AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSSಗೆ ಅಂಕುಶ: ರಾಜ್ಯದಲ್ಲಿ ತಮಿಳುನಾಡು ಮಾಡೆಲ್ ಜಾರಿ​ ಎಂದ ಸಿಎಂ

ರಾಜ್ಯದಲ್ಲಿ RSS ಚಟುವಟಿಕೆಗಳಿಗೆ ಅಂಕುಶಕ್ಕೆ ಆಗ್ರಹಿಸಿ ಸಿಎಂಗೆ ಸಚಿವ ಪ್ರಿಯಾಂಕ್​ ಖರ್ಗೆ ಪತ್ರ ಬರೆದಿರುವ ವಿಚಾರ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಿ ಎಂದು ಸಿಎಸ್​ಗೆ ಸೂಚಿಸಿರೋದಾಗಿ ಸಿಎಂ ಹೇಳಿದ್ದರೆ, ತಾಕತ್ತಿದ್ದರೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ನಿಷೇಧಿಸಿ ನೋಡಿ ಎಂದು ಪರಿಷತ್​ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸವಾಲು ಹಾಕಿದ್ದಾರೆ.

RSSಗೆ ಅಂಕುಶ: ರಾಜ್ಯದಲ್ಲಿ ತಮಿಳುನಾಡು ಮಾಡೆಲ್ ಜಾರಿ​ ಎಂದ ಸಿಎಂ
ಸಿಎಂ ಸಿದ್ದರಾಮಯ್ಯ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Oct 13, 2025 | 2:27 PM

Share

ಬಾಗಲಕೋಟೆ, ಅಕ್ಟೋಬರ್​ 13: ರಾಜ್ಯದಲ್ಲಿ RSS ಚಟುವಟಿಕೆ ನಿಷೇಧ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯಿಸಿದ್ದಾರೆ. ಆ ಬಗ್ಗೆ ಪರಿಶೀಲಿಸಿ ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಅದೇ ರೀತಿ ಕ್ರಮ ಕೈಗೊಳ್ಳಿ ಅಂತಾ ಸಿಎಸ್​ ಗೆ ಸೂಚಿಸಿರೋದಾಗಿ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿಯಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ.

‘RSS ತೆಗೆದರೆ ಬಿಜೆಪಿನೇ ಇರಲ್ಲ’

ರಾಜ್ಯದಲ್ಲಿ RSS ಚಟುವಟಿಕೆ ನಿಷೇಧಿಸುವಂತೆ ಸಿಎಂಗೆ ತಾವು ಪತ್ರ ಬರೆದಿರುವ ವಿಚಾರವನ್ನ ಸಚಿವ ಪ್ರಿಯಾಂಕ್​ ಖರ್ಗೆ ಸಮರ್ಥಿಸಿಕೊಂಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಆರೆಸ್ಸೆಸ್​ ವಿರೋಧಿ. ರಾಷ್ಟ್ರೀಯ ಸವಯಂ ಸೇವಕ ಸಂಘ ರಿಜಿಸ್ಟರ್​ ಆಗಿರುವ ಕಾಪಿ ತೋರಿಸಿ ಎಂದು ಅವಾಲು ಹಾಕಿರುವುದಲ್ಲದೆ, RSS ತೆಗೆದರೆ ಬಿಜೆಪಿನೇ ಇರಲ್ಲ ಎಂದಿದ್ದಾರೆ. ಆರೆಸ್ಸೆಸ್​ ಚಟುವಟಿಕೆಗಳನ್ನ ನಿಮ್ಮ ಮನೆಯಲ್ಲಿ ಮಾಡಿಕೊಳ್ಳಿ ಅಂತಲೂ ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯಲ್ಲೇ ಕಾಂಗ್ರೆಸ್ ಶಾಸಕರ ಒಡೆತನದ ಶಾಲೆಯಲ್ಲಿ ಆರ್​ಎಸ್​ಎಸ್ ಬೈಠಕ್, ಪಥಸಂಚಲನ!

‘ತಾಕತ್​ ಇದ್ದರೆ RSS​ ನಿಷೇಧ ಮಾಡಿ’

ಮತ್ತೊಂದೆಡೆ RSS ವಿಚಾರಕ್ಕೆ ಕೈ ಹಾಕಿರೋ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ನಾಯಕರು ಕೆಂಡ ಕಾರುತ್ತಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ವಿಧಾನ ಪರಿಷತ್​ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ತಾಕತ್​ ಇದ್ದರೆ ಆರೆಸ್ಸೆಸ್​ ನಿಷೇಧ ಮಾಡಿ ನೋಡಿ ಎಂದು ಸವಾಲು ಹಾಕಿದ್ದಾರೆ. ಈ ಹಿಂದೆಯೂ RSS ನಿಷೇಧ ಮಾಡಿ ಬಳಿಕ ವಾಪಸ್ ತೆಗೆದುಕೊಂಡಿದ್ದರು. ಕಲುಷಿತ ಮನಸ್ಸುಗಳ ಮಧ್ಯೆಯೂ RSS ಶತಮಾನೋತ್ಸವ ಆಚರಿಸಿರುವ ಕಾರಣಕ್ಕೆ ಇವರಿಗೆ ಉರಿ ಆರಂಭವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆಯವರಿಗೆ ಪ್ರಿಯಾಂಕ್ ರೀತಿಯ ನಡತೆ ಇಲ್ಲ. RSS​ ವಿರುದ್ಧ ಎಂದೂ ಖರ್ಗೆಯವರು ಮಾತಾಡಿರಲಿಲ್ಲ. ಆದರೆ ಪ್ರಿಯಾಂಕ್ ಖರ್ಗೆಗೆ ಯಾಕೆ ಈ ಹುಚ್ಚುತನ? ಎಂದು ಪ್ರಶ್ನಿಸಿರುವ ಛಲವಾದಿ ನಾರಾಯಣಸ್ವಾಮಿ,ಇದು ಮಲ್ಲಿಕಾರ್ಜುನ ಖರ್ಗೆಯವರಿಗೂ ಅವಮಾನ ಎಂದಿದ್ದಾರೆ. ಬಾಂಬ್ ಹಾಕುವವರು, ಜನರ ಪ್ರಾಣ ತೆಗೆದವರನ್ನು ಪೋಷಣೆ ಮಾಡುವ ಮನಸ್ಥಿತಿ ಕಾಂಗ್ರೆಸ್​ ನವರದ್ದು. ಆದರೆ RSS ಸ್ವಯಂ ಸೇವಕರು ದೇಶ ರಕ್ಷಣೆಗಾಗಿ ತ್ಯಾಗ ಮಾಡುತ್ತಿದ್ದಾರೆ. ನಿಮ್ಮ ಚಪಲ, ಪ್ರಚಾರಕ್ಕಾಗಿ RSS ಬಗ್ಗೆ ಕೇವಲವಾಗಿ ಮಾತಾಡಬೇಡಿ. ಮಾತೆತ್ತಿದರೆ ಅಮೆರಿಕ, ಚೀನಾದ ಅಭಿವೃದ್ಧಿ ಬಗ್ಗೆ ಮಾತಾಡುವ ಇವರಿಗೆ, ತಮ್ಮ ಇಲಾಖೆಯ ಕೆಲಸವನ್ನು ಮಾಡುವ ಯೋಗ್ಯತೆ ಇಲ್ಲ ಎಂದು ಅವರು ಆರೋಪಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್