AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಪ್ಪಾಗಿದೆ ಪಶ್ಚಾತ್ತಾಪ ಪಟ್ಟಿದ್ದೇನೆ ಅಂದ್ರೆ ಶಿಕ್ಷೆ ಆದಂತೆಯೇ? ಕುಮಾರಸ್ವಾಮಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಕುಮಾರಸ್ವಾಮಿ ಅವರ ಹೇಳಿಕೆಗಳಿಗೆ ಉತ್ತರವನ್ನೇ ಕೊಡಲ್ಲ. ಯಾಕೆಂದರೆ ಅವರು ಬರೀ ಸುಳ್ಳೇ ಹೇಳ್ತಾರೆ. ಅವರ ಸುಳ್ಳುಗಳಿಗೆಲ್ಲ ನಾನು ಉತ್ತರ ಕೊಡಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ತಪ್ಪಾಗಿದೆ ಪಶ್ಚಾತ್ತಾಪ ಪಟ್ಟಿದ್ದೇನೆ ಅಂದ್ರೆ ಶಿಕ್ಷೆ ಆದಂತೆಯೇ? ಕುಮಾರಸ್ವಾಮಿ ವಿರುದ್ಧ ಸಿದ್ದರಾಮಯ್ಯ ಕಿಡಿ
ಸಿದ್ದರಾಮಯ್ಯ
TV9 Web
| Updated By: Ganapathi Sharma|

Updated on:Nov 15, 2023 | 2:54 PM

Share

ಬೆಂಗಳೂರು, ನವೆಂಬರ್ 15: ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರ ನಿವಾಸದ ದೀಪಾಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಪಡೆದ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ (Siddaramaiah) ಟೀಕಾ ಪ್ರಹಾರ ನಡೆಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ತಪ್ಪು ಮಾಡಿರುವ ಕಾರಣ ಹೆಚ್​ಡಿಕೆ ವಿರುದ್ಧ ಎಫ್​ಐಆರ್ ದಾಖಲಾಗಿದೆ. ತಪ್ಪು ಆಗಿದೆ ನನಗೆ ಪಶ್ಚಾತ್ತಾಪ ಆಗಿದೆ ಎಂದರೆ ಅದು ಶಿಕ್ಷೆಯಾಗುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.

ಕುಮಾರಸ್ವಾಮಿ ಅವರ ಹೇಳಿಕೆಗಳಿಗೆ ಉತ್ತರವನ್ನೇ ಕೊಡಲ್ಲ. ಯಾಕೆಂದರೆ ಅವರು ಬರೀ ಸುಳ್ಳೇ ಹೇಳ್ತಾರೆ. ಅವರ ಸುಳ್ಳುಗಳಿಗೆಲ್ಲ ನಾನು ಉತ್ತರ ಕೊಡಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಜೆಡಿಎಸ್​ ಪಾರ್ಟಿಯೇ ಅಲ್ಲ, ಅದು ದೇವೇಗೌಡ & ಫ್ಯಾಮಿಲಿ ಪಾರ್ಟಿ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ನಿವಾಸದ ದೀಪಾಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಪಡೆದ ವಿಚಾರವಾಗಿ ಕುಮಾರಸ್ವಾಮಿ ವಿರುದ್ಧ ಮಂಗಳವಾರ ಎಫ್​ಐಆರ್ ದಾಖಲಾಗಿತ್ತು. ಈ ಪ್ರಕರಣ ರಾಜ್ಯದಲ್ಲಿ ಭಾರೀ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇದೆ.

ಇದನ್ನೂ ಓದಿ: ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮಕ್ಕೆ ಎಸ್​​ಟಿ ಸೋಮಶೇಖರ್ ಗೈರಾಗಿದ್ದೇಕೆ? ಕಾರಣ ಕೊಟ್ಟ ಶಾಸಕ

ಈ ಮಧ್ಯೆ, ಪ್ರಕರಣಕ್ಕೆ ಸಂಬಂಧಿಸಿ ಸ್ಪಷ್ಟನೆ ನೀಡಿದ್ದ ಕುಮಾರಸ್ವಾಮಿ, ತಮ್ಮ ಗಮನಕ್ಕೆ ಬಾರದೆ ಆ ರೀತಿ ನಡೆದಿದೆ. ಬೆಸ್ಕಾಂ ಅಧಿಕಾರಿಗಳು ಬಂದು ತನಿಖೆ ನಡೆಸಲಿ. ಸಂಪೂರ್ಣ ಸಹಕಾರ ನೀಡುವೆ. ಬೆಸ್ಕಾಂ ವಿಧಿಸುವ ದಂಡವನ್ನೂ ಪಾವತಿಸುವೆ ಎಂದು ಹೇಳಿದ್ದರು.

ಇನ್ನು ಜೆಡಿಎಸ್ ಕಚೇರಿಯ ಗೋಡೆ ಮೇಲೆ ವಿದ್ಯುತ್ ಕಳ್ಳ ಕುಮಾರಸ್ವಾಮಿ ಎಂಬ ಭಿತ್ತಿಪತ್ರಗಳನ್ನು ಮಂಗಳವಾರ ರಾತ್ರಿ ಅಂಟಿಸಿರುವುದು ವಿವಾದ ಮತ್ತಷ್ಟು ಕಾವು ಪಡೆಯುವಂತೆ ಮಾಡಿತ್ತು.

ಇನ್ನಷ್ಟು ರಾಜಕೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 2:53 pm, Wed, 15 November 23