AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Congress CLP Meeting: ಬಸವರಾಜ ರಾಯರೆಡ್ಡಿಯ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ

ಪತ್ರ ಬರೆದ ಗುಂಪಿನಲ್ಲಿದ್ದ ಶಾಸಕರು ಮುಖ್ಯಮಂತ್ರಿಗಳ ಎದುರು ಮಾತನಾಡಲು ರಾಯರೆಡ್ಡಿಗೆ ಪಟ್ಟ ಕಟ್ಟಿದ್ದರು ಎನ್ನಲಾಗಿದೆ. ಆದರೆ, ಸಿದ್ದರಾಮಯ್ಯ ಅವರು ಭಾರಿ ಸಿಟ್ಟಾಗಿದ್ದು ಕಂಡ ಬಸವರಾಜ ರಾಯರೆಡ್ಡಿ ಮೌನವಾಗಿದ್ದರು.

Congress CLP Meeting: ಬಸವರಾಜ ರಾಯರೆಡ್ಡಿಯ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ
ಬಸವರಾಜ ರಾಯರೆಡ್ಡಿ & ಸಿದ್ದರಾಮಯ್ಯ
Pramod Shastri G
| Edited By: |

Updated on: Jul 27, 2023 | 10:22 PM

Share

ಬೆಂಗಳೂರು: ಕೆಲವು ಮಂದಿ ಸಚಿವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಕಾಂಗ್ರೆಸ್​ನ (Congress) ಕೆಲವು ಶಾಸಕರು ಮುಖ್ಯಮಂತ್ರಿಗಳಿಗೆ ಪತ್ರ ಬರೆದ ವಿಚಾರ ಗುರುವಾರ ರಾತ್ರಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾರೀ ಚರ್ಚೆಗೆ ಕಾರಣವಾಯಿತು. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅಸಮಾಧಾನಿತ ಶಾಸಕರ ವಿರುದ್ಧ ಕೆಂಡಾಮಂಡಲವಾದರು. ಬಹಿರಂಗ ಪತ್ರ ಬರೆದಿರುವುದಕ್ಕೆ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಅವರು, ಬಸವರಾಜ ರಾಯರೆಡ್ಡಿ (Basvaraj Rayareddi) ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.

ಈ ವೇಳೆ ಮುಖ್ಯಮಂತ್ರಿಗಳ ಕೋಪಕ್ಕೆ ತೇಪೆ ಹಚ್ಚಲು ಮುಂದಾದ ಬಸವರಾಜ ರಾಯರೆಡ್ಡಿ, ‘ಸರ್ ನಾನಲ್ಲ ಪತ್ರ ಬರೆದಿದ್ದು. ಅವರು ಬರೆದಿರುವ ಪತ್ರಕ್ಕೆ ನಾನು ಸಹಿ ಹಾಕಿದ್ದೇನೆ ಅಷ್ಟೆ. ನಿಮ್ಮ ಗಮನ ಸೆಳೆಯಲು ಈ ರೀತಿ ಮಾಡಿದ್ದು ಅಷ್ಟೇ ಸರ್’ ಎಂದರು. ಆಗ ಮತ್ತಷ್ಟು ಗರಂ ಆದ ಸಿದ್ದರಾಮಯ್ಯ, ‘ನನ್ನ ಗಮನ ಸೆಳೆಯುವುದಕ್ಕಾದರೆ ನೇರವಾಗಿ ಬಂದು ಮಾತನಾಡಬೇಕಿತ್ತು. ಅದು ಬಿಟ್ಟು ಈ ರೀತಿಯೆಲ್ಲ ಏಕೆ ಮಾಡುತ್ತೀರಿ’ ಎಂದು ಕಿಡಿಕಾರಿದರು.

ಪತ್ರ ಬರೆದ ಗುಂಪಿನಲ್ಲಿದ್ದ ಶಾಸಕರು ಮುಖ್ಯಮಂತ್ರಿಗಳ ಎದುರು ಮಾತನಾಡಲು ರಾಯರೆಡ್ಡಿಗೆ ಪಟ್ಟ ಕಟ್ಟಿದ್ದರು ಎನ್ನಲಾಗಿದೆ. ಆದರೆ, ಸಿದ್ದರಾಮಯ್ಯ ಅವರು ಭಾರಿ ಸಿಟ್ಟಾಗಿದ್ದು ಕಂಡ ಬಸವರಾಜ ರಾಯರೆಡ್ಡಿ ಮೌನವಾಗಿದ್ದರು. ಇದರಿಂದಾಗಿ, ರಾಯರೆಡ್ಡಿ ಅವರನ್ನು ನಂಬಿ ವಿಷಯ ಪ್ರಸ್ತಾಪಿಸಲು ಮುಂದಾಗಿದ್ದ ಶಾಸಕರಿಗೆ ನಿರಾಶೆಯಾಯಿತು.

ಇದನ್ನೂ ಓದಿ: Congress CLP Meeting: ಸುಳ್ಳುಗಳಿಗೆ ದಾಳವಾಗಬೇಡಿ; ಶಾಸಕಾಂಗ ಸಭೆಯಲ್ಲಿ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

‘ಏಯ್, ಇಂತಹವರನ್ನು ನಂಬಿ ರಾಜಕೀಯ ಮಾಡಿದರೆ ಅಷ್ಟೇ, ಎಂದು ಗೊಣಗುತ್ತಲೇ ಕೆಲವು ಮಂದಿ ಕಾಂಗ್ರೆಸ್‌ ಶಾಸಕರು ಸಭೆಯಿಂದ ಹೊರಹೋದರು. ಇವರನ್ನು ನಂಬಿಕೊಂಡರೆ ಏನೂ ಮಾಡೋಕೆ ಆಗಲ್ಲ, ಎಲ್ಲಾ ವೇಸ್ಟ್ ಎಂದು ಕೆಲವು ಮಂದಿ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದು ಕಂಡುಬಂತು.

ಇದಕ್ಕೂ ಮುನ್ನ, ಶಾಸಕರನ್ನು ಉದ್ದೇಶಿಸಿ ಮಾತನಾಡಿದ್ದ ಸಿದ್ದರಾಮಯ್ಯ, ಪ್ರತಿಪಕ್ಷಗಳ ಸುಳ್ಳುಗಳಿಗೆ ದಾಳವಾಗಬೇಡಿ ಎಂದು ಹೇಳಿದ್ದು, ಏನೇ ಅಸಮಾಧಾನ ಇದ್ದರೂ ತಮ್ಮ ಬಳಿ ಖುದ್ದು ಚರ್ಚಿಸುವಂತೆ ಸೂಚಿಸಿದ್ದಾರೆ. ಎಷ್ಟು ಒತ್ತಡಗಳಿದ್ದರೂ ತಿಂಗಳಿಗೊಮ್ಮೆ ಶಾಸಕರ ಸಭೆ ಕರೆಯುತ್ತೇನೆ ಎಂದೂ ಭರವಸೆ ನೀಡಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ