AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆಗೆ ಕಾಂಗ್ರೆಸ್​ನಿಂದ ಕಲೆಕ್ಷನ್; ಹೆಚ್​ಡಿ ಕುಮಾರಸ್ವಾಮಿ ಗಂಭೀರ ಆರೋಪ

ತೆಲಂಗಾಣ ಚುನಾವಣೆಗೆ ರಾಜ್ಯದಲ್ಲಿ ಹಣ ಸಂಗ್ರಹ ಮಾಡಿದಂತೆ, ಲೋಕಸಭೆ ಚುನಾವಣೆಗೂ ವಸೂಲಿ ಶುರುವಾಗಿದೆ. ಇದು ಕಲೆಕ್ಷನ್ ಸರ್ಕಾರ ಎಂದು ಆರೋಪಿಸಿ "ಎಕ್ಸ್'" ಜಾಲತಾಣದಲ್ಲಿ ಪೋಸ್ಟ್ ಮಾಡಿ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ.

ಲೋಕಸಭೆ ಚುನಾವಣೆಗೆ ಕಾಂಗ್ರೆಸ್​ನಿಂದ ಕಲೆಕ್ಷನ್; ಹೆಚ್​ಡಿ ಕುಮಾರಸ್ವಾಮಿ ಗಂಭೀರ ಆರೋಪ
ಹೆಚ್​ಡಿ ಕುಮಾರಸ್ವಾಮಿ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jan 26, 2024 | 6:50 PM

Share

ಬೆಂಗಳೂರು, ಜ.26: ಬೆಂಗಳೂರು ನಗರಾಭಿವೃದ್ಧಿ ಇಲಾಖೆಯನ್ನು ‘ಬೆಂಗಳೂರು ನಗದಾಭಿವೃದಿ ಇಲಾಖೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ(HD Kumaraswamy) ಅವರು ಟೀಕಿಸಿದ್ದಾರೆ. ಜೊತೆಗೆ ಕೈಗಾರಿಕೆ ಇಲಾಖೆಯಲ್ಲಿ ಬಿಡಿಎಗೆ ಏನು ಕೆಲಸ ಎಂದು ಪ್ರಶ್ನಿಸಿ  “ಎಕ್ಸ್'” ಜಾಲತಾಣದಲ್ಲಿ ಪೋಸ್ಟ್ ಮಾಡಿ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ. ‘ತೆಲಂಗಾಣ ಚುನಾವಣೆಗೆ ರಾಜ್ಯದಲ್ಲಿ ಹಣ ಸಂಗ್ರಹ ಮಾಡಿದಂತೆ, ಲೋಕಸಭೆ ಚುನಾವಣೆಗೂ ವಸೂಲಿ ಶುರುವಾಗಿದೆ. ಇದು ಕಲೆಕ್ಷನ್ ಸರ್ಕಾರ ಎಂದು ಆರೋಪಿಸಿದ್ದಾರೆ.

‘ಬೆಂಗಳೂರು ನಗದಾಭಿವೃದ್ಧಿ’ ಇಲಾಖೆಯು ನಗದು ಅಭಿವೃದ್ಧಿಗೆ ಸಿಕ್ಕಸಿಕ್ಕ ಕಡೆ ಸುಲಿಗೆಗೆ ಇಳಿದಿದೆ. ದಂಧೆಗೆ ಯಾವ ಹುಲ್ಲುಗಾವಲಾದರೇನು? ಹೈಕಮಾಂಡ್ ಗೆ ಕಪ್ಪ ಸಲ್ಲಿಸಬೇಕೆಂದು ಹಾದಿಬೀದಿಯಲ್ಲಿ ಹೇಳಿಕೊಂಡು ಸಿಕ್ಕಿದ ಕಡೆಯೆಲ್ಲಾ ವಸೂಲಿ ಮಾಡಲಾಗುತ್ತಿದೆ ಎಂದು ಅವರು ದೂರಿದ್ದಾರೆ.

ಕೈಗಾರಿಕೆ, ಉದ್ಯಮ ಚಟುವಟಿಕೆಗೆ ಒಪ್ಪಿಗೆ ಕೊಡಲು KIADB ಇದೆ. ಏಕಗವಾಕ್ಷಿ ವ್ಯವಸ್ಥೆ ಅಡಿಯಲ್ಲಿ ಪ್ರಕ್ರಿಯೆ ನಿರಾತಂಕವಾಗಿ ನಡೆಯುತ್ತಿದೆ. ಅದಕ್ಕೂ ಮುನ್ನ ಉನ್ನತಮಟ್ಟದ ಹೂಡಿಕೆ ಅನುಮೋದನೆ ಸಮಿತಿ ಒಪ್ಪಿಗೆಯನ್ನೂ ಕೊಡುತ್ತದೆ. ಇಷ್ಟೆಲ್ಲ ಇದ್ದ ಮೇಲೆ ಇಲ್ಲಿ BDA ಕೆಲಸ ಏನು? ಯಾರ ಕಿಸೆ ಭರ್ತಿ ಮಾಡಲಿಕ್ಕೆ BDA ಇಂಥ ಅಡ್ಡದಾರಿ ತುಳಿದಿದೆ? ಎಂದು ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವರ್ತನೆಯನ್ನು ಕಟುವಾಗಿ ಟೀಕಿಸಿದ್ದಾರೆ.

ಇದನ್ನೂ ಓದಿ:ಬಿಜೆಪಿ, ಜೆಡಿಎಸ್ ಸೀಟು ಹಂಚಿಕೆ ಶೀಘ್ರ ಫೈನಲ್: ಜನವರಿ ಕೊನೆಯಲ್ಲಿ ಅಮಿತ್ ಶಾ ಜತೆ ಕುಮಾರಸ್ವಾಮಿ ಸಭೆ

ಬೆಂಗಳೂರು ವ್ಯಾಪ್ತಿಯಲ್ಲಿ ತನ್ನ ಅನುಮೋದನೆ ಇಲ್ಲದೆ ಉದ್ಯಮ ಪಾರ್ಕ್ ರಚನೆ, ಅಭಿವೃದ್ಧಿ, ಕೈಗಾರಿಕಾ ಸಮುಚ್ಚಯಗಳ ನಿರ್ಮಾಣ ಮಾಡಬಾರದು ಎಂದು BDA ಫರ್ಮಾನು ಹೊರಡಿಸಿರುವುದು ಬೆಂಗಳೂರು ‘ನಗದಾಭಿವೃದ್ಧಿ’ ಇಲಾಖೆ ಕೈಚಳಕ, ಅನುಮಾನವೇ ಇಲ್ಲ. ತೆಲಂಗಾಣ ಎಲೆಕ್ಷನ್ ಗೆ ಕಲೆಕ್ಷನ್ ಮಾಡಿದಂತೆ ಈಗ ಲೋಕಸಭೆ ಚುನಾವಣೆಗೆ ವಸೂಲಿ ಶುರುವಾಗಿದೆ ಎಂದು ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ