AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳೆದ 10 ವರ್ಷಗಳ ಪ್ರಧಾನಿ ಮೋದಿ ಆಡಳಿತವನ್ನು ‘ವಿನಾಶ ಕಾಲ‘ ಎಂದ ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್​ನಲ್ಲಿ ‘ಹತ್ತು ವರ್ಷಗಳ ಅನ್ಯಾಯ ಕಾಲ’ ಎಂಬ ಪೋಸ್ಟ್​ ಹಂಚಿಕೊಳ್ಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಹತ್ತು ವರ್ಷಗಲ ಆಡಳಿತವನ್ನು ಟೀಕಿಸಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ಮೋದಿ ಮತ್ತು ಇತರೆ ಬಿಜೆಪಿ ನಾಯಕರು ಬಿಜೆಪಿಯ ಆಡಳಿತವನ್ನು 'ಅಮೃತ ಕಾಲ' ಎಂದು ಬಣ್ಣಿಸುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಇದು ‘ವಿನಾಶ ಕಾಲ’ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಕಳೆದ 10 ವರ್ಷಗಳ ಪ್ರಧಾನಿ ಮೋದಿ ಆಡಳಿತವನ್ನು ‘ವಿನಾಶ ಕಾಲ‘ ಎಂದ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ ಹಂಚಿಕೊಂಡ ಪೋಸ್ಟ್
ಗಂಗಾಧರ​ ಬ. ಸಾಬೋಜಿ
|

Updated on:Feb 10, 2024 | 9:14 PM

Share

ಬೆಂಗಳೂರು, ಫೆಬ್ರವರಿ 10: ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರೆ ಬಿಜೆಪಿ ನಾಯಕರು ಬಿಜೆಪಿಯ ಆಡಳಿತವನ್ನು ‘ಅಮೃತ ಕಾಲ’ ಎಂದು ಬಣ್ಣಿಸುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಅದು ‘ವಿನಾಶ ಕಾಲ’ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ಮಾಡಿದ್ದಾರೆ. ಈ ಕುರಿಯಾಗಿ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್​ನಲ್ಲಿ ‘ಹತ್ತು ವರ್ಷಗಳ ಅನ್ಯಾಯ ಕಾಲ’ ಎಂಬ ಪೋಸ್ಟ್​ ಹಂಚಿಕೊಂಡಿದ್ದು,​ ಕಳೆದ 10 ವರ್ಷಗಳು ದೇಶದ ರೈತರು, ಕಾರ್ಮಿಕರು, ಮಹಿಳೆಯರು, ಯುವಜನರು, ಶೋಷಿತರು ಮತ್ತು ಜನಸಾಮಾನ್ಯರ ಪಾಲಿಗೆ ಅನ್ಯಾಯದ ಕಾಲ. ಜನರ ಸಮಸ್ಯೆಗಳ ಬಗ್ಗೆ ಮಾತನಾಡಬೇಕಾದ ಪ್ರಧಾನಿಗಳು ಮೂಕರಾಗಿದ್ದಾರೆ, ಕಷ್ಟ ಕೇಳಬೇಕಾದ ಕೇಂದ್ರದ ಸಚಿವರುಗಳು ಕಿವುಡರಾಗಿದ್ದಾರೆ. ನರೇಂದ್ರ ಮೋದಿ ಅವರ ಉದ್ಯಮಮಿತ್ರರು ಜಾಗತಿಕ ಶ್ರೀಮಂತರ ಪಟ್ಟಿಯಲ್ಲಿ ಶರವೇಗದಲ್ಲಿ ಮುಂದಕ್ಕೆ ಹೋಗುತ್ತಿದ್ದರೆ, ಈ ದೇಶದ ಜನಸಾಮಾನ್ಯ ಕೇಂದ್ರ ಸರ್ಕಾರದ ದುರಾಡಳಿತ, ವೈಫಲ್ಯಗಳ ಭಾರ ಹೊತ್ತು ಕುಸಿದು ಬಿದ್ದಿದ್ದಾನೆ ಎಂದು ಕಿಡಿಕಾರಿದ್ದಾರೆ.

ಪ್ರಧಾನಿ ಮೋದಿಯವರು ನೀಡಿದ ಒಂದೇ ಒಂದು ಭರವಸೆಯನ್ನು ಇದುವರೆಗೆ ಸಂಪೂರ್ಣವಾಗಿ ಈಡೇರಿಸಿಲ್ಲ. ರೈತರ ಆದಾಯ ದ್ವಿಗುಣಗೊಳಿಸುವುದು, ಯುವಕರಿಗೆ ವಾರ್ಷಿಕ 2 ಕೋಟಿ ಉದ್ಯೋಗ, ಮಹಿಳೆಯರಿಗೆ ರಕ್ಷಣೆ, ಕಾರ್ಮಿಕರಿಗೆ ಉದ್ಯೋಗ ಭದ್ರತೆ, ಶೋಷಿತ ಸಮುದಾಯಗಳ ರಕ್ಷಣೆ.

ಇದನ್ನೂ ಓದಿ: ಮೋದಿಯವರ ನಾಯಕತ್ವದಲ್ಲಿ ಇದು ಅತ್ಯಂತ ಯಶಸ್ವಿ ಅಧಿಕಾರಾವಧಿ: ಪ್ರಲ್ಹಾದ್ ಜೋಶಿ

ಕೈಗೆಟಕುವ ಬೆಲೆಯಲ್ಲಿ ಅಗತ್ಯ ವಸ್ತುಗಳನ್ನು ಒದಗಿಸುವುದು ಮುಂತಾದ ವರ್ಣರಂಜಿತ ಭರವಸೆಗಳು ಮೋದಿಯವರು ಚುನಾವಣೆಯಲ್ಲಿ ಗೆಲ್ಲಿಸಿತ್ತು. ಆದರೆ ಗೆದ್ದ ನಂತರ ಜನರಿಗೆ ನೀಡಿದ ಭರವಸೆಗಳನ್ನು ಮರೆತು ದೇವರು, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಿ ಕೈಗಾರಿಕೋದ್ಯಮಿಗಳ ಓಲೈಕೆಯಲ್ಲಿ ಮಗ್ನರಾಗಿದ್ದಾರೆ.

ಪ್ರಧಾನಿ ಮೋದಿ ಆಡಳಿತ ಕುರಿತಾಗಿ ಸಿಎಂ ಸಿದ್ದರಾಮಯ್ಯ ಟ್ವೀಟ್​ 

ನರೇಂದ್ರ ಮೋದಿಯವರು ಕಳೆದ ಹತ್ತು ವರ್ಷಗಳ ಅನ್ಯಾಯದ ವಿವರಗಳನ್ನು ದತ್ತಾಂಶ ಸಹಿತ ಕರ್ನಾಟಕದ ಜನತೆಯ ಮುಂದೆ ಇಡುತ್ತಿದ್ದೇನೆ. ಅಮೃತ ಕಾಲೋ ಅಥವಾ ವಿನಾಶ ಕಾಲವೋ ಎಂದು ಜನ ನಿರ್ಧರಿಸಲಿ ಎಂದು ಹೇಳಿದ್ದಾರೆ.

ಕಾರ್ಮಿಕರಿಗೆ ಕಾಲ್ನಡಿಗೆಯ ಅನ್ಯಾಯ

ಕಾರ್ಮಿಕರಿಗೆ, ನೌಕರರಿಗೆ ಉದ್ಯೋಗ ಭದ್ರತೆ ಕೊಡುವ ಬದಲು ಗುತ್ತಿಗೆ ಆಧಾರದ ಅಭದ್ರ ಉದ್ಯೋಗ ಸೃಷ್ಟಿಸಲಾಗುತ್ತಿದೆ. ಸೂಕ್ತ ಮುನ್ನೋಟವಿಲ್ಲದ ದಿಢೀರ್​ ಲಾಕ್​ಡೌನ್​ ಘೋಷಣೆಯಿಂದ 4 ಕೋಟಿ ವಲಸಿಗ ಕಾರ್ಮಿಕರು ಕುಟುಂಬ ಸಮೇತ ಕಾಲ್ನಡಿಗೆಯಿಂದ ಪರದಾಡಬೇಕಾಯಿತು.

ಇದನ್ನೂ ಓದಿ: ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಸುಳಿವು ನೀಡಿದ ಜಗದೀಶ್ ಶೆಟ್ಟರ್​: ಕ್ಷೇತ್ರ ಯಾವುದು ಗೊತ್ತಾ?

ಕೋಟ್ಯಧಿಪತಿ ಉದ್ದಿಮೆದಾರರಿಗಷ್ಟೇ ನೆರವು ನೀಡಿದ ಸರ್ಕಾರ, ಕಾರ್ಮಿಕರು ಮತ್ತು ಸಣ್ಣ ಉದ್ದಿಮೆದಾರರಿಗೆ ಆತ್ಮನಿರ್ಭರತೆಯ ಉಪದೇಶವನ್ನಷ್ಟೇ ನೀಡಿತು ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:03 pm, Sat, 10 February 24

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ