AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಸಚಿವರ ನಿವಾಸಕ್ಕೆ ಸಿಎಂ ಭೇಟಿ ವಿಚಾರ; ಡಾ.ಪರಮೇಶ್ವರ್ ಹೇಳಿದ್ದಿಷ್ಟು

ಲೋಕಸಭೆ ಚುನಾವಣೆ ಬಗ್ಗೆ ‘ಲೋಕಸಭಾ ಚುನಾವಣೆ ಬಗ್ಗೆ ಅಧ್ಯಕ್ಷರು ಚರ್ಚೆ ಮಾಡುತ್ತಾರೆ. ಚುನಾವಣೆ ಹತ್ತಿರ ಬಂದಾಗ ಸಭೆ ಮಾಡಲಿದ್ದಾರೆ. ಇನ್ನು ಲೋಕಸಭೆ ಚುನಾವಣೆಯಲ್ಲಿ ಕೆ.ಎನ್​.ರಾಜಣ್ಣ ಸ್ಪರ್ಧೆ ವಿಚಾರ ‘ ಅವರು ಏಕೆ ಅಭ್ಯರ್ಥಿ ಆಗಬಾರದು ಎಂದು ಪರಮೇಶ್ವರ್ ಹೇಳಿದರು.

ಗೃಹ ಸಚಿವರ ನಿವಾಸಕ್ಕೆ ಸಿಎಂ ಭೇಟಿ ವಿಚಾರ; ಡಾ.ಪರಮೇಶ್ವರ್ ಹೇಳಿದ್ದಿಷ್ಟು
ಡಾ.ಜಿ ಪರಮೇಶ್ವರ್​
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ಕಿರಣ್ ಹನುಮಂತ್​ ಮಾದಾರ್|

Updated on:Oct 28, 2023 | 3:45 PM

Share

ತುಮಕೂರು, ಅ.28:ಬೆಂಗಳೂರಿನ ಸದಾಶಿವನಗರದಲ್ಲಿರುವ ಗೃಹ ಸಚಿವ ಪರಮೇಶ್ವರ್ (G Parameshwara) ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ಅವರು ನಿನ್ನೆ(ಅ.27) ದಿಢೀರ್ ಭೇಟಿ ನೀಡಿದ್ದರು. ಈ ವೇಳೆ ಒಂದೂವರೆ ಗಂಟೆಗೂ ಅಧಿಕ ಕಾಲ ಚರ್ಚೆ ನಡೆದಿತ್ತು. ಇದೀಗ ಈ ಕುರಿತು ತುಮಕೂರಿನಲ್ಲಿ ಗೃಹಸಚಿವ ಡಾ.ಪರಮೇಶ್ವರ್ ಮಾತನಾಡಿ ‘ ಸೌಜನ್ಯದ ಭೇಟಿ ಇದಾಗಿದ್ದು, ನಿನ್ನೆ ಊಟಕ್ಕೆ ಸೇರಿದ್ವಿ ಅಷ್ಟೇ. ಊಟ ಮಾಡಿದ್ರೂ, ಅವರ ಮನೆಗೆ ಅವರು ಹೋದರು. ನಮ್ಮ ಮನೇಲಿ ನಾನು ಉಳಿದುಕೊಂಡೆ. ಯಾವ ವಿಚಾರವಾಗಿಯೂ ಚರ್ಚೆ ಆಗಲಿಲ್ಲ ಎಂದರು.

ಡಾ.ಜಿ.ಪರಮೇಶ್ವರ್​ ಸಿಎಂ ಆಗುತ್ತಾರೆ ಎಂಬ ಚರ್ಚೆ ವಿಚಾರ ‘ ಸುಮ್ಮನೇ ಅವೆಲ್ಲಾ ಮಾತನಾಡಬಾರದು ಎಂದರು. ಇದೆ ವೇಳೆ ಲೋಕಸಭೆ ಚುನಾವಣೆ ಬಗ್ಗೆ ‘ಲೋಕಸಭಾ ಚುನಾವಣೆ ಬಗ್ಗೆ ಅಧ್ಯಕ್ಷರು ಚರ್ಚೆ ಮಾಡುತ್ತಾರೆ. ಚುನಾವಣೆ ಹತ್ತಿರ ಬಂದಾಗ ಸಭೆ ಮಾಡಲಿದ್ದಾರೆ. ಇನ್ನು ಲೋಕಸಭೆ ಚುನಾವಣೆಯಲ್ಲಿ ಕೆ.ಎನ್​.ರಾಜಣ್ಣ ಸ್ಪರ್ಧೆ ವಿಚಾರ ‘ ಅವರು ಏಕೆ ಅಭ್ಯರ್ಥಿ ಆಗಬಾರದು ಎಂದು ಪರಮೇಶ್ವರ್ ಹೇಳಿದರು.‘

ಇದನ್ನೂ ಓದಿ:ಗೃಹ ಸಚಿವರ ಮನೆಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಭೇಟಿ​; ಕುತೂಹಲ ಕೆರಳಿಸಿರುವ ಬೆಳವಣಿಗೆ

 ಡಿನ್ನರ್ ಅರೇಂಜ್ಮೆಂಟ್​ನಲ್ಲಿ ಸತೀಶ್​ ಜಾರಕಿಹೊಳಿ

ಇನ್ನು ಸಿಎಂ ಬರುವುದಕ್ಕೂ ಮುಂಚಿತವಾಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಗೃಹ ಸಚಿವರ ಮನೆಯಲ್ಲಿ ಇದ್ದು, ಸಿಎಂ ಸಿದ್ದರಾಮಯ್ಯ ಬಂದ ಬಳಿಕ ಒಟ್ಟಿಗೆ ಊಟ ಮಾಡಿಕೊಂಡೆ ರಾಜಕೀಯದ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದರು. ಇತ್ತೀಚಿಗೆ ಡಿಕೆ ಶಿವಕುಮಾರ್ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಮೇಲೆ ಜಾರಕಿಹೊಳಿ ಅಸಮಧಾನಗೊಂಡಿದ್ದರು. ಬಳಿಕ ಶಾಸಕರ ಮೂಲಕ ಶಕ್ತಿ ಪ್ರದರ್ಶನಕ್ಕೆ ಸತೀಶ್ ಜಾರಕಿಹೊಳಿ ಮುಂದಾಗಿದ್ದರು. ಆ ಬಳಿಕ ಇದೀಗ ಸಿಎಂ ಭೇಟಿ ಕೂತುಹಲ ಮೂಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು  ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:45 pm, Sat, 28 October 23

Follow Us
Mahesha E
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ