Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ಜಾತಿಗಣತಿ ವರದಿ: ಬಿಜೆಪಿ ನಿಲುವೇನು? ಕಾಂಗ್ರೆಸ್ ಹೇಳುವುದೇನು?

Karnataka caste census report: ಬಿಹಾರದಲ್ಲಿ ಜಾತಿಗಣತಿ ವರದಿ ಬಿಡುಗಡೆ ಮಾಡಿದ್ದೇ ತಡ ದೇಶದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ.ದೇಶವ್ಯಾಪಿ ಜಾತಿಗಣತಿಗೆ ಆಗ್ರಹ ಶುರುವಾಗುವ ಸಾಧ್ಯತೆಗಳು ದಟ್ಟವಾಗುತ್ತಿದ್ದು, ಈ ಮಧ್ಯೆ ಕರ್ನಾಟಕದಲ್ಲೇ ಭಾರಿ ಜಾತಿಗಣತಿ ವರದಿ ಬಹಿರಂಗಕ್ಕೆ ಭಾರಿ ಒತ್ತಾಯಗಳು ಕೇಳಿ ಬರುತ್ತಿವೆ. ಇನ್ನು ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು? ಜಾತಿಗಣತಿ ವರದಿ ಬಿಡುಗಡೆ ಬಗ್ಗೆ ಬಿಜೆಪಿ ನಾಯಕರ ನಿಲುವೇನು? ಇಲ್ಲಿದೆ ವಿವರ

ಕರ್ನಾಟಕ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ಜಾತಿಗಣತಿ ವರದಿ: ಬಿಜೆಪಿ ನಿಲುವೇನು? ಕಾಂಗ್ರೆಸ್ ಹೇಳುವುದೇನು?
ಬಿಜೆಪಿ-ಜೆಡಿಎಸ್, ಕಾಂಗ್ರೆಸ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Oct 04, 2023 | 10:23 AM

ಬೆಂಗಳೂರು, (ಅಕ್ಟೋಬರ್ 04): ಬಿಹಾರದಲ್ಲಿ (Bihar) ಜಾತಿಗಣತಿ ವರದಿ(caste census report) ಬಹಿರಂಗವಾಗಿದ್ದೇ ಆಗಿದ್ದು, ದೇಶದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ದೇಶವ್ಯಾಪಿ ಜಾತಿಗಣತಿಗೆ ಆಗ್ರಹ ಶುರುವಾಗುವ ಸಾಧ್ಯತೆಗಳು ದಟ್ಟವಾಗುತ್ತಿದ್ದು, ಈ ಮಧ್ಯೆ ಕರ್ನಾಟಕದಲ್ಲೇ ಭಾರಿ ಜಾತಿಗಣತಿ ವರದಿ(Karnataka caste census report) ಬಹಿರಂಗಕ್ಕೆ ಭಾರಿ ಒತ್ತಾಯಗಳು ಕೇಳಿ ಬರುತ್ತಿವೆ. ಸ್ವತಃ ಕಾಂಗ್ರೆಸ್ ನಾಯಕರೇ ಕರ್ನಾಟಕದಲ್ಲೂ ಜಾತಿಗಣತಿ ವರದಿ ಬಿಡುಗಡೆಗೆ ಒತ್ತಾಯಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಬಿಜೆಪಿ ನಾಯಕರೂ ಸಹ ಜಾತಿಗಣತಿ ವರದಿ ಬಿಡುಗಡೆಗೆ ಪಟ್ಟು ಹಿಡಿದಿದ್ದಾರೆ.

ಕರ್ನಾಟಕದಲ್ಲಿ ಜಾತಿ ಗಣತಿ ವರದಿ ಬಿಡುಗಡೆಗೆ ಒತ್ತಾಯ ಕೇಳಿಬಂದಿರುವ ಬಗ್ಗೆ ಬಿಜೆಪಿ ಎಂಎಲ್​ಸಿ ರವಿಕುಮಾರ್ ಮಾತನಾಡಿ, ಜಾತಿಗಣತಿ ವರದಿ ಬಿಡುಗಡೆ ಮಾಡಬೇಕೆಂದು ಬಿಜೆಪಿ ಒತ್ತಾಯಿಸುತ್ತೆ. ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ವರದಿ ಸಿದ್ಧಪಡಿಸಿದ್ದಾರೆ. ವರದಿಯನ್ನು ಏಕೆ ಬಿಡುಗಡೆ ಮಾಡಿಲ್ಲ ಎಂದು ಬಿಜೆಪಿ ಪ್ರಶ್ನಿಸುತ್ತದೆ. ವರದಿ ಬಿಡುಗಡೆ ಮಾಡಬೇಕು ಎಂದು ಬಿಜೆಪಿ ಒತ್ತಾಯ ಮಾಡುತ್ತದೆ. ನಾವು ಕೂಡ ವಿಧಾನಸಭೆ, ಪರಿಷತ್​ನಲ್ಲಿ ಹೋರಾಟ ಮಾಡಿದ್ದೇವೆ. ಕೇವಲ ಹರಿಪ್ರಸಾದ್ ಮಾತ್ರ ಅಲ್ಲ, ನಾವೂ ಒತ್ತಾಯ ಮಾಡುತ್ತೇವೆ ಎಂದರು.

ಇದನ್ನೂ ಓದಿ: ಬಿಹಾರ್ ಬೆನ್ನಲ್ಲೇ ಕರ್ನಾಟಕದಲ್ಲೂ ಗರಿಗೆದರಿದ ಜಾತಿ ಗಣತಿ ವರದಿ ಸಲ್ಲಿಕೆ ಕಾರ್ಯ ಚಟುವಟಿಕೆಗಳು

ಸಿಟಿ ರವಿ ಹೇಳಿದ್ದಿಷ್ಟು

ಈ ಬಗ್ಗೆ ಬಿಜೆಪಿ ನಾಯಕ ಸಿಟಿ ರವಿ, ಜಾತಿ ಗಣತಿಯನ್ನು ಬಿಡುಗಡೆ ಮಾಡಲಿ. ನಮ್ಮ ಪ್ರಧಾನಿಗಳೇ ಅತೀ ಹಿಂದುಳಿದ ವರ್ಗಕ್ಕೆ ಸೇರಿದವರು. ಅತೀ ಹೆಚ್ಚು ಜನ ಹಿಂದುಳಿದ ಸಚಿವರು ಇರುವುದು ಬಿಜೆಪಿ ಸರ್ಕಾರದಲ್ಲಿ. ಅತೀ ಹೆಚ್ಚು ಜನ ಹಿಂದುಳಿದ ಶಾಸಕರು, ಸಂಸದರು ಇರುವುದೂ ಬಿಜೆಪಿಯಲ್ಲಿ. ಯಾರ್ಯಾರು ಜಾತಿ ಹೆಸರು ರಾಜಕಾರಣ ಮಾಡಿದ್ದಾರೋ ಅವರೆಲ್ಲರೂ ಜಾತಿಯನ್ನು ಎಷ್ಟು ಉದ್ದಾರ ಮಾಡಿದ್ದಾರೆ ಎಂಬದೂ ಒಂದು ಸಮೀಕ್ಷೆ ಆಗಬೇಕು. ಜಾತಿಯ ಹೆಸರು ಹೇಳಿಕೊಂಡು ತಮ್ಮ ಕುಟುಂಬ ಉದ್ದಾರ ಮಾಡಿಕೊಂಡಿದ್ದಾರೆ, ಅವರು ಉದ್ದಾರ ಆಗಿದ್ದಾರೆ. ಜಾತಿಯ ಜನರನ್ನು ಎಷ್ಟು ಜನರನ್ನು ಉದ್ಧಾರ ಮಾಡಿದ್ದಾರೆ, ಬಡವರು ಎಷ್ಟು ಜನರನ್ನು ಮೇಲೆತ್ತಿದ್ದಾರೆ ಎಂಬುವುದೂ ಸಮೀಕ್ಷೆ ಆಗಲಿ. ಜಾತಿಯ ಹೆಸರು ಹೇಳಿಕೊಂಡು ರಾಜಕೀಯ ಮಾಡಿದವರು ಚಿಪ್ಪು ಕೊಟ್ಟಿದ್ದಾರೆ ಎಂಬುದು ಆಗ ರಾಜ್ಯದ ಜನರಿಗೆ ಅರ್ಥ ಆಗುತ್ತದೆ ಎಂದು ಹೇಳಿದರು.

ಸದಾನಂದಗೌಡ ಹೇಳಿದ್ದೇನು?

ಬಿಜೆಪಿ ಸಂಸದ ಸದಾನಂದಗೌಡ ಪ್ರತಿಕ್ರಿಯಿಸಿದ್ದು, ಜಾತಿಯ ಹಿಂದೆ ಹೋಗಿ ಏನು ಆಗಿದೆ ಎಂದು ಎಲ್ಲರಿಗೂ ಗೊತ್ತಿದೆ. ಜಾತಿಗೆ ಕೊಡುವ ಇಂಪಾರ್ಟೆನ್ಸ್​​ ಅಭಿವೃದ್ಧಿಗೆ ಕೊಡಿ. ಪರಮೇಶ್ವರ್, ಶಾಮನೂರು, ಹರಿಪ್ರಸಾದ್ ಜಾತಿ ಜಾತಿ ಅಂತಾರೆ. ಜಾತಿ ಜಾತಿಯನ್ನು ಎತ್ತಿ ಕಟ್ಟುವುದನ್ನು ವಿರೋಧ ಮಾಡುತ್ತೇವೆ. ಇದರಿಂದ ಖಂಡಿತಾ ಒಳ್ಳೆಯದಾಗಲ್ಲ ಎಂದಿದ್ದಾರೆ.

ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ

ಸರ್ಕಾರಕ್ಕೆ ಜಾತಿ ಗಣತಿ ವರದಿ ಸಲ್ಲಿಸಿದ ಬಳಿಕ ಚರ್ಚೆ ಮಾಡೋಣ. ಶೀಘ್ರವೇ ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ಜಯಪ್ರಕಾಶ್ ಹೇಳಿದ್ದಾರೆ. ಯಾವ್ಯಾವ ಸಮುದಾಯದ ಸಂಖ್ಯೆ ಎಷ್ಟಿದೆ ಎಂದು ಗೊತ್ತಾಗುತ್ತದೆ. ಜಾತಿ ಗಣತಿ ನಡೆಸಲು ಅಂದಾಜು 100ಕ್ಕೂ ಹೆಚ್ಚು ಕೋಟಿ ರೂ. ಖರ್ಚಾಗಿದೆ. ಇಷ್ಟು ಖರ್ಚು ಮಾಡಿ ವರದಿ ಕೊಡದೆ ಹೋದರೆ ಹಣ ವ್ಯರ್ಥ ಅಲ್ವಾ? ಅನುಕೂಲ ಆಗಬಹುದು ಎಂಬ ಉದ್ದೇಶದಿಂದ ಜಾತಿ ಗಣತಿ ಮಾಡಿದ್ದಾರೆ. ಸರ್ಕಾರದ ದುಂದುವೆಚ್ಚಕ್ಕಾಗಿ ಜಾತಿ ಗಣತಿ ಮಾಡಿಲ್ಲ ಎಂದರು.

ಮುಂದಿನ ದಿನದಲ್ಲಿ ಮೀಸಲಾತಿ ಮಾಡುವ ವೇಳೆ ಅನುಕೂಲ ಆಗಲಿದೆ. ನಮ್ಮ ರಾಜ್ಯದಲ್ಲಿ ಮೀಸಲಾತಿ ಕೂಗು ಕೇಳಿ ಬಂದಿವೆ‌. 50% ಇದ್ದ ಮೀಸಲಾತಿ ಹೆಚ್ಚಳ ಮಾಡಿ ಎಂದು ಒತ್ತಡ ಹಾಕುತ್ತಿದ್ದಾರೆ. ಮಾಹಿತಿ ಬಹಿರಂಗಪಡಿಸಿದ್ರೆ ಅನುಕೂಲವಾಗಬಹುದು ಎಂದು ಅನಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ನೋಡೋಣ ಎಂದ ಸಿದ್ದರಾಮಯ್ಯ

ಕರ್ನಾಟಕದಲ್ಲೂ ಜಾತಿಗಣತಿ ವರದಿ ಬಿಡುಗಡೆಗೆ ಒತ್ತಾಯ ಕುರಿತು ಬೆಳಗಾವಿ ನಗರದಲ್ಲಿ ನಿನ್ನೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಕಾಂತರಾಜು ವರದಿ ಸಿದ್ಧಪಡಿಸಿದ್ದರು. ಆದ್ರೆ ಆಗ ಸಿಎಂ ಆಗಿದ್ದ ಹೆಚ್​ಡಿಕೆಗೆ ವರದಿ ಕೊಡಲು ಹೋದ್ರೆ ಸ್ವೀಕರಿಸಲಿಲ್ಲ. ಆಗ ಸರ್ಕಾರದ ಕಾರ್ಯದರ್ಶಿ ಜಾತಿ ಗಣತಿ ವರದಿಗೆ ಸಹಿ ಮಾಡಲಿಲ್ಲ. ಈಗ ಇರುವ ಅಧ್ಯಕ್ಷರು ಆ ವರದಿಯನ್ನು ತಂದು ಕೊಡಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಜಾತಿ ಗಣತಿ, ಸಾಮಾಜಿಕ, ಆರ್ಥಿಕ ಸಮೀಕ್ಷೆಗೆ ನಾನೇ ಆದೇಶಿಸಿದ್ದೆ. ಕಾಂತರಾಜು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ರು. ನಮ್ಮ ಸರ್ಕಾರದ ಅವಧಿಯಲ್ಲಿ ವರದಿ ಪೂರ್ಣವಾಗಿರಲಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಹೆಚ್​.ಡಿ.ಕುಮಾರಸ್ವಾಮಿ ಆ ವರದಿ ಪಡೆಯಲಿಲ್ಲ. ನಂತರ ಬಿಜೆಪಿ ಸರ್ಕಾರ ಜಯಪ್ರಕಾಶ್ ಹೆಗಡೆರನ್ನು ನೇಮಿಸಿದ್ದು ಅವರು ವರದಿ ನೀಡಿಲ್ಲ, ಕಾರ್ಯದರ್ಶಿ ಸಹಿ ಮಾಡಿಲ್ವಂತೆ. ನಾನು ಒಂದು ಬಾರಿ ವರದಿ ಕೇಳಿದ್ದೆ, ಕೊಡ್ತೀನಿ ಅಂತೇಳಿ ಕೊಡಲಿಲ್ಲ. ಜಾತಿಗಣತಿಯ ವರದಿ ಕೊಟ್ಟರೆ ನೋಡೋಣ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ