AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಅಭ್ಯರ್ಥಿಯಾಗಿ ಖರ್ಗೆ ಹೆಸರು ಪ್ರಸ್ತಾಪ: ಅಭಿಪ್ರಾಯ ತಿಳಿಸಲು ಸಿದ್ದರಾಮಯ್ಯ ಹಿಂದೇಟು

ಇಂಡಿಯಾ ಮೈತ್ರಿಕೂಟ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿಸುವಂತೆ ಮಮತಾ ಬ್ಯಾನರ್ಜಿ ಅಭಿಪ್ರಾಯ ವ್ಯಕ್ತಪಡಿಸಿದ್ದು, ಇದಕ್ಕೆ ಅರವಿಂದ್ ಕೇಜ್ರಿವಾಲ್ ಬೆಂಬಲಿಸಿದ್ದಾರೆ. ಇನ್ನು ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಭಿಪ್ರಾಯ ತಿಳಿಸಲು ಹಿಂದೇಟು ಹಾಕಿರುವ ಪ್ರಸಂಗ ನಡೆದಿದೆ.

ಪ್ರಧಾನಿ ಅಭ್ಯರ್ಥಿಯಾಗಿ ಖರ್ಗೆ ಹೆಸರು ಪ್ರಸ್ತಾಪ: ಅಭಿಪ್ರಾಯ ತಿಳಿಸಲು ಸಿದ್ದರಾಮಯ್ಯ ಹಿಂದೇಟು
ಸಿದ್ದರಾಮಯ್ಯ-ಖರ್ಗೆ
ರಾಮ್​, ಮೈಸೂರು
| Edited By: |

Updated on:Dec 22, 2023 | 4:13 PM

Share

ಮೈಸೂರು, (ಡಿಸೆಂಬರ್ 22): ಮುಂದಿನ ಲೋಕಸಭೆ ಚುನಾವಣೆಯಲ್ಲಿ ಎಸಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು (Mallikarjun Kharge) ಪ್ರಧಾನಿ ಅಭ್ಯರ್ಥಿಯನ್ನಾಗಿ ಮಾಡಬೇಕೆನ್ನುವ ಕೂಗು ಇಂಡಿಯಾ ಮೈತ್ರಿಕೂಟದಲ್ಲಿ ಕೇಳಿಬಂದಿದೆ. ಇತ್ತೀಚೆಗೆ ನಡೆದ ಇಂಡಿಯಾ ಮೈತ್ರಿಕೂಟ ಸಭೆಯಲ್ಲಿ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿಸುವಂತೆ ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದ್ರೆ, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ತಮ್ಮ ಅಭಿಪ್ರಾಯ ತಿಳಿಸಲು ಹಿಂದೇಟು ಹಾಕಿದ್ದಾರೆ.

ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಖರ್ಗೆ ಹೆಸರು ಪ್ರಸ್ತಾಪ ವಿಚಾರದ ಬಗ್ಗೆ ಮೈಸೂರಿನಲ್ಲಿಂದ ಸುದ್ದಿಗಾರರು ಸಿದ್ದರಾಮಯ್ಯನವರನ್ನು ಅಭಿಪ್ರಾಯ ಕೇಳಿದ್ದಾರೆ. ಆದ್ರೆ, ಇದಕ್ಕೆ ಸಿದ್ದರಾಮಯ್ಯ ಅವರು ತಮ್ಮ ಅಭಿಪ್ರಾಯ ತಿಳಿಸಲು ಹಿಂದೇಟು ಹಾಕಿದ್ದು, ನನ್ನ ಅಭಿಪ್ರಾಯ ಏನು ಇಲ್ಲ. ಮಮತಾ ಬ್ಯಾನರ್ಜಿ ಅವರು ಮಲ್ಲಿಕಾರ್ಜುನ ಖರ್ಗೆ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ. ಇಂಡಿಯಾ ಒಕ್ಕೂಟ ಏನು ತೀರ್ಮಾನ ಮಾಡುತ್ತೆ ನೋಡೋಣ ಎಂದು ಹೇಳಿ ಹೋದರು.

ಇದನ್ನೂ ಓದಿ: ಇಂಡಿಯಾ ಬಣದ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹೆಸರು ಸೂಚಿಸಿದ ಮಮತಾ ಬ್ಯಾನರ್ಜಿ

ಸಭೆಯಲ್ಲಿ ಖರ್ಗೆ ಹೆಸರು ಪ್ರಸ್ತಾಪಿಸಿದ್ದ ಮಮತಾ

ಈವರೆಗೂ ಇಂಡಿಯಾ ಕೂಟದಲ್ಲಿ ಪ್ರಧಾನಿ ಅಭ್ಯರ್ಥಿ ವಿಷಯ ಬಂದಾಗಲೆಲ್ಲಾ ಜಾರಿಕೆಯ ಉತ್ತರ ನೀಡುತ್ತಿದ್ದ 26 ಪಕ್ಷಗಳ ನಾಯಕರು ಇದೀಗ ಇದ್ದಕ್ಕಿದ್ದಂತೆ ರಣತಂತ್ರ ಬದಲಿಸಿದ್ದಾರೆ. ಮಮತಾ ಬ್ಯಾನರ್ಜಿ, ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿ ಹುದ್ದೆಗೆ ಪ್ರಸ್ತಾಪಿಸಿದ್ದು, ಇದಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬೆಂಬಲಿಸಿದ್ದಾರೆ. ಆದ್ರೆ, ಇದಕ್ಕೆ ಪರೋಕ್ಷ ಅಸಮಾಧಾನ ಎಂಬಂತೆ ಬಿಹಾರದ ಹಾಲಿ ಮುಖ್ಯಮಂತ್ರಿ ನಿತೀಶ್‍ಕುಮಾರ್, ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಹೊರ ನಡೆದಿರುವುದು ನಾಟಕೀಯ ಬೆಳವಣಿಗೆಗಳಾಗಿವೆ.

ಅತ್ತ ಪ್ರಧಾನಿ ಅಭ್ಯರ್ಥಿಗೆ ಖರ್ಗೆ ಹೆಸರು ಕೇಳಿಬರುತ್ತಿದ್ದಂತೆಯೇ ಇತ್ತ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಓರ್ವ ಕನ್ನಡಿಗ ಅದರಲ್ಲೂ ದಲಿತ ನಾಯಕ ಪ್ರಧಾನಿಯಾಗುತ್ತಾರೆ ಎನ್ನುವ ಚರ್ಚೆಗಳು ಶುರುವಾಗಿವೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:10 pm, Fri, 22 December 23

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ