AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲ್ಲಿಕಾರ್ಜುನ ಖರ್ಗೆ ಮೈಬಣ್ಣ ನಿಂದನೆ: ಆರಗ ಜ್ಞಾನೇಂದ್ರ ವಿರುದ್ಧ ಜಾತಿ ನಿಂದನೆ ದೂರು ದಾಖಲು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೈಬಣ್ಣ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಗ ಜ್ಞಾನೇಂದ್ರ ದೂರು ದಾಖಖಲಾಗಿದೆ.

ಮಲ್ಲಿಕಾರ್ಜುನ ಖರ್ಗೆ ಮೈಬಣ್ಣ ನಿಂದನೆ: ಆರಗ ಜ್ಞಾನೇಂದ್ರ ವಿರುದ್ಧ ಜಾತಿ ನಿಂದನೆ ದೂರು ದಾಖಲು
ಆರಗ ಜ್ಞಾನೇಂದ್ರ
Basavaraj Yaraganavi
| Edited By: |

Updated on: Aug 03, 2023 | 11:41 AM

Share

ಶಿವಮೊಗ್ಗ, (ಆಗಸ್ಟ್ 03): ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮತ್ತು ಸಚಿವ ಈಶ್ವರ್ ಖಂಡ್ರೆ ಅವರ ವಿಚಾರವಾಗಿ ಮಾಜಿ ಸಚಿವ ಆರಗ ಜ್ಞಾನೇಂದ್ರ(Araga Jnanendra )ಆಡಿರುವ ಮಾತು ಈಗ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ, ಕಾಂಗ್ರೆಸ್-ಬಿಜೆಪಿ ಪಡೆ ನಡುವೆ ಕಾಳಗ ಸೃಷ್ಟಿಸಿದೆ. ಆರಗ ಜ್ಞಾನೇಂದ್ರ ಹೇಳಿಕೆಗೆ ಕಾಂಗ್ರೆಸ್ ನಾಯಕರು ಕೆರಳಿ ನಿಂತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಮೈಬಣ್ಣ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಗ ಜ್ಞಾನೇಂದ್ರ ದೂರು ದಾಖಲಿಸಲಾಗಿದೆ. ದಲಿತ ಮುಖಂಡ ಹರ್ಷೇಂದ್ರ ಕುಮಾರ್ ಎನ್ನುವರು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಆರಗ ಜ್ಞಾನೇಂದ್ರ ವಿರುದ್ಧ ಜಾತಿ‌ ನಿಂದನೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಖರ್ಗೆ, ಖಂಡ್ರೆ ಮನ ನೋಯಿಸುವ ಉದ್ದೇಶವಿರಲಿಲ್ಲ; ವಿವಾದಿತ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಅರಗ ಜ್ಞಾನೇಂದ್ರ

ಆರಗ ಜ್ಞಾನೇಂದ್ರ ಏನು ಹೇಳಿದ್ದರು?

ಅಷ್ಟಕ್ಕೂ ಆಗಿದ್ದೇನು ಅಂದ್ರೆ, ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ನಿನ್ನೆ(ಆಗಸ್ಟ್ 02) ಶಿವಮೊಗ್ಗದ ಜಿಲ್ಲೆ ತೀರ್ಥಹಳ್ಳಿಯಲ್ಲಿ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು. ಈ ವೇಳೆ ಮಾತನಾಡಿರೋ ಆರಗ ಜ್ಞಾನೇಂದ್ರ, ಅರಣ್ಯವೇ ಇಲ್ಲದ ಪ್ರದೇಶದವರು ಅರಣ್ಯ ಸಚಿವರಾಗುತ್ತಾರೆ. ಇದು ನಮ್ಮ ರಾಜ್ಯದ ದುರಂತ ಎಂದಿದ್ದಾರೆ. ಬೀದರ್ ಜಿಲ್ಲೆಯ ಈಶ್ವರ್ ಖಂಡ್ರೆ ಅರಣ್ಯ ಸಚಿವರಾಗಿರುವುದಕ್ಕೆ ಈ ಹೇಳಿಕೆ ನೀಡಿದ ಮಾಜಿ ಗೃಹ ಸಚಿವರು ಅಷ್ಟಕ್ಕೇ ಸುಮ್ಮನಾಗಿಲ್ಲ. ಆ ಭಾಗದವರು ಸುಟ್ಟು ಕರಕಲಾಗಿರುತ್ತಾರೆ. ಖರ್ಗೆ ಅವರನ್ನು ನೋಡಿದರೆ ಗೊತ್ತಾಗುತ್ತೆ ಎಂದು ನಾಲಗೆ ಹರಿಬಿಟ್ಟಿದ್ದರು. ಜ್ಞಾನೇಂದ್ರ ಅವರ ಈ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಆರಗ ಜ್ಞಾನೇಂದ್ರ ಅವರ ಈ ಹೇಳಿಕೆ ಕಾಂಗ್ರೆಸ್ ಕೆರಳಿ ಕೆಂಡವಾಗುವಂತೆ ಮಾಡಿದೆ. ಖರ್ಗೆ ಅವರ ಮೈಬಣ್ಣದ ಬಗ್ಗೆ ಅವಹೇಳನ ಮಾಡಿ ಆರಗ ಜ್ಞಾನೇಂದ್ರ, ಬಿಜೆಪಿಯವರಲ್ಲಿ ದಲಿತರ ಬಗ್ಗೆ ಇರುವ ಅಸಹನೆ ಅಸಡ್ಡೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಘಟಕ ಸರಣಿ ಟ್ವೀಟ್ ಮೂಲಕ ಕಿಡಿ ಕಿಡಿಕಾರಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ