AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನ ಆಗ್ತಿದೆ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಆಪರೇಷನ್ ಕಮಲ ಬಗ್ಗೆ ನನಗೆ ಗೊತ್ತಿಲ್ಲ, ರವಿ ಗಣಿಗ ಜತೆ ಮಾತನಾಡಿಲ್ಲ. ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನ ಆಗ್ತಿದೆ ಅಂತಾ ಮಾಹಿತಿ ಇತ್ತು. ಆದರೆ ಬಿಜೆಪಿಯವರಿಗೆ ಅದು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನ ಆಗ್ತಿದೆ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
ಸಿಎಂ ಸಿದ್ದರಾಮಯ್ಯ
ಕಿರಣ್​ ಹನಿಯಡ್ಕ
| Edited By: |

Updated on:Oct 28, 2023 | 12:12 PM

Share

ಬೆಂಗಳೂರು ಅ.28: ಕಾಂಗ್ರೆಸ್ (Congress), ಜೆಡಿಎಸ್ (JDS)​ ಮೈತ್ರಿ ಸರ್ಕಾರ ತೆಗೆದ ಟೀಂ ಮತ್ತೆ ಕೆಲಸ ಮಾಡುತ್ತಿದೆ. ಬೆಳಗ್ಗೆ ರೆಡಿಯಾಗಿ ಕಾಂಗ್ರೆಸ್ ಶಾಸಕರ‌‌ ಮನೆಗೆ ಹೋಗುತ್ತಾರೆ. ಸ್ಪೆಷಲ್ ಫೈಟ್ ಮಾಡುತ್ತೇವೆ, ಅಮಿತ್ ಶಾ ಅವರನ್ನು ಮೀಟ್ ಮಾಡಿಸುತ್ತೇವೆ. 50 ಕೋಟಿ ರೂಪಾಯಿ ಕೊಡುತ್ತೇವೆ ಅಂತಾ ಹೇಳಿ ಅಮಿಷ ಒಡ್ಡುತ್ತಿದ್ದಾರೆ ಎಂದು ಕಾಂಗ್ರೆಸ್​ ಶಾಸಕ ರವಿ ಗಣಿಗ ಆರೋಪ ಮಾಡಿದ್ದರು. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಾತನಾಡಿ ಆಪರೇಷನ್ ಕಮಲ ಬಗ್ಗೆ ನನಗೆ ಗೊತ್ತಿಲ್ಲ, ರವಿ ಗಣಿಗ ಜತೆ ಮಾತನಾಡಿಲ್ಲ. ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನ ಆಗ್ತಿದೆ ಅಂತಾ ಮಾಹಿತಿ ಇತ್ತು. ಆದರೆ ಬಿಜೆಪಿಯವರಿಗೆ ಅದು ಸಾಧ್ಯವಿಲ್ಲ ಎಂದು ಹೇಳಿದರು.

ಬಿಜೆಪಿಯಿಂದ ಕಾಂಗ್ರೆಸ್​ ಶಾಸಕರಿಗೆ ಹಣದ ಆಫರ್​ ನೀಡಿದ್ದಾರೆಂಬ ವಿಚಾರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಮಾತನಾಡಿ ಇದರ ಹಿಂದೆ ಭಾರಿ ಷಡ್ಯಂತ್ರ ನಡೆದಿದೆ, ಇದ್ಯಾವುದೂ ಫಲ ನೀಡಲ್ಲ. ಪ್ರತಿಯೊಬ್ಬರ ನಡೆ ಕೂಡ ನಮಗೆ ಗೊತ್ತಿದೆ. ಷಡ್ಯಂತ್ರ ನಡೆಸಲು ಕೆಲ ದೊಡ್ಡವರು ಕೂಡ ಪ್ರಯತ್ನ ಮಾಡುತ್ತಿದ್ದಾರೆ. ಅವರ ಯಾವ ಪ್ರಯತ್ನಗಳು ಫಲ ನೀಡಲ್ಲ ಎಂದರು.

ಇದನ್ನೂ ಓದಿ: ಮೈತ್ರಿ ಸರ್ಕಾರ ತೆಗೆದ ಟೀಂ ಮತ್ತೆ ಕೆಲಸ ಮಾಡುತ್ತಿದೆ, ಶೀಘ್ರದಲ್ಲಿ ವಿಡಿಯೋ ಬಿಡುಗಡೆ ಮಾಡುವೆ: ಕೈ ಶಾಸಕ

ಏನಿದು ಆಪರೇಷನ್​​ ಕಮಲ

2018ರ ವಿಧಾನಸಭೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಮೆಜಾರಿಟಿ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಮತ್ತು ಜೆಡಿಎಸ್​ ಸಮಿಶ್ರ ಸರ್ಕಾರ ರಚನೆಯಾಗಿತ್ತು. ಒಂದು ವರ್ಷದ ಬಳಿಕ ಕಾಂಗ್ರೆಸ್​ ಮತ್ತು ಜೆಡಿಎಸ್​​​​​ನ 17 ಶಾಸಕರು ಬಂಡಾಯವೆದ್ದು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಇವರ ಈ ಬಂಡಾಯದ ಹಿಂದೆ ಬಿಜೆಪಿ ನಾಯಕರ ಕೈವಾಡವಿದೆ. ಬಿಜೆಪಿ ಆಪರೇಷನ್​​​ ಕಮಲ ಮಾಡಿದೆ ಎಂದು ಆರೋಪ ಕೇಳಿಬಂದಿತ್ತು. ಸರ್ಕಾರವನ್ನು ಕೆಡವಲು ಬಿಜೆಪಿ ಮಾಡಿದ ಹುನ್ನಾರ ಇದು ಎಂದು ಕಾಂಗ್ರೆಸ್​ ವಾಗ್ದಾಳಿ ಮಾಡಿತ್ತು. ಬಹುಮತ ಇಲ್ಲದ ಕಾರಣ ಸಮಿಶ್ರ ಸರ್ಕಾರ ಬಿತ್ತು, ಬಿಜೆಪಿ ಅಧಿಕಾರದ ಗದ್ದುಗೆ ಏರಿತ್ತು. ಇದೀಗ ಚುನಾವಣೆ ನಡೆದು ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ​​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:00 pm, Sat, 28 October 23

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ