AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Congress CLP Meeting: ಬಸವರಾಜ ರಾಯರೆಡ್ಡಿಯ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ

ಪತ್ರ ಬರೆದ ಗುಂಪಿನಲ್ಲಿದ್ದ ಶಾಸಕರು ಮುಖ್ಯಮಂತ್ರಿಗಳ ಎದುರು ಮಾತನಾಡಲು ರಾಯರೆಡ್ಡಿಗೆ ಪಟ್ಟ ಕಟ್ಟಿದ್ದರು ಎನ್ನಲಾಗಿದೆ. ಆದರೆ, ಸಿದ್ದರಾಮಯ್ಯ ಅವರು ಭಾರಿ ಸಿಟ್ಟಾಗಿದ್ದು ಕಂಡ ಬಸವರಾಜ ರಾಯರೆಡ್ಡಿ ಮೌನವಾಗಿದ್ದರು.

Congress CLP Meeting: ಬಸವರಾಜ ರಾಯರೆಡ್ಡಿಯ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ
ಬಸವರಾಜ ರಾಯರೆಡ್ಡಿ & ಸಿದ್ದರಾಮಯ್ಯ
Pramod Shastri G
| Updated By: Ganapathi Sharma|

Updated on: Jul 27, 2023 | 10:22 PM

Share

ಬೆಂಗಳೂರು: ಕೆಲವು ಮಂದಿ ಸಚಿವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಕಾಂಗ್ರೆಸ್​ನ (Congress) ಕೆಲವು ಶಾಸಕರು ಮುಖ್ಯಮಂತ್ರಿಗಳಿಗೆ ಪತ್ರ ಬರೆದ ವಿಚಾರ ಗುರುವಾರ ರಾತ್ರಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾರೀ ಚರ್ಚೆಗೆ ಕಾರಣವಾಯಿತು. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅಸಮಾಧಾನಿತ ಶಾಸಕರ ವಿರುದ್ಧ ಕೆಂಡಾಮಂಡಲವಾದರು. ಬಹಿರಂಗ ಪತ್ರ ಬರೆದಿರುವುದಕ್ಕೆ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಅವರು, ಬಸವರಾಜ ರಾಯರೆಡ್ಡಿ (Basvaraj Rayareddi) ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.

ಈ ವೇಳೆ ಮುಖ್ಯಮಂತ್ರಿಗಳ ಕೋಪಕ್ಕೆ ತೇಪೆ ಹಚ್ಚಲು ಮುಂದಾದ ಬಸವರಾಜ ರಾಯರೆಡ್ಡಿ, ‘ಸರ್ ನಾನಲ್ಲ ಪತ್ರ ಬರೆದಿದ್ದು. ಅವರು ಬರೆದಿರುವ ಪತ್ರಕ್ಕೆ ನಾನು ಸಹಿ ಹಾಕಿದ್ದೇನೆ ಅಷ್ಟೆ. ನಿಮ್ಮ ಗಮನ ಸೆಳೆಯಲು ಈ ರೀತಿ ಮಾಡಿದ್ದು ಅಷ್ಟೇ ಸರ್’ ಎಂದರು. ಆಗ ಮತ್ತಷ್ಟು ಗರಂ ಆದ ಸಿದ್ದರಾಮಯ್ಯ, ‘ನನ್ನ ಗಮನ ಸೆಳೆಯುವುದಕ್ಕಾದರೆ ನೇರವಾಗಿ ಬಂದು ಮಾತನಾಡಬೇಕಿತ್ತು. ಅದು ಬಿಟ್ಟು ಈ ರೀತಿಯೆಲ್ಲ ಏಕೆ ಮಾಡುತ್ತೀರಿ’ ಎಂದು ಕಿಡಿಕಾರಿದರು.

ಪತ್ರ ಬರೆದ ಗುಂಪಿನಲ್ಲಿದ್ದ ಶಾಸಕರು ಮುಖ್ಯಮಂತ್ರಿಗಳ ಎದುರು ಮಾತನಾಡಲು ರಾಯರೆಡ್ಡಿಗೆ ಪಟ್ಟ ಕಟ್ಟಿದ್ದರು ಎನ್ನಲಾಗಿದೆ. ಆದರೆ, ಸಿದ್ದರಾಮಯ್ಯ ಅವರು ಭಾರಿ ಸಿಟ್ಟಾಗಿದ್ದು ಕಂಡ ಬಸವರಾಜ ರಾಯರೆಡ್ಡಿ ಮೌನವಾಗಿದ್ದರು. ಇದರಿಂದಾಗಿ, ರಾಯರೆಡ್ಡಿ ಅವರನ್ನು ನಂಬಿ ವಿಷಯ ಪ್ರಸ್ತಾಪಿಸಲು ಮುಂದಾಗಿದ್ದ ಶಾಸಕರಿಗೆ ನಿರಾಶೆಯಾಯಿತು.

ಇದನ್ನೂ ಓದಿ: Congress CLP Meeting: ಸುಳ್ಳುಗಳಿಗೆ ದಾಳವಾಗಬೇಡಿ; ಶಾಸಕಾಂಗ ಸಭೆಯಲ್ಲಿ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

‘ಏಯ್, ಇಂತಹವರನ್ನು ನಂಬಿ ರಾಜಕೀಯ ಮಾಡಿದರೆ ಅಷ್ಟೇ, ಎಂದು ಗೊಣಗುತ್ತಲೇ ಕೆಲವು ಮಂದಿ ಕಾಂಗ್ರೆಸ್‌ ಶಾಸಕರು ಸಭೆಯಿಂದ ಹೊರಹೋದರು. ಇವರನ್ನು ನಂಬಿಕೊಂಡರೆ ಏನೂ ಮಾಡೋಕೆ ಆಗಲ್ಲ, ಎಲ್ಲಾ ವೇಸ್ಟ್ ಎಂದು ಕೆಲವು ಮಂದಿ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದು ಕಂಡುಬಂತು.

ಇದಕ್ಕೂ ಮುನ್ನ, ಶಾಸಕರನ್ನು ಉದ್ದೇಶಿಸಿ ಮಾತನಾಡಿದ್ದ ಸಿದ್ದರಾಮಯ್ಯ, ಪ್ರತಿಪಕ್ಷಗಳ ಸುಳ್ಳುಗಳಿಗೆ ದಾಳವಾಗಬೇಡಿ ಎಂದು ಹೇಳಿದ್ದು, ಏನೇ ಅಸಮಾಧಾನ ಇದ್ದರೂ ತಮ್ಮ ಬಳಿ ಖುದ್ದು ಚರ್ಚಿಸುವಂತೆ ಸೂಚಿಸಿದ್ದಾರೆ. ಎಷ್ಟು ಒತ್ತಡಗಳಿದ್ದರೂ ತಿಂಗಳಿಗೊಮ್ಮೆ ಶಾಸಕರ ಸಭೆ ಕರೆಯುತ್ತೇನೆ ಎಂದೂ ಭರವಸೆ ನೀಡಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ