AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಷಾಢ ಮುಗಿಯುತ್ತಿದ್ದಂತೆಯೇ ಮನೆ ಬದಲಿಸಲಿರುವ ಸಿದ್ದರಾಮಯ್ಯ, ಸಿಎಂ ಅದೃಷ್ಟ ನಿವಾಸಕ್ಕೆ ಡಿಕೆ ಶಿವಕುಮಾರ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರದಲ್ಲೇ ಮನೆ ಬದಲಾವಣೆ ಮಾಡಲಿದ್ದು, ಸಿದ್ದರಾಮಯ್ಯನವರ ಅಧೃಷ್ಟದ ಮನೆಗೆ ಡಿಕೆ ಶಿವಕುಮಾರ್ ಶಿಫ್ಟ್ ಆಗಲಿದ್ದಾರೆ.

ಆಷಾಢ ಮುಗಿಯುತ್ತಿದ್ದಂತೆಯೇ ಮನೆ ಬದಲಿಸಲಿರುವ ಸಿದ್ದರಾಮಯ್ಯ, ಸಿಎಂ ಅದೃಷ್ಟ ನಿವಾಸಕ್ಕೆ ಡಿಕೆ ಶಿವಕುಮಾರ್
ಸಿದ್ದರಾಮಯ್ಯ
ಕಿರಣ್​ ಹನಿಯಡ್ಕ
| Edited By: |

Updated on: Jul 15, 2023 | 4:13 PM

Share

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಶೀಘ್ರದಲ್ಲೇ ಕುಮಾರಕೃಪಾ ರಸ್ತೆಯಲ್ಲಿರುವ ಸರ್ಕಾರಿ ನಿವಾಸದಿಂದ ಕಾವೇರಿ ನಿವಾಸಕ್ಕೆ (Cauvery residence) ಶಿಫ್ಟ್ ಆಗಲಿದ್ದಾರೆ. ಈಗಾಗಲೇ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು ಕಾವೇರಿ ನಿವಾಸವನ್ನು ಖಾಲಿ ಮಾಡಿ ಡಾಲರ್ಸ್​ ಕಾಲೋನಿಯಲ್ಲಿರುವ ತಮ್ಮ ಸ್ವಂತ ಮನೆ ಧವಳಗಿರಿಗೆ ಶಿಫ್ಟ್ ಆಗಿದ್ದಾರೆ. ಸದ್ಯ ಕಾವೇರಿ ನಿವಾಸದಲ್ಲಿ ರಿನೋವೇಷನ್ ಕಾರ್ಯ ಬಹುತೇಕ ಮುಗಿದಿದೆ. ಹೀಗಾಗಿ ಸಿದ್ದರಾಮಯ್ಯ ಅವರು ಇಂದು (ಜುಲೈ 15) ಕಾವೇರಿ ನಿವಾಸಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಆಷಾಢ ಮಾಸ ಮುಗಿದ ಬಳಿಕ ಸಿದ್ದರಾಮಯ್ಯ ಅವರು ಕಾವೇರಿ ನಿವಾಸ ಪ್ರವೇಶ ಮಾಡಲಿದ್ದಾರೆ.

ಇದನ್ನೂ ಓದಿ: ಜ್ಯೋತಿಷಿ ಸಲಹೆಯಂತೆ ಲಕ್ಕಿ ನಂಬರ್​ ಕೊಠಡಿ ಪಡೆದುಕೊಂಡ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ನಿವಾಸದ ಮೇಲೂ ಕಣ್ಣು

ಇನ್ನು ಈವರೆಗೆ ಸಿದ್ದರಾಮಯ್ಯ ಅವರಿದ್ದ ಸರ್ಕಾರಿ ಬಂಗಲೆ ಕುಮಾರಕೃಪಾ ನಿವಾಸಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹಂಚಿಕೆಯಾಗಿದೆ. ಇದು ಸಿದ್ದರಾಮಯ್ಯನವರ ಅದೃಷ್ಟ ಮನೆ ಎಂದೇ ಹೇಳಲಾಗುತ್ತದೆ. ಈ ದೃಷ್ಟದ ಮನೆ ತಮಗೆ ಬೇಕೆಂದು ಡಿಕೆ ಶಿವಕುಮಾರ್ ಬೇಡಿಕೆ ಇಟ್ಟಿದ್ದರು. ಅದರಂತೆ ಸಿದ್ದರಾಮಯ್ಯ ಅವರಿದ್ದ ಅದೃಷ್ಟದ ಮನೆ ಡಿಕೆ ಶಿವಕುಮಾರ್ ಅವರಿಗೆ ಸಿಕ್ಕಿದ್ದು, ಸಿದ್ದರಾಮಯ್ಯ ಕಾವೇರಿ ನಿವಾಸಕ್ಕೆ ಶಿಫ್ಟ್ ಆದ ನಂತರ, ಡಿ.ಕೆ. ಶಿವಕುಮಾರ್ ಕುಮಾರಕೃಪಾದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಕಾವೇರಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸ. ಅದರ ಪಕ್ಕದಲ್ಲೇ ಸಿಎಂ ಗೃಹ ಕಚೇರಿ ಕೃಷ್ಣಾ ಇದೆ. ಸಹಜವಾಗಿ ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕಾರ ಮಾಡಿದರವರು ಈ ನಿವಾಸದಲ್ಲಿ ವಾಸ್ತವ್ಯ ಹೂಡುತ್ತಾರೆ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಕಾವೇರಿ ನಿವಾಸದಲ್ಲೇ ಉಳಿದುಕೊಂಡಿದ್ದರು. ಬಳಿಕ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಅಂದಿನ ಸಿಎಂ ಹೆಚ್​ .ಡಿ ಕುಮಾರಸ್ವಾಮಿ ಖಾಸಗಿ ಹೋಟೆಲ್‌ ಒಂದರಲ್ಲಿ ವಾಸ್ತವ್ಯ ಹೂಡಿದ್ದರೆ ಸಿದ್ದರಾಮಯ್ಯನವರು ಕಾವೇರಿ ನಿವಾಸದಲ್ಲಿ ವಾಸ್ತವ್ಯ ಮುಂದುವರಿಸಿದ್ದರು.

ಸಮ್ಮಿಶ್ರ ಸರ್ಕಾರದ ಪತನವಾದ ಬಳಿಕವೂ ಸಿದ್ದರಾಮಯ್ಯ ಅವರ ಕಾವೇರಿ ತೊರೆಯಲು ಮನಸ್ಸು ಮಾಡಿರಲಿಲ್ಲ. ಅಂದು ಸಿಎಂ ಆಗಿದ್ದ ಬಿಎಸ್‌ ಯಡಿಯೂರಪ್ಪ ಅವರು ಧವಳಗಿರಿಯಲ್ಲಿ ವಾಸ್ತವ್ಯ ಹೂಡಿ ಅಲ್ಲಿಂದಲೇ ಗೃಹ ಕಚೇರಿ ಕೃಷ್ಣಾಗೆ ಆಗಮಿಸುತ್ತಿದ್ದರು. ಆದರೆ ಇದು ಸಂಚಾರಕ್ಕೆ ಸಮಸ್ಯೆ ಆಗುತ್ತಿದೆ ಎಂಬ ಕಾರಣಕ್ಕಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕುಮಾರಕೃಪಾ ನಿವಾಸವನ್ನು ನೀಡಿ ಕಾವೇರಿಗೆ ಯಡಿಯೂರಪ್ಪ ಶಿಫ್ಟ್ ಆಗಿದ್ದರು. ಆದ್ರೆ, ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಯಡಿಯೂರಪ್ಪ ಅವರು ಕಾವೇರಿ ನಿವಾಸದಲ್ಲೇ ತಮ್ಮ ವಾಸ್ತವ್ಯವನ್ನು ಮುಂದುವರಿಸಿದ್ದರು. ಇದೀಗ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆಯೇ ಯಡಿಯೂರಪ್ಪ ತಾವೇ ಕಾವೇರಿ ನಿವಾಸ ತೊರೆದಿದ್ದಾರೆ.

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ