Congress CLP Meeting: ಸುಳ್ಳುಗಳಿಗೆ ದಾಳವಾಗಬೇಡಿ; ಶಾಸಕಾಂಗ ಸಭೆಯಲ್ಲಿ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಆಡಳಿತಾತ್ಮಕ ಒತ್ತಡಗಳ ನಡುವೆಯೂ ನಾನು ತಿಂಗಳಿಗೊಮ್ಮೆ ಜಿಲ್ಲಾವಾರು ಶಾಸಕರ ಸಭೆ ಕರೆಯುತ್ತೇನೆ. ಕ್ಷೇತ್ರದ ಕುಂದು ಕೊರತೆಗಳ ಬಗ್ಗೆ ಚರ್ಚಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

Congress CLP Meeting: ಸುಳ್ಳುಗಳಿಗೆ ದಾಳವಾಗಬೇಡಿ; ಶಾಸಕಾಂಗ ಸಭೆಯಲ್ಲಿ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
ಸಿದ್ದರಾಮಯ್ಯ
Follow us
| Updated By: ಗಣಪತಿ ಶರ್ಮ

Updated on:Jul 27, 2023 | 10:29 PM

ಬೆಂಗಳೂರು: ಸುಳ್ಳುಗಳಿಗೆ ದಾಳವಾಗಬೇಡಿ. ಏನೇ ಅಸಮಾಧಾನಗಳಿದ್ದರೂ ನನ್ನ ಬಳಿ ಚರ್ಚಿಸಿ ಅಥವಾ ಪಕ್ಷದ ವೇದಿಕೆಯಲ್ಲಿ ಹೇಳಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಪಕ್ಷದ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ (Congress CLP Meeting) ಶಾಸಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಜನತೆ ಈ ವಿಧಾನಸಭಾ ಚುನಾವಣೆಯಲ್ಲಿ ನೀಡಿರುವ ತೀರ್ಪು ಇಡಿ ದೇಶದ ರಾಜಕಾರಣಕ್ಕೆ ಗೇಮ್ ಚೇಂಜರ್ ಎನ್ನುವ ವಿಶ್ಲೇಷಣೆಗಳು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ವ್ಯಕ್ತವಾಗಿದೆ. ಹೀಗಾಗಿ ಸುಳ್ಳಿನ‌ ಸರಮಾಲೆಗಳ ಮೂಲಕ ಅವರು (ಪ್ರತಿಪಕ್ಷಗಳು) ಐದು ಗ್ಯಾರಂಟಿಗಳ ಯಶಸ್ಸು ಮತ್ತು ಜನರ ಗಮನವನ್ನು ಬೇರೆಡೆಗೆ ಸೆಳೆಯುತ್ತಾರೆ ಎಂದು ಹೇಳಿದರು.

ಪ್ರತಿಪಕ್ಷಗಳ ಸುಳ್ಳುಗಳು ಮತ್ತು ಆ ಮೂಲಕ ಗಮನ ಬೇರೆಡೆ ಸೆಳೆಯುವ ತಂತ್ರಗಾರಿಕೆ ಬಗ್ಗೆ ಪ್ರತಿಯೊಬ್ಬ ಶಾಸಕರೂ ಎಚ್ಚರದ ಸ್ಥಿತಿಯಲ್ಲಿರಬೇಕು. ಅವರ ಸುಳ್ಳುಗಳಿಗೆ ನೀವೂ ದಾಳ ಆಗಬೇಡಿ, ಎಂದು ಕಿವಿಮಾತು ಹೇಳಿದರು.

ತಿಂಗಳಿಗೊಮ್ಮೆ ಶಾಸಕರ ಸಭೆ ನಡೆಸುತ್ತೇನೆ ಎಂದ ಸಿದ್ದರಾಮಯ್ಯ

ಆಡಳಿತಾತ್ಮಕ ಒತ್ತಡಗಳ ನಡುವೆಯೂ ನಾನು ತಿಂಗಳಿಗೊಮ್ಮೆ ಜಿಲ್ಲಾವಾರು ಶಾಸಕರ ಸಭೆ ಕರೆಯುತ್ತೇನೆ. ಕ್ಷೇತ್ರದ ಕುಂದು ಕೊರತೆಗಳ ಬಗ್ಗೆ ಚರ್ಚಿಸುತ್ತೇನೆ. ಸರ್ಕಾರದಿಂದ ತುರ್ತಾಗಿ ಆಗಬೇಕಿರುವ ಕೆಲಸಗಳು ಸಮರ್ಪಕವಾಗಿ ಆಗುವಂತೆ ನೋಡಿಕೊಳ್ಳುತ್ತೇನೆ. ಏನೇ ಅಸಮಾಧಾನಗಳಿದ್ದರೂ ನೇರವಾಗಿ ನನಗೆ ಹೇಳಿ, ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಎಂದು ಶಾಸಕರಿಗೆ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Congress CLP Meeting: ಬಸವರಾಜ ರಾಯರೆಡ್ಡಿಯ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ

ಕೆಲವು ಸಚಿವರು ಭೇಟಿಗೆ ಸಿಗುತ್ತಿಲ್ಲ. ಇದರಿಂದ ಅಭಿವೃದ್ಧಿಕಾರ್ಯಗಳಿಗೆ ತೊಡಕಾಗುತ್ತಿದೆ ಎಂದು ದೂರಿ ಕೆಲವು ಮಂದಿ ಶಾಸಕರು ಮುಖ್ಯಮಂತ್ರಿಗೆ ಪತ್ರ ಬರೆದಿರುವುದು ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿತ್ತು. ಶಾಸಕಾಂಗ ಪಕ್ಷದ ಸಭೆ ಕರೆಯಬೇಕು ಎಂದೂ ಶಾಸಕರು ಆಗ್ರಹಿಸಿದ್ದರು. ಪ್ರತಿಪಕ್ಷಗಳಾ ಬಿಜೆಪಿ ಹಾಗೂ ಜೆಡಿಎಸ್ ಇದನ್ನೇ ಪ್ರಮುಖ ಅಸ್ತ್ರವನ್ನಾಗಿಸಿಕೊಂಡಿದ್ದವು. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಕೆಲವೇ ತಿಂಗಳಲ್ಲಿ ಆಂತರಿಕ ಕಲಹ ಹೆಚ್ಚಾಗಿದೆ. ಸರ್ಕಾರದ ಹಾಗೂ ಸಚಿವರ ವಿರುದ್ಧ ಆಡಳಿತ ಪಕ್ಷದ ಶಾಸಕರೇ ದನಿಯೆತ್ತಿದ್ದಾರೆ. ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಬಿಜೆಪಿ ಟೀಕಿಸಿತ್ತು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:30 pm, Thu, 27 July 23

ತಾಜಾ ಸುದ್ದಿ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ