಜೆಪಿ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ಮಾಡುತ್ತಿರುವುದು ನಿಜ. ಬಿಜೆಪಿಯವರು ಈ ಪ್ರಯತ್ನದಲ್ಲಿ ಸಫಲ ಆಗಲ್ಲ. ಅವರು ಹಗಲುಗನಸು ಕಾಣುತ್ತಿದ್ದಾರೆ. ಒಮ್ಮೆ ಆಪರೇಷನ್ ಕಮಲ ಮಾಡಿ ಸಕ್ಸಸ್ ಆಗಿರಬಹುದು. ಆದರೆ, ಯಾವಾಗಲೂ ಹಾಗೆ ಆಗಲ್ಲ, ವಿಫಲ ಪ್ರಯತ್ನ ಎಂದರು.

ಕನಕಪುರ ಬೆಂಗಳೂರಿಗೆ ಸೇರಿಸುವ ವಿಚಾರ: ನನ್ನ ಜೊತೆ ಯಾರೂ ಚರ್ಚಿಸಿಲ್ಲ ಎಂದ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 28, 2023 | 4:32 PM

ಉಡುಪಿ, ಅ.28: ಕನಕಪುರವನ್ನು ಬೆಂಗಳೂರಿಗೆ ಸೇರಿಸುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​ ಹೇಳಿಕೆ ವಿಚಾರ ‘ ಈ ಬಗ್ಗೆ ನನ್ನ ಜೊತೆ ಯಾರೂ ಚರ್ಚೆ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ(Siddaramaiah) ಅವರು ಹೇಳಿದ್ದಾರೆ. ಉಡುಪಿಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬಂಟ ಸಮಾವೇಶದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಕನಕಪುರ ಸೇರಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ಆಗಿಲ್ಲ ಎಂದರು. ಈ ಹೇಳಿಕೆ ಸಿಎಂ ಹಾಗೂ ಡಿಸಿಎಂ ನಡುವೆ ವೈಮನಸ್ಸು ಇರುವುದು ತೋರುತ್ತಿದೆ.

ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯಿಂದ 50 ಕೋಟಿ ಆಫರ್ ವಿಚಾರವಾಗಿ ಮಾತನಾಡಿದ ಸಿಎಂ ‘ಆ ವಿಚಾರವನ್ನು ರವಿ ಗಾಣಿಗ ಬಳಿಯೇ ಕೇಳಿ, ಬಿಜೆಪಿ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ಮಾಡುತ್ತಿರುವುದು ನಿಜ. ಬಿಜೆಪಿಯವರು ಈ ಪ್ರಯತ್ನದಲ್ಲಿ ಸಫಲ ಆಗಲ್ಲ. ಅವರು ಹಗಲುಗನಸು ಕಾಣುತ್ತಿದ್ದಾರೆ. ಒಮ್ಮೆ ಆಪರೇಷನ್ ಕಮಲ ಮಾಡಿ ಸಕ್ಸಸ್ ಆಗಿರಬಹುದು. ಆದರೆ, ಯಾವಾಗಲೂ ಹಾಗೆ ಆಗಲ್ಲ, ವಿಫಲ ಪ್ರಯತ್ನ ಎಂದರು. ಬಿಜೆಪಿಯವರು ಅಧಿಕಾರಕ್ಕೋಸ್ಕರ ಏನು ಬೇಕಾದರೂ ಮಾಡುತ್ತಾರೆ. ನಮ್ಮ ಪಕ್ಷದ ಒಬ್ಬ ಶಾಸಕನೂ ಅವರ ಆಮಿಷಕ್ಕೆ ಒಳಗಾಗಲ್ಲ ಎಂದರು ಹೇಳಿದರು.

ಇದನ್ನೂ ಓದಿ:ವಿಶ್ವ ಬಂಟರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ, ಅಸೆಂಬ್ಲಿ ಸ್ಪೀಕರ್ ಯುಟಿ ಖಾದರ್ ಉಪಸ್ಥಿತಿ

ಇನ್ನು ವಿಶ್ವ ಬಂಟ ಸಮಾವೇಶದಲ್ಲಿ ಮಾತನಾಡಿದ ಅವರು ‘ ಜಗತ್ತಿನ ಅನೇಕ ಪ್ರದೇಶಗಳಿಗೆ ಬಂಟರು ವಿಸ್ತರಿಸಿದ್ದು, ಉದ್ಯೋಗ ಹಾಗೂ ಉದ್ದಿಮೆ ಅರಸುತ್ತಾ ಸರ್ವವ್ಯಾಪಿಯಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು. ಇಂದು (ಅ.28) ಉಡುಪಿಯಲ್ಲಿ ಹಮ್ಮಿಕೊಂಡಿದ್ದ ವಿಶಿಷ್ಟ ಸಂಸ್ಕೃತಿ ಪರಂಪರೆ ಇರುವ ಸಮುದಾಯ ಬಂಟರದ್ದು, ರಾಜಕೀಯ ಕ್ರೀಡೆ, ಸಿನೆಮಾ ಉದ್ಯಮದಲ್ಲಿ ಬಂಟರ ಛಾಪು ಇದೆ ಎಂದರು.

ತುಳುವರು ಭಾಷೆ ಸಂಸ್ಕೃತಿ ಯನ್ನು ಎಂದಿಗೂ ಬಿಟ್ಟುಕೊಡಲ್ಲ

‘ಎಲ್ಲೇ ಇದ್ದರೂ ತಮ್ಮ ತನವನ್ನು ಮರೆತಿಲ್ಲ. ಗುಂಪಿನಲ್ಲಿ ಇಬ್ಬರು ತುಳುವರು ಸಿಕ್ಕರೆ ತುಳು ಮಾತು ಆರಂಭಿಸುತ್ತೀರಿ. ಭಾಷೆ ಸಂಸ್ಕೃತಿಯನ್ನು ಎಂದಿಗೂ ಬಿಟ್ಟುಕೊಡಲ್ಲ. ಬಂಟರು ಜಾತ್ಯಾತೀತ ಸಮುದಾಯದವರು. ಮನುಷ್ಯ ಮನುಷ್ಯರನ್ನು ದ್ವೇಷ ಮಾಡುವ ಪ್ರವೃತ್ತಿ ಬಿಡಬೇಕು. ಮನುಷ್ಯತ್ವ ಮೊದಲು, ಬದುಕು ಆಮೇಲೆ. ವಿಶ್ವಮಾನವರಾಗುವ ದಾರಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡಿ ಎಂದು ಹೇಳಿದರು.

ಮುಂದಿನ ಬಜೆಟ್ ಮಂಡಿಸುವಾಗ ಬಂಟ ನಿಗಮ ಘೋಷಣೆ ಮಾಡುತ್ತೇನೆ

ಸಮಾವೇಶದಲ್ಲಿ ಬಂಟರ ಅಭಿವೃದ್ಧಿ , ಸಂಘಟನೆ ಬಗ್ಗೆ ಚರ್ಚೆ ಮಾಡಿ. ನಿಮ್ಮ ಸಂಸ್ಕೃತಿ ಬೇರೆಯವರು ಕೂಡ ಅಳವಡಿಸುವಂತಾಗಲಿ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಂಟರ ಅಭಿವೃದ್ಧಿ ನಿಗಮ  ಇತ್ತು. ಮುಂದಿನ ಬಜೆಟ್ ಮಂಡಿಸುವಾಗ ಬಂಟ ನಿಗಮ ಘೋಷಣೆ ಮಾಡುತ್ತೇನೆ. ಬಂಟರ ಸಮ್ಮೇಳನ ಯಶಸ್ವಿಯಾಗಲಿ ಎಂದು ಹಾರೈಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:31 pm, Sat, 28 October 23

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್