AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಠ್ಯ ಪುಸ್ತಕದ ಪೂರ್ಣ ಪರಿಷ್ಕರಣೆ ಆಗಲಿದೆ: ಸಚಿವ ಮಧು ಬಂಗಾರಪ್ಪ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಆದ ಪಠ್ಯ ಪರಿಷ್ಕರಣೆ ಚರ್ಚೆ ಇನ್ನೂ ಮುಗಿದಿಲ್ಲ. ಈ ಬಗ್ಗೆ ಹೇಳಿಕೆ ನೀಡಿದ ಸಚಿವ ಮಧು ಬಂಗಾರಪ್ಪ, ಈ ಬಾರಿ ತುರ್ತಾಗಿ ಕೆಲವು ಪರಿಷ್ಕರಣೆ ನಡೆಸಿದ್ದೇವೆ. ಮುಂದೆ ಸಂಪೂರ್ಣವಾಗಿ ಮಾಡಲಾಗುವುದು ಎಂದಿದ್ದಾರೆ.

ಪಠ್ಯ ಪುಸ್ತಕದ ಪೂರ್ಣ ಪರಿಷ್ಕರಣೆ ಆಗಲಿದೆ: ಸಚಿವ ಮಧು ಬಂಗಾರಪ್ಪ
ಮಧು ಬಂಗಾರಪ್ಪ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Jul 22, 2023 | 4:06 PM

Share

ಮಂಗಳೂರು, ಜುಲೈ 22: ಪೂರ್ಣವಾಗಿ ಪಠ್ಯ ಪುಸ್ತಕ ಪರಿಷ್ಕರಣೆ (Text Book Revision) ಆಗಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಪಠ್ಯವನ್ನು ಬದಲಿಸಿದ್ದರು. ನಾವು ತುರ್ತಾಗಿ ಸ್ವಲ್ಪ ಬದಲಾವಣೆ ಮಾಡಿ ಮೊದಲು ಇದ್ದಂತೆ ತಂದಿದ್ದೇವೆ. ಮುಂದಿನ ವರ್ಷ ಮಕ್ಕಳಿಗೆ ಅನುಕೂಲವಾಗುವಂತೆ ಬದಲಾಯಿಸುತ್ತೇವೆ ಎಂದರು.

ಪಠ್ಯ ಪುಸ್ತಕ ಪರಿಷ್ಕರಣೆ ನಾನು ಅಧಿಕಾರಕ್ಕೆ ಬಂದ ಕೂಡಲೇ ಮಾಡಿದೆ. ಮಕ್ಕಳ ಭವಿಷ್ಯಕ್ಕೆ ಒಳ್ಳೆದಾಗಲಿ ಅಂತ ಈ ತೀರ್ಮಾನ ಮಾಡಲಾಗಿದೆ. ಇದರಲ್ಲಿ ಬಿಜೆಪಿಯವರು ಹೇಳುವ ಯಾವುದೇ ರಾಜಕೀಯ ಇಲ್ಲ. ಪಠ್ಯ ಪರಿಷ್ಕರಣೆ ವಿಚಾರವಾಗಿ ತಜ್ಞರ ಸಮಿತಿಯ ಸಹಾಯ ಪಡೆದು ಅವಶ್ಯಕತೆ ಇದ್ದಲ್ಲಿ ಬದಲಾವಣೆ ಮಾಡುತ್ತೇವೆ. ಯಾವುದೇ ರಾಜಕೀಯ ಉದ್ದೇಶ ಇಲ್ಲದೇ ಬದಲಾವಣೆ ಆಗಲಿದೆ. ಮುಖ್ಯಮಂತ್ರಿಗಳ ಸಲಹೆ ಪಡೆದು ಅವರ ಸಹಕಾರದಿಂದ ಎಲ್ಲವೂ ಆಗಲಿದೆ. ಮಕ್ಕಳಿಗೆ ಉತ್ತಮ ಮತ್ತು ತಿಳುವಳಿಕೆಯ ಪಠ್ಯಗಳು ಇರಬೇಕು ಎಂದರು.

ಕಟೀಲ್ ಭಾವನಾತ್ಮಕ ನಾಟಕಕ್ಕೆ ಬುದ್ಧಿ ಕಲಿಸಿದ ಜನ

ಬಿಜೆಪಿಯವರು ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿಯವರು ಇದೇ ನೀಚ ಬುದ್ದಿ ಮಾಡಿಕೊಂಡು ಹೋಗಲಿ ಎಂದು ಹೇಳಿದ ಮಧು ಬಂಗಾರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ್ ಕಟೀಲ್ ಅವರ ಭಾವನಾತ್ಮಕ ನಾಟಕಕ್ಕೆ ರಾಜ್ಯದ ಜನ ಬುದ್ಧಿ ಕಲಿಸಿದ್ದಾರೆ. ಅವರನ್ನು ಸೋಲಿಸಿ ಜನರು ಕಾಂಗ್ರೆಸ್ ಗೆಲ್ಲಿಸಿದ್ದಾರೆ. ಬಿಜೆಪಿಯವರ ಜೀವನ ನಡೆಯುವುದು ಕೂಡ ನಮ್ಮ ಗ್ಯಾರಂಟಿ ಮೇಲೆ ಎಂದರು.

ಇದನ್ನೂ ಓದಿ: Bengaluru; ಶಿಕ್ಷಣ ಸಚಿವ ಮಧು ಬಂಗಾರಪ್ಪ ದಾರ್ಷ್ಟ್ಯತೆ ಮತ್ತು ದುರಹಂಕಾರ ಪ್ರದರ್ಶಿಸುತ್ತಿದ್ದಾರೆ: ಸಿಟಿ ರವಿ

ಸದ್ಯ ಮಕ್ಕಳ ಪೌಷ್ಟಿಕತೆಗಾಗಿ ವಾರಕ್ಕೆ ಎರಡು ಬಾರಿ ಮೊಟ್ಟೆ ಕೊಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳ ಮಧ್ಯೆ ಸರ್ಕಾರ ಇದನ್ನ ಮಾಡಿದೆ. ಶಿಕ್ಷಕರ ಕೊರತೆ ರಾಜ್ಯದಲ್ಲಿ ಇದೆ, ಅದನ್ನ ನಾವು ಸರಿ ಮಾಡುತ್ತೇವೆ. ಇದರ ಮಧ್ಯೆ ದಾಖಲೆ ಪ್ರಮಾಣದಲ್ಲಿ 25 ಸಾವಿರ ಶಿಕ್ಷಕರ ವರ್ಗಾವಣೆ ಆಗಿದೆ ಎಂದರು.

ಈ ಬಿಜೆಪಿಯವರು ಸಭಾಧ್ಯಕ್ಷರ ಪೀಠವನ್ನೇ ಅವಮಾನಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲೂ ರಾಜ್ಯದ ಜನ ನಮ್ಮನ್ನ ಗೆಲ್ಲಿಸುತ್ತಾರೆ. ಕರಾವಳಿ ಭಾಗ ಕಲ್ಮಶ ಆಗಿದ್ದು ನಿಜ, ಆದರೆ ಮತ್ತೆ ಶಾಂತಿ ಸೌಹಾರ್ದತೆ ಬರಲಿದೆ. ನಮ್ಮ ಸರ್ಕಾರ ಅವೆಲ್ಲವನ್ನೂ ಮತ್ತೆ ಮೂಡಿಸಲಿದೆ ಎಂದರು.

ಸಿದ್ದರಾಮಯ್ಯ ವಿರುದ್ಧವೇ ಸ್ವಪಕ್ಷದ ಎಂಎಲ್​ಸಿ ಬಿ.ಕೆ.ಹರಿಪ್ರಸಾದ್ ಅಸಮಾಧಾನ ಹೊರಹಾಕಿದ ವಿಚಾರವಾಗಿ ಮಾತನಾಡಿದ ಮಧು ಬಂಗಾರಪ್ಪ, ಬಿ.ಕೆ.ಹರಿಪ್ರಸಾದ್ ಅವರು ಹೇಳಿದ ಮಾತಿನ ಬಗ್ಗೆ ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಅವರು ಹಿರಿಯರು ಅವರ ಮಾತುಗಳಲ್ಲಿ ಏನಾದರು ಇದ್ದರೆ ಗಮನಿಸಬೇಕು. ಅವರ ಮಾತಿಗೆ ನಾನು ಪ್ರತಿಕ್ರಿಯೆ ಕೊಡುವುದು ಸರಿ ಇರಲ್ಲ. ಅದು ಪಕ್ಷದ ವೇದಿಕೆಗಳಲ್ಲಿ ಚರ್ಚೆಯಾಗಬೇಕಾದ ವಿಚಾರ. ಅವರ ಮಾತಲ್ಲಿ ಸರಿ ಇದ್ದರೆ ಪಕ್ಷದ ವೇದಿಕೆಯಲ್ಲಿ ಮಾತನಾಡುತ್ತೇನೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ