Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ರಾಷ್ಟ್ರೀಯ ನಾಯಕರ ಕುರಿತು ಅಗೌರವದ ಪೋಸ್ಟ್​​ ಆರೋಪ: ಕಾಂಗ್ರೆಸ್​ ವಿರುದ್ಧ ದೂರು

ಬಿಜೆಪಿ ರಾಷ್ಟ್ರೀಯ ನಾಯಕರ ಕುರಿತು ಕಾಂಗ್ರೆಸ್ ಫೇಸ್​​ಬುಕ್ ಪೇಜ್​​ನಲ್ಲಿ ಅಗೌರವದ ಪೋಸ್ಟ್​​​ ಆರೋಪ ಹಿನ್ನೆಲೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.

ಬಿಜೆಪಿ ರಾಷ್ಟ್ರೀಯ ನಾಯಕರ ಕುರಿತು ಅಗೌರವದ ಪೋಸ್ಟ್​​ ಆರೋಪ: ಕಾಂಗ್ರೆಸ್​ ವಿರುದ್ಧ ದೂರು
ಕಾಂಗ್ರೆಸ್​ ಪೋಸ್ಟ್, ದೂರು ನೀಡಿದ ಬಿಜೆಪಿ ನಾಯಕರು
Follow us
ಗಂಗಾಧರ​ ಬ. ಸಾಬೋಜಿ
|

Updated on:Jun 21, 2023 | 5:10 PM

ಬೆಂಗಳೂರು: ಬಿಜೆಪಿ (BJP) ರಾಷ್ಟ್ರೀಯ ನಾಯಕರ ಕುರಿತು ಕಾಂಗ್ರೆಸ್ (Congress) ಫೇಸ್​​ಬುಕ್ ಪೇಜ್​​ನಲ್ಲಿ ಅಗೌರವದ ಪೋಸ್ಟ್​​​ ಆರೋಪ ಹಿನ್ನೆಲೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಬಿಜೆಪಿ ನಿಯೋಗ ದೂರು ನೀಡಿದೆ. ಬಿ.ಎಲ್.ಸಂತೋಷ್ ಮೌತ್​​ಪೀಸ್ ಪ್ರತಾಪಸಿಂಹ ಎಂದು ಅಗೌರವದ ಫೋಟೋ ಹರಿಬಿಡಲಾಗಿತ್ತು. ಸೂಕ್ತಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಎನ್.ರವಿಕುಮಾರ್​​, ತೇಜಸ್ವಿನಿ, ಛಲವಾದಿ ನಾರಾಯಣಸ್ವಾಮಿ ಸೇರಿ ಹಲವು ಮುಖಂಡರಿಂದ ದೂರು ನೀಡಲಾಗಿದೆ.

ಬಿಎಲ್ ಸಂತೋಷನ ಮೌತ್ ಪೀಸ್​ ಪ್ರತಾಪ್ ಸಿಂಹ ಅವರೇ, ನಮ್ಮ ಸರ್ಕಾರದ, ನಮ್ಮ ಸಿಎಂ ಬಗ್ಗೆ ತಲೆ ಕೆಡಿಸಿಕೊಳ್ಳುವುದಕ್ಕಿಂತ ನಿಮ್ಮ ವಿರೋಧ ಪಕ್ಷದ ನಾಯಕನನ್ನು ಮೊದಲು ಆಯ್ಕೆ ಮಾಡಿಕೊಳ್ಳಿ. ಮೈಸೂರಿನ ಸಂಸದನಾಗಿ ಜಿಲ್ಲೆಯಲ್ಲಿ ಎಷ್ಟು ಬಿಜೆಪಿ ಶಾಸಕರನ್ನು ಗೆಲ್ಲಿಸಿದ್ದೀರಿ? ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿಗೆ ಕಾರಣರಾದ ಬಿ.ಎಲ್ ಸಂತೋಷ್ ಅವರನ್ನು ಟೀಕಿಸುವ ಮಿನಿಮಮ್ ದಮ್ಮು ತಾಕತ್ತು ಇದೆಯೇ ಎಂದು ಕಾಂಗ್ರೆಸ್​ ಪ್ರಶ್ನಿಸಿತ್ತು.

ಇದನ್ನೂ ಓದಿ: ಪ್ರತಾಪ್ ಸಿಂಹಗೆ ಚೇಲಾಗಿರಿ ಮಾಡಿ ರೂಢಿ ಇರಬೇಕು: ಎಂಬಿ ಪಾಟೀಲ್​ ವಾಗ್ದಾಳಿ

ಪ್ರತಾಪ್ ಸಿಂಹ ವಿರುದ್ಧ ಎಂಬಿ ಪಾಟೀಲ್​ ಕಿಡಿ

ಪ್ರತಾಪ್ ಸಿಂಹ ಅವರಿಗೆ ಚೇಲಾಗಿರಿ ಮಾಡಿ ರೂಢಿ ಇರಬೇಕು. ಇವರು ಚೇಲಾ ಅಂತಾರೆ, ಬಿ ಎಲ್ ಸಂತೋಷ್ ಚೇಳು ಅಂತಾರೆ. ಬಹುಶಃ ಸಂತೋಷ್ ಬುಟ್ಟಿಯಲ್ಲಿ ಇಂಥ ಚೇಳುಗಳೇ ಬಹಳ ಇರಬೇಕು ಎಂದು ಇತ್ತೀಚೆಗೆ ಸಚಿವ ಎಂಬಿ ಪಾಟೀಲ್​ ತಿರುಗೇಟು ನೀಡಿದ್ದರು.

ಇದನ್ನೂ ಓದಿ: ಜು 03ರಿಂದ ಅಧಿವೇಶನ ಆರಂಭ, ಜೂ 26ರಿಂದ ನೂತನ ಶಾಸಕರಿಗೆ ತರಬೇತಿ ಶಿಬಿರ: ವಿಧಾನಸಭಾಧ್ಯಕ್ಷ ಯುಟಿ ಖಾದರ್‌

ಇವತ್ತು ಅವರಿಗೆ ಕಡಿಯಿರಿ, ನಾಳೆ ಇವರಿಗೆ ಕಡಿಯಿರಿ ಅಂತ ಸಂತೋಷ್ ಚೇಳು ಬಿಡುತ್ತಾರೆ ಅನಿಸುತ್ತದೆ. ಪ್ರತಾಪ್ ಸಿಂಹ ಅವರಿಗೆ ಸದ್ಬುದ್ಧಿ ಕೊಡಲಿ. ಪ್ರತಾಪ್ ಸಿಂಹ ಇದನ್ನೆಲ್ಲ ನಿಲ್ಲಿಸಿ ಅಕ್ಕಿ ಕೊಡಿಸುವ ಕೆಲಸ ಮಾಡಲಿ. ಪ್ರತಾಪ್ ಸಿಂಹ ಇನಿಷಿಯೇಟಿವ್​ ತೆಗೆದುಕೊಂಡು ಅಕ್ಕಿ ಕೊಡಿಸುವ ಪ್ರಯತ್ನ ಮಾಡಲಿ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:04 pm, Wed, 21 June 23

ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ