AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆಗೆ ಕಾಂಗ್ರೆಸ್​ನಿಂದ ಕಲೆಕ್ಷನ್; ಹೆಚ್​ಡಿ ಕುಮಾರಸ್ವಾಮಿ ಗಂಭೀರ ಆರೋಪ

ತೆಲಂಗಾಣ ಚುನಾವಣೆಗೆ ರಾಜ್ಯದಲ್ಲಿ ಹಣ ಸಂಗ್ರಹ ಮಾಡಿದಂತೆ, ಲೋಕಸಭೆ ಚುನಾವಣೆಗೂ ವಸೂಲಿ ಶುರುವಾಗಿದೆ. ಇದು ಕಲೆಕ್ಷನ್ ಸರ್ಕಾರ ಎಂದು ಆರೋಪಿಸಿ "ಎಕ್ಸ್'" ಜಾಲತಾಣದಲ್ಲಿ ಪೋಸ್ಟ್ ಮಾಡಿ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ.

ಲೋಕಸಭೆ ಚುನಾವಣೆಗೆ ಕಾಂಗ್ರೆಸ್​ನಿಂದ ಕಲೆಕ್ಷನ್; ಹೆಚ್​ಡಿ ಕುಮಾರಸ್ವಾಮಿ ಗಂಭೀರ ಆರೋಪ
ಹೆಚ್​ಡಿ ಕುಮಾರಸ್ವಾಮಿ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jan 26, 2024 | 6:50 PM

Share

ಬೆಂಗಳೂರು, ಜ.26: ಬೆಂಗಳೂರು ನಗರಾಭಿವೃದ್ಧಿ ಇಲಾಖೆಯನ್ನು ‘ಬೆಂಗಳೂರು ನಗದಾಭಿವೃದಿ ಇಲಾಖೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ(HD Kumaraswamy) ಅವರು ಟೀಕಿಸಿದ್ದಾರೆ. ಜೊತೆಗೆ ಕೈಗಾರಿಕೆ ಇಲಾಖೆಯಲ್ಲಿ ಬಿಡಿಎಗೆ ಏನು ಕೆಲಸ ಎಂದು ಪ್ರಶ್ನಿಸಿ  “ಎಕ್ಸ್'” ಜಾಲತಾಣದಲ್ಲಿ ಪೋಸ್ಟ್ ಮಾಡಿ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ. ‘ತೆಲಂಗಾಣ ಚುನಾವಣೆಗೆ ರಾಜ್ಯದಲ್ಲಿ ಹಣ ಸಂಗ್ರಹ ಮಾಡಿದಂತೆ, ಲೋಕಸಭೆ ಚುನಾವಣೆಗೂ ವಸೂಲಿ ಶುರುವಾಗಿದೆ. ಇದು ಕಲೆಕ್ಷನ್ ಸರ್ಕಾರ ಎಂದು ಆರೋಪಿಸಿದ್ದಾರೆ.

‘ಬೆಂಗಳೂರು ನಗದಾಭಿವೃದ್ಧಿ’ ಇಲಾಖೆಯು ನಗದು ಅಭಿವೃದ್ಧಿಗೆ ಸಿಕ್ಕಸಿಕ್ಕ ಕಡೆ ಸುಲಿಗೆಗೆ ಇಳಿದಿದೆ. ದಂಧೆಗೆ ಯಾವ ಹುಲ್ಲುಗಾವಲಾದರೇನು? ಹೈಕಮಾಂಡ್ ಗೆ ಕಪ್ಪ ಸಲ್ಲಿಸಬೇಕೆಂದು ಹಾದಿಬೀದಿಯಲ್ಲಿ ಹೇಳಿಕೊಂಡು ಸಿಕ್ಕಿದ ಕಡೆಯೆಲ್ಲಾ ವಸೂಲಿ ಮಾಡಲಾಗುತ್ತಿದೆ ಎಂದು ಅವರು ದೂರಿದ್ದಾರೆ.

ಕೈಗಾರಿಕೆ, ಉದ್ಯಮ ಚಟುವಟಿಕೆಗೆ ಒಪ್ಪಿಗೆ ಕೊಡಲು KIADB ಇದೆ. ಏಕಗವಾಕ್ಷಿ ವ್ಯವಸ್ಥೆ ಅಡಿಯಲ್ಲಿ ಪ್ರಕ್ರಿಯೆ ನಿರಾತಂಕವಾಗಿ ನಡೆಯುತ್ತಿದೆ. ಅದಕ್ಕೂ ಮುನ್ನ ಉನ್ನತಮಟ್ಟದ ಹೂಡಿಕೆ ಅನುಮೋದನೆ ಸಮಿತಿ ಒಪ್ಪಿಗೆಯನ್ನೂ ಕೊಡುತ್ತದೆ. ಇಷ್ಟೆಲ್ಲ ಇದ್ದ ಮೇಲೆ ಇಲ್ಲಿ BDA ಕೆಲಸ ಏನು? ಯಾರ ಕಿಸೆ ಭರ್ತಿ ಮಾಡಲಿಕ್ಕೆ BDA ಇಂಥ ಅಡ್ಡದಾರಿ ತುಳಿದಿದೆ? ಎಂದು ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವರ್ತನೆಯನ್ನು ಕಟುವಾಗಿ ಟೀಕಿಸಿದ್ದಾರೆ.

ಇದನ್ನೂ ಓದಿ:ಬಿಜೆಪಿ, ಜೆಡಿಎಸ್ ಸೀಟು ಹಂಚಿಕೆ ಶೀಘ್ರ ಫೈನಲ್: ಜನವರಿ ಕೊನೆಯಲ್ಲಿ ಅಮಿತ್ ಶಾ ಜತೆ ಕುಮಾರಸ್ವಾಮಿ ಸಭೆ

ಬೆಂಗಳೂರು ವ್ಯಾಪ್ತಿಯಲ್ಲಿ ತನ್ನ ಅನುಮೋದನೆ ಇಲ್ಲದೆ ಉದ್ಯಮ ಪಾರ್ಕ್ ರಚನೆ, ಅಭಿವೃದ್ಧಿ, ಕೈಗಾರಿಕಾ ಸಮುಚ್ಚಯಗಳ ನಿರ್ಮಾಣ ಮಾಡಬಾರದು ಎಂದು BDA ಫರ್ಮಾನು ಹೊರಡಿಸಿರುವುದು ಬೆಂಗಳೂರು ‘ನಗದಾಭಿವೃದ್ಧಿ’ ಇಲಾಖೆ ಕೈಚಳಕ, ಅನುಮಾನವೇ ಇಲ್ಲ. ತೆಲಂಗಾಣ ಎಲೆಕ್ಷನ್ ಗೆ ಕಲೆಕ್ಷನ್ ಮಾಡಿದಂತೆ ಈಗ ಲೋಕಸಭೆ ಚುನಾವಣೆಗೆ ವಸೂಲಿ ಶುರುವಾಗಿದೆ ಎಂದು ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!