AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನ ಆಗ್ತಿದೆ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಆಪರೇಷನ್ ಕಮಲ ಬಗ್ಗೆ ನನಗೆ ಗೊತ್ತಿಲ್ಲ, ರವಿ ಗಣಿಗ ಜತೆ ಮಾತನಾಡಿಲ್ಲ. ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನ ಆಗ್ತಿದೆ ಅಂತಾ ಮಾಹಿತಿ ಇತ್ತು. ಆದರೆ ಬಿಜೆಪಿಯವರಿಗೆ ಅದು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನ ಆಗ್ತಿದೆ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
ಸಿಎಂ ಸಿದ್ದರಾಮಯ್ಯ
ಕಿರಣ್​ ಹನಿಯಡ್ಕ
| Edited By: ವಿವೇಕ ಬಿರಾದಾರ|

Updated on:Oct 28, 2023 | 12:12 PM

Share

ಬೆಂಗಳೂರು ಅ.28: ಕಾಂಗ್ರೆಸ್ (Congress), ಜೆಡಿಎಸ್ (JDS)​ ಮೈತ್ರಿ ಸರ್ಕಾರ ತೆಗೆದ ಟೀಂ ಮತ್ತೆ ಕೆಲಸ ಮಾಡುತ್ತಿದೆ. ಬೆಳಗ್ಗೆ ರೆಡಿಯಾಗಿ ಕಾಂಗ್ರೆಸ್ ಶಾಸಕರ‌‌ ಮನೆಗೆ ಹೋಗುತ್ತಾರೆ. ಸ್ಪೆಷಲ್ ಫೈಟ್ ಮಾಡುತ್ತೇವೆ, ಅಮಿತ್ ಶಾ ಅವರನ್ನು ಮೀಟ್ ಮಾಡಿಸುತ್ತೇವೆ. 50 ಕೋಟಿ ರೂಪಾಯಿ ಕೊಡುತ್ತೇವೆ ಅಂತಾ ಹೇಳಿ ಅಮಿಷ ಒಡ್ಡುತ್ತಿದ್ದಾರೆ ಎಂದು ಕಾಂಗ್ರೆಸ್​ ಶಾಸಕ ರವಿ ಗಣಿಗ ಆರೋಪ ಮಾಡಿದ್ದರು. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಾತನಾಡಿ ಆಪರೇಷನ್ ಕಮಲ ಬಗ್ಗೆ ನನಗೆ ಗೊತ್ತಿಲ್ಲ, ರವಿ ಗಣಿಗ ಜತೆ ಮಾತನಾಡಿಲ್ಲ. ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನ ಆಗ್ತಿದೆ ಅಂತಾ ಮಾಹಿತಿ ಇತ್ತು. ಆದರೆ ಬಿಜೆಪಿಯವರಿಗೆ ಅದು ಸಾಧ್ಯವಿಲ್ಲ ಎಂದು ಹೇಳಿದರು.

ಬಿಜೆಪಿಯಿಂದ ಕಾಂಗ್ರೆಸ್​ ಶಾಸಕರಿಗೆ ಹಣದ ಆಫರ್​ ನೀಡಿದ್ದಾರೆಂಬ ವಿಚಾರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಮಾತನಾಡಿ ಇದರ ಹಿಂದೆ ಭಾರಿ ಷಡ್ಯಂತ್ರ ನಡೆದಿದೆ, ಇದ್ಯಾವುದೂ ಫಲ ನೀಡಲ್ಲ. ಪ್ರತಿಯೊಬ್ಬರ ನಡೆ ಕೂಡ ನಮಗೆ ಗೊತ್ತಿದೆ. ಷಡ್ಯಂತ್ರ ನಡೆಸಲು ಕೆಲ ದೊಡ್ಡವರು ಕೂಡ ಪ್ರಯತ್ನ ಮಾಡುತ್ತಿದ್ದಾರೆ. ಅವರ ಯಾವ ಪ್ರಯತ್ನಗಳು ಫಲ ನೀಡಲ್ಲ ಎಂದರು.

ಇದನ್ನೂ ಓದಿ: ಮೈತ್ರಿ ಸರ್ಕಾರ ತೆಗೆದ ಟೀಂ ಮತ್ತೆ ಕೆಲಸ ಮಾಡುತ್ತಿದೆ, ಶೀಘ್ರದಲ್ಲಿ ವಿಡಿಯೋ ಬಿಡುಗಡೆ ಮಾಡುವೆ: ಕೈ ಶಾಸಕ

ಏನಿದು ಆಪರೇಷನ್​​ ಕಮಲ

2018ರ ವಿಧಾನಸಭೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಮೆಜಾರಿಟಿ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಮತ್ತು ಜೆಡಿಎಸ್​ ಸಮಿಶ್ರ ಸರ್ಕಾರ ರಚನೆಯಾಗಿತ್ತು. ಒಂದು ವರ್ಷದ ಬಳಿಕ ಕಾಂಗ್ರೆಸ್​ ಮತ್ತು ಜೆಡಿಎಸ್​​​​​ನ 17 ಶಾಸಕರು ಬಂಡಾಯವೆದ್ದು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಇವರ ಈ ಬಂಡಾಯದ ಹಿಂದೆ ಬಿಜೆಪಿ ನಾಯಕರ ಕೈವಾಡವಿದೆ. ಬಿಜೆಪಿ ಆಪರೇಷನ್​​​ ಕಮಲ ಮಾಡಿದೆ ಎಂದು ಆರೋಪ ಕೇಳಿಬಂದಿತ್ತು. ಸರ್ಕಾರವನ್ನು ಕೆಡವಲು ಬಿಜೆಪಿ ಮಾಡಿದ ಹುನ್ನಾರ ಇದು ಎಂದು ಕಾಂಗ್ರೆಸ್​ ವಾಗ್ದಾಳಿ ಮಾಡಿತ್ತು. ಬಹುಮತ ಇಲ್ಲದ ಕಾರಣ ಸಮಿಶ್ರ ಸರ್ಕಾರ ಬಿತ್ತು, ಬಿಜೆಪಿ ಅಧಿಕಾರದ ಗದ್ದುಗೆ ಏರಿತ್ತು. ಇದೀಗ ಚುನಾವಣೆ ನಡೆದು ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ​​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:00 pm, Sat, 28 October 23

Follow Us
Kiran Haniyadka
Kiran Haniyadka
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ