AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳೆದ 10 ವರ್ಷಗಳ ಪ್ರಧಾನಿ ಮೋದಿ ಆಡಳಿತವನ್ನು ‘ವಿನಾಶ ಕಾಲ‘ ಎಂದ ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್​ನಲ್ಲಿ ‘ಹತ್ತು ವರ್ಷಗಳ ಅನ್ಯಾಯ ಕಾಲ’ ಎಂಬ ಪೋಸ್ಟ್​ ಹಂಚಿಕೊಳ್ಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಹತ್ತು ವರ್ಷಗಲ ಆಡಳಿತವನ್ನು ಟೀಕಿಸಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ಮೋದಿ ಮತ್ತು ಇತರೆ ಬಿಜೆಪಿ ನಾಯಕರು ಬಿಜೆಪಿಯ ಆಡಳಿತವನ್ನು 'ಅಮೃತ ಕಾಲ' ಎಂದು ಬಣ್ಣಿಸುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಇದು ‘ವಿನಾಶ ಕಾಲ’ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಕಳೆದ 10 ವರ್ಷಗಳ ಪ್ರಧಾನಿ ಮೋದಿ ಆಡಳಿತವನ್ನು ‘ವಿನಾಶ ಕಾಲ‘ ಎಂದ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ ಹಂಚಿಕೊಂಡ ಪೋಸ್ಟ್
ಗಂಗಾಧರ​ ಬ. ಸಾಬೋಜಿ
|

Updated on:Feb 10, 2024 | 9:14 PM

Share

ಬೆಂಗಳೂರು, ಫೆಬ್ರವರಿ 10: ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರೆ ಬಿಜೆಪಿ ನಾಯಕರು ಬಿಜೆಪಿಯ ಆಡಳಿತವನ್ನು ‘ಅಮೃತ ಕಾಲ’ ಎಂದು ಬಣ್ಣಿಸುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಅದು ‘ವಿನಾಶ ಕಾಲ’ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ಮಾಡಿದ್ದಾರೆ. ಈ ಕುರಿಯಾಗಿ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್​ನಲ್ಲಿ ‘ಹತ್ತು ವರ್ಷಗಳ ಅನ್ಯಾಯ ಕಾಲ’ ಎಂಬ ಪೋಸ್ಟ್​ ಹಂಚಿಕೊಂಡಿದ್ದು,​ ಕಳೆದ 10 ವರ್ಷಗಳು ದೇಶದ ರೈತರು, ಕಾರ್ಮಿಕರು, ಮಹಿಳೆಯರು, ಯುವಜನರು, ಶೋಷಿತರು ಮತ್ತು ಜನಸಾಮಾನ್ಯರ ಪಾಲಿಗೆ ಅನ್ಯಾಯದ ಕಾಲ. ಜನರ ಸಮಸ್ಯೆಗಳ ಬಗ್ಗೆ ಮಾತನಾಡಬೇಕಾದ ಪ್ರಧಾನಿಗಳು ಮೂಕರಾಗಿದ್ದಾರೆ, ಕಷ್ಟ ಕೇಳಬೇಕಾದ ಕೇಂದ್ರದ ಸಚಿವರುಗಳು ಕಿವುಡರಾಗಿದ್ದಾರೆ. ನರೇಂದ್ರ ಮೋದಿ ಅವರ ಉದ್ಯಮಮಿತ್ರರು ಜಾಗತಿಕ ಶ್ರೀಮಂತರ ಪಟ್ಟಿಯಲ್ಲಿ ಶರವೇಗದಲ್ಲಿ ಮುಂದಕ್ಕೆ ಹೋಗುತ್ತಿದ್ದರೆ, ಈ ದೇಶದ ಜನಸಾಮಾನ್ಯ ಕೇಂದ್ರ ಸರ್ಕಾರದ ದುರಾಡಳಿತ, ವೈಫಲ್ಯಗಳ ಭಾರ ಹೊತ್ತು ಕುಸಿದು ಬಿದ್ದಿದ್ದಾನೆ ಎಂದು ಕಿಡಿಕಾರಿದ್ದಾರೆ.

ಪ್ರಧಾನಿ ಮೋದಿಯವರು ನೀಡಿದ ಒಂದೇ ಒಂದು ಭರವಸೆಯನ್ನು ಇದುವರೆಗೆ ಸಂಪೂರ್ಣವಾಗಿ ಈಡೇರಿಸಿಲ್ಲ. ರೈತರ ಆದಾಯ ದ್ವಿಗುಣಗೊಳಿಸುವುದು, ಯುವಕರಿಗೆ ವಾರ್ಷಿಕ 2 ಕೋಟಿ ಉದ್ಯೋಗ, ಮಹಿಳೆಯರಿಗೆ ರಕ್ಷಣೆ, ಕಾರ್ಮಿಕರಿಗೆ ಉದ್ಯೋಗ ಭದ್ರತೆ, ಶೋಷಿತ ಸಮುದಾಯಗಳ ರಕ್ಷಣೆ.

ಇದನ್ನೂ ಓದಿ: ಮೋದಿಯವರ ನಾಯಕತ್ವದಲ್ಲಿ ಇದು ಅತ್ಯಂತ ಯಶಸ್ವಿ ಅಧಿಕಾರಾವಧಿ: ಪ್ರಲ್ಹಾದ್ ಜೋಶಿ

ಕೈಗೆಟಕುವ ಬೆಲೆಯಲ್ಲಿ ಅಗತ್ಯ ವಸ್ತುಗಳನ್ನು ಒದಗಿಸುವುದು ಮುಂತಾದ ವರ್ಣರಂಜಿತ ಭರವಸೆಗಳು ಮೋದಿಯವರು ಚುನಾವಣೆಯಲ್ಲಿ ಗೆಲ್ಲಿಸಿತ್ತು. ಆದರೆ ಗೆದ್ದ ನಂತರ ಜನರಿಗೆ ನೀಡಿದ ಭರವಸೆಗಳನ್ನು ಮರೆತು ದೇವರು, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಿ ಕೈಗಾರಿಕೋದ್ಯಮಿಗಳ ಓಲೈಕೆಯಲ್ಲಿ ಮಗ್ನರಾಗಿದ್ದಾರೆ.

ಪ್ರಧಾನಿ ಮೋದಿ ಆಡಳಿತ ಕುರಿತಾಗಿ ಸಿಎಂ ಸಿದ್ದರಾಮಯ್ಯ ಟ್ವೀಟ್​ 

ನರೇಂದ್ರ ಮೋದಿಯವರು ಕಳೆದ ಹತ್ತು ವರ್ಷಗಳ ಅನ್ಯಾಯದ ವಿವರಗಳನ್ನು ದತ್ತಾಂಶ ಸಹಿತ ಕರ್ನಾಟಕದ ಜನತೆಯ ಮುಂದೆ ಇಡುತ್ತಿದ್ದೇನೆ. ಅಮೃತ ಕಾಲೋ ಅಥವಾ ವಿನಾಶ ಕಾಲವೋ ಎಂದು ಜನ ನಿರ್ಧರಿಸಲಿ ಎಂದು ಹೇಳಿದ್ದಾರೆ.

ಕಾರ್ಮಿಕರಿಗೆ ಕಾಲ್ನಡಿಗೆಯ ಅನ್ಯಾಯ

ಕಾರ್ಮಿಕರಿಗೆ, ನೌಕರರಿಗೆ ಉದ್ಯೋಗ ಭದ್ರತೆ ಕೊಡುವ ಬದಲು ಗುತ್ತಿಗೆ ಆಧಾರದ ಅಭದ್ರ ಉದ್ಯೋಗ ಸೃಷ್ಟಿಸಲಾಗುತ್ತಿದೆ. ಸೂಕ್ತ ಮುನ್ನೋಟವಿಲ್ಲದ ದಿಢೀರ್​ ಲಾಕ್​ಡೌನ್​ ಘೋಷಣೆಯಿಂದ 4 ಕೋಟಿ ವಲಸಿಗ ಕಾರ್ಮಿಕರು ಕುಟುಂಬ ಸಮೇತ ಕಾಲ್ನಡಿಗೆಯಿಂದ ಪರದಾಡಬೇಕಾಯಿತು.

ಇದನ್ನೂ ಓದಿ: ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಸುಳಿವು ನೀಡಿದ ಜಗದೀಶ್ ಶೆಟ್ಟರ್​: ಕ್ಷೇತ್ರ ಯಾವುದು ಗೊತ್ತಾ?

ಕೋಟ್ಯಧಿಪತಿ ಉದ್ದಿಮೆದಾರರಿಗಷ್ಟೇ ನೆರವು ನೀಡಿದ ಸರ್ಕಾರ, ಕಾರ್ಮಿಕರು ಮತ್ತು ಸಣ್ಣ ಉದ್ದಿಮೆದಾರರಿಗೆ ಆತ್ಮನಿರ್ಭರತೆಯ ಉಪದೇಶವನ್ನಷ್ಟೇ ನೀಡಿತು ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:03 pm, Sat, 10 February 24

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ