AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನ ಆಗ್ತಿದೆ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಆಪರೇಷನ್ ಕಮಲ ಬಗ್ಗೆ ನನಗೆ ಗೊತ್ತಿಲ್ಲ, ರವಿ ಗಣಿಗ ಜತೆ ಮಾತನಾಡಿಲ್ಲ. ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನ ಆಗ್ತಿದೆ ಅಂತಾ ಮಾಹಿತಿ ಇತ್ತು. ಆದರೆ ಬಿಜೆಪಿಯವರಿಗೆ ಅದು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನ ಆಗ್ತಿದೆ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
ಸಿಎಂ ಸಿದ್ದರಾಮಯ್ಯ
ಕಿರಣ್​ ಹನಿಯಡ್ಕ
| Edited By: |

Updated on:Oct 28, 2023 | 12:12 PM

Share

ಬೆಂಗಳೂರು ಅ.28: ಕಾಂಗ್ರೆಸ್ (Congress), ಜೆಡಿಎಸ್ (JDS)​ ಮೈತ್ರಿ ಸರ್ಕಾರ ತೆಗೆದ ಟೀಂ ಮತ್ತೆ ಕೆಲಸ ಮಾಡುತ್ತಿದೆ. ಬೆಳಗ್ಗೆ ರೆಡಿಯಾಗಿ ಕಾಂಗ್ರೆಸ್ ಶಾಸಕರ‌‌ ಮನೆಗೆ ಹೋಗುತ್ತಾರೆ. ಸ್ಪೆಷಲ್ ಫೈಟ್ ಮಾಡುತ್ತೇವೆ, ಅಮಿತ್ ಶಾ ಅವರನ್ನು ಮೀಟ್ ಮಾಡಿಸುತ್ತೇವೆ. 50 ಕೋಟಿ ರೂಪಾಯಿ ಕೊಡುತ್ತೇವೆ ಅಂತಾ ಹೇಳಿ ಅಮಿಷ ಒಡ್ಡುತ್ತಿದ್ದಾರೆ ಎಂದು ಕಾಂಗ್ರೆಸ್​ ಶಾಸಕ ರವಿ ಗಣಿಗ ಆರೋಪ ಮಾಡಿದ್ದರು. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಾತನಾಡಿ ಆಪರೇಷನ್ ಕಮಲ ಬಗ್ಗೆ ನನಗೆ ಗೊತ್ತಿಲ್ಲ, ರವಿ ಗಣಿಗ ಜತೆ ಮಾತನಾಡಿಲ್ಲ. ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನ ಆಗ್ತಿದೆ ಅಂತಾ ಮಾಹಿತಿ ಇತ್ತು. ಆದರೆ ಬಿಜೆಪಿಯವರಿಗೆ ಅದು ಸಾಧ್ಯವಿಲ್ಲ ಎಂದು ಹೇಳಿದರು.

ಬಿಜೆಪಿಯಿಂದ ಕಾಂಗ್ರೆಸ್​ ಶಾಸಕರಿಗೆ ಹಣದ ಆಫರ್​ ನೀಡಿದ್ದಾರೆಂಬ ವಿಚಾರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಮಾತನಾಡಿ ಇದರ ಹಿಂದೆ ಭಾರಿ ಷಡ್ಯಂತ್ರ ನಡೆದಿದೆ, ಇದ್ಯಾವುದೂ ಫಲ ನೀಡಲ್ಲ. ಪ್ರತಿಯೊಬ್ಬರ ನಡೆ ಕೂಡ ನಮಗೆ ಗೊತ್ತಿದೆ. ಷಡ್ಯಂತ್ರ ನಡೆಸಲು ಕೆಲ ದೊಡ್ಡವರು ಕೂಡ ಪ್ರಯತ್ನ ಮಾಡುತ್ತಿದ್ದಾರೆ. ಅವರ ಯಾವ ಪ್ರಯತ್ನಗಳು ಫಲ ನೀಡಲ್ಲ ಎಂದರು.

ಇದನ್ನೂ ಓದಿ: ಮೈತ್ರಿ ಸರ್ಕಾರ ತೆಗೆದ ಟೀಂ ಮತ್ತೆ ಕೆಲಸ ಮಾಡುತ್ತಿದೆ, ಶೀಘ್ರದಲ್ಲಿ ವಿಡಿಯೋ ಬಿಡುಗಡೆ ಮಾಡುವೆ: ಕೈ ಶಾಸಕ

ಏನಿದು ಆಪರೇಷನ್​​ ಕಮಲ

2018ರ ವಿಧಾನಸಭೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಮೆಜಾರಿಟಿ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಮತ್ತು ಜೆಡಿಎಸ್​ ಸಮಿಶ್ರ ಸರ್ಕಾರ ರಚನೆಯಾಗಿತ್ತು. ಒಂದು ವರ್ಷದ ಬಳಿಕ ಕಾಂಗ್ರೆಸ್​ ಮತ್ತು ಜೆಡಿಎಸ್​​​​​ನ 17 ಶಾಸಕರು ಬಂಡಾಯವೆದ್ದು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಇವರ ಈ ಬಂಡಾಯದ ಹಿಂದೆ ಬಿಜೆಪಿ ನಾಯಕರ ಕೈವಾಡವಿದೆ. ಬಿಜೆಪಿ ಆಪರೇಷನ್​​​ ಕಮಲ ಮಾಡಿದೆ ಎಂದು ಆರೋಪ ಕೇಳಿಬಂದಿತ್ತು. ಸರ್ಕಾರವನ್ನು ಕೆಡವಲು ಬಿಜೆಪಿ ಮಾಡಿದ ಹುನ್ನಾರ ಇದು ಎಂದು ಕಾಂಗ್ರೆಸ್​ ವಾಗ್ದಾಳಿ ಮಾಡಿತ್ತು. ಬಹುಮತ ಇಲ್ಲದ ಕಾರಣ ಸಮಿಶ್ರ ಸರ್ಕಾರ ಬಿತ್ತು, ಬಿಜೆಪಿ ಅಧಿಕಾರದ ಗದ್ದುಗೆ ಏರಿತ್ತು. ಇದೀಗ ಚುನಾವಣೆ ನಡೆದು ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ​​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:00 pm, Sat, 28 October 23

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು