AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ಷದೊಳಗೆ ಸಿಎಂ ಕುರ್ಚಿ ಅಲುಗಾಡಿಸುವ ಕೆಲಸ ಆಗುತ್ತಿದೆ: ಡಿಕೆ ಶಿವಕುಮಾರ್ ಹೇಳಿಕೆಗೆ ಅಶ್ವತ್ಥ ನಾರಾಯಣ ತಿರುಗೇಟು

ಸಿಂಗಾಪುರದಲ್ಲಿ ಕುಳಿತುಕೊಂಡು ಕರ್ನಾಟಕ ಸರ್ಕಾರದ ವಿರುದ್ಧ ಷಡ್ಯಂತರ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು. ಈ ಹೇಳಿಕೆಗೆ ಬಿಜೆಪಿ ನಾಯಕರು ತಿರುಗೇಟು ನೀಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದೊಳಗೇ ಸಿಎಂ ಕುರ್ಚಿ ಅಲುಗಾಡಿಸುವ ಕೆಲಸಗಳು ಆಗುತ್ತಿವೆ ಎಂದು ಸಿಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಪಕ್ಷದೊಳಗೆ ಸಿಎಂ ಕುರ್ಚಿ ಅಲುಗಾಡಿಸುವ ಕೆಲಸ ಆಗುತ್ತಿದೆ: ಡಿಕೆ ಶಿವಕುಮಾರ್ ಹೇಳಿಕೆಗೆ ಅಶ್ವತ್ಥ ನಾರಾಯಣ ತಿರುಗೇಟು
ಡಾ.ಸಿಎನ್ ಅಶ್ವತ್ಥ ನಾರಾಯಣ ಮತ್ತು ಡಿಕೆ ಶಿವಕುಮಾರ್
ಕಿರಣ್​ ಹನಿಯಡ್ಕ
| Edited By: Rakesh Nayak Manchi|

Updated on:Jul 24, 2023 | 5:54 PM

Share

ಬೆಂಗಳೂರು, ಜುಲೈ 24: ಸಿಂಗಾಪುರದಲ್ಲಿ ಕುಳಿತುಕೊಂಡು ಕರ್ನಾಟಕ ಸರ್ಕಾರದ ವಿರುದ್ಧ ತಂತ್ರ ರೂಪಿಸುತ್ತಿದ್ದಾರೆ ಎಂಬ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಹೇಳಿಕೆಗೆ ತಿರುಗೇಟು ನೀಡಿದ ಮಾಜಿ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ (Dr .C N Ashwath Narayan), ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಹಲವು ದೃಷ್ಟಿಕೋನ ಇದೆ. ಸರ್ಕಾರದಲ್ಲಿ ಏನೂ ಸರಿಯಿಲ್ಲ ಅನ್ನೋದು ಗೊತ್ತಾಗುತ್ತಿದೆ. ಒಳಗಿನಿಂದಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಿಸುವ ಕೆಲಸಗಳು ಆಗುತ್ತಿವೆ ಎಂದರು.

ಕಾಂಗ್ರೆಸ್​ ನಾಯಕರ ಸಹಕಾರ ಇಲ್ಲದೆ ಏನೂ ಆಗುವುದಿಲ್ಲ. ಬಹಳ ದೊಡ್ಡವರೇ ಇದಕ್ಕೆ ಸಹಕಾರ ಕೊಟ್ಟಂತೆ ಕಾಣುತ್ತಿದೆ ಎಂದು ಹೇಳಿದ ಅಶ್ವತ್ಥ ನಾರಾಯಣ, ನನ್ನನ್ನು ಸಿಎಂ‌ ಮಾಡಲಿಲ್ಲ ಅಂದರೆ ಈ ಸರ್ಕಾರ ಉಳಿಸಲ್ಲ ಅಂತ ಡಿ.ಕೆ. ಶಿವಕುಮಾರ್ ಪರೋಕ್ಷವಾಗಿ ಎಚ್ಚರಿಕೆ ಕೊಟ್ಟಂತಿದೆ. ಕುಮಾರಸ್ವಾಮಿ ಅವರು ಯಾವ ರೀತಿ ಸರ್ಕಾರ ಬೀಳಿಸುತ್ತಾರೆ ಅಂತನೂ ಶಿ‌ವಕುಮಾರ್ ಹೇಳಬೇಕು ಎಂದರು.

ಇದನ್ನೂ ಓದಿ: ಕಾಂಗ್ರೆಸ್‌ ಸರ್ಕಾರ ಬೀಳಿಸಲು ಸಿಂಗಾಪುರದಲ್ಲಿ ಕಾರ್ಯತಂತ್ರ, ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

ಕಾಂಗ್ರೆಸ್​​ನವರೇ ಈ ಸರ್ಕಾರ ಬಹಳ ದಿನ ಇರುವುದಿಲ್ಲ ಅಂತಿದ್ದರು. ಯಾಕೋ ಕಾಂಗ್ರೆಸ್ಸಿಗರ ಹೇಳಿಕೆ ನಿಜವಾಗುವ ಹಾಗೆ ಕಾಣುತ್ತಿದೆ. ಸಿಂಗಾಪುರದಲ್ಲಿ ಹೆಚ್​.ಡಿ.ಕುಮಾರಸ್ವಾಮು ಏನೇನು ಮಾಡುತ್ತಿದ್ದಾರೆ, ಯಾವ ರೀತಿ ಸರ್ಕಾರ ಬೀಳಿಸುತ್ತಾರೆ ಅಂತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಲಿ. ಅವರ ಸರ್ಕಾರವೇ ಇದೆ, ಇಂಟೆಲಿಜೆನ್ಸ್ ಇದೆ ಎಂದರು.

ಕಾಂಗ್ರೆಸ್ ಎಂಎಲ್​ಸಿ ಬಿಕೆ ಹರಿಪ್ರಸಾದ್ ಅವರು ಸಿಎಂ ಆಯ್ಕೆ ಮಾಡುವುದು ಗೊತ್ತು, ಇಳಿಸೋದು ಗೊತ್ತು ಅಂತಾರೆ. ಡಿ.ಕೆ.ಶಿವಕುಮಾರ್​ ಸಿಎಂ ಆಗುವುದನ್ನು ಈ ಮೂಲಕ ವ್ಯಕ್ತಪಡಿಸುತ್ತಿದ್ದಾರೆ ಅಷ್ಟೆ. ಆದರೆ ಬಿಜೆಪಿ ಈ ಸರ್ಕಾರ ಬೀಳಿಸುವ ಯಾವುದೇ ಪ್ರಯತ್ನ ಮಾಡುತ್ತಿಲ್ಲ. ನಾವು ಇಂತಹ ಆಲೋಚನೆ ಇಟ್ಟುಕೊಂಡಿಲ್ಲ. ನಾವು ರಾಜ್ಯದ ಜನರ ಆಶೀರ್ವಾದ ಪಡೆದೇ ಅಧಿಕಾರಕ್ಕೆ ಬರುತ್ತೇವೆ ಎಂದರು.

ಹೋಗುವವರೆಲ್ಲರೂ ಹೋಗಿ ಎನ್ನುತ್ತಿರುವ ಡಿಕೆ ಶಿವಕುಮಾರ್

ತಮ್ಮ ಹೇಳಿಕೆಗೆ ಮತ್ತೆ ಸ್ಪಷ್ಟನೆ ನೀಡಿದ ಡಿಕೆ ಶಿವಕುಮಾರ್, ಹೋಗುವವರೆಲ್ಲರೂ ಹೋಗಿ ಅಲ್ಲೇ ಚರ್ಚೆ ಮಾಡಲಿ, ಪಕ್ಷದಲ್ಲಿ ಇರುವವರೆಲ್ಲಾ ಇಲ್ಲೇ ಚರ್ಚೆ ಮಾಡಲಿ ಎಂದು ಹೇಳಿ ಮತ್ತೆ ಕುತೂಹಲ ಕೆರಳಿಸಿದ್ದಾರೆ. ಎಲ್ಲೆಲ್ಲಿ ಏನೇನಾಗುತ್ತಿದೆ ಅಂತಾ ನಮಗೆ ಮಾಹಿತಿ ಇದೆ. ಎಲ್ಲವೂ ಚರ್ಚೆ ಆಗಬೇಕಲ್ವಾ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:51 pm, Mon, 24 July 23

Follow Us
Kiran Haniyadka
Kiran Haniyadka
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ