AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ತಂತ್ರ: ‘ಕೈ’ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ಏನು?

Congress CLP Meeting in Belagavi: ಲೋಕಸಭೆ ಚುನಾವಣೆ ಗೆಲ್ಲೋದಕ್ಕೆ ಎಲ್ಲರೂ ಸಜ್ಜಾಗಬೇಕು. ನಮ್ಮ ಉಚಿತ ಗ್ಯಾರಂಟಿಗಳ ಬಗ್ಗೆ ಹೆಚ್ಚು ಹೆಚ್ಚು ಪ್ರಚಾರವನ್ನ ಮಾಡಬೇಕು ಎಂದು ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ತಂತ್ರ: ‘ಕೈ’ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ಏನು?
ಸಿದ್ದರಾಮಯ್ಯ
Follow us
ಪ್ರಸನ್ನ ಗಾಂವ್ಕರ್​
| Updated By: Ganapathi Sharma

Updated on: Dec 14, 2023 | 6:46 AM

ಬೆಳಗಾವಿ, ಡಿಸೆಂಬರ್ 14: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆಯ ಚಳಿಗಾಲದ ಅಧಿವೇಶನ (Winter Session) ಮುಕ್ತಾಯದ ಹಂತದಲ್ಲೂ ಕಾಂಗ್ರೆಸ್ ಸನ್ನದ್ಧ ಸ್ಥಿತಿಯನ್ನು ಹಾಗೇ ಕಾಯ್ದುಕೊಂಡಿದೆ. ಎರಡೇ ವಾರದಲ್ಲಿ ಎರಡನೇ ಬಾರಿಗೆ ಕಾಂಗ್ರೆಸ್ ಶಾಸಕಾಂಗ ಸಭೆ (Congress CLP Meeting) ನಡೆದಿದ್ದು ಕುತೂಹಲದ ಬೆಳವಣಿಗೆಗಳೂ ನಡೆದಿವೆ. ಬೆಳಗಾವಿ ಚಳಿಗಾಲದ ಅಧಿವೇಶನ ಮುಗಿಯಲು ಇನ್ನು ಎರಡೇ ದಿನ ಬಾಕಿ. ಕಳೆದ ವಾರ ವಿಪಕ್ಷಗಳನ್ನು ಎದುರಿಸಲು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸಿದ್ಧತೆ ಮಾಡಿಕೊಂಡಿತ್ತು. ಈ ವಾರ ಸಿದ್ಧತೆಗಳನ್ನು ಹಾಗೇ ಮುಂದಿನ ದಿನಗಳಿಗೂ ಕಾಪಾಡಿಕೊಂಡು ಮುಂದುವರಿಯಲು ಮತ್ತೆ ಶಾಸಕಾಂಗ ಸಭೆ ನಡೆಸಲಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ನೇತೃತ್ವದಲ್ಲಿ ಬೆಳಗಾವಿ ಹೊರವಲಯದ ರೆಸಾರ್ಟ್​​ನಲ್ಲಿ ಶಾಸಕಾಂಗ ಸಭೆ ನಡೆಸಿ ರಣತಂತ್ರ ರೂಪಿಸಲಾಗಿದೆ.

ಲೋಕಸಭೆ ಚುನಾವಣೆ ಗೆಲ್ಲೋದಕ್ಕೆ ಎಲ್ಲರೂ ಸಜ್ಜಾಗಬೇಕು. ನಮ್ಮ ಉಚಿತ ಗ್ಯಾರಂಟಿಗಳ ಬಗ್ಗೆ ಹೆಚ್ಚು ಹೆಚ್ಚು ಪ್ರಚಾರವನ್ನ ಮಾಡಬೇಕು ಎಂದು ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಗ್ಯಾರಂಟಿಗಳ ಬಗ್ಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಮಾವೇಶ ಮಾಡಿ. ಸಮಾವೇಶ ಮಾಡೋದ್ರ ಮೂಲಕ ಗ್ಯಾರಂಟಿ ಬಗ್ಗೆ ಹೆಚ್ಚು ಪ್ರಚಾರ ಮಾಡಿ ಅಂತಾ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲ ಸಚಿವರು ಮತ್ತು ಶಾಸಕರಿಗೆ ಸಿಎಂ ಹೇಳಿದ್ದಾರೆ.

ಸಭೆಗೆ ಗೈರಾದ ಕೆಲ ಸಚಿವರ ಮೇಲೆ ಸಿಎಂ ಸಿಡಿಮಿಡಿ!

ಕಾಂಗ್ರೆಸ್‌ ಶಾಸಕಾಂಗ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸಿಡಿಮಿಡಿಗೊಂಡ ಪ್ರಸಂಗ ನಡೆದಿದೆ. ಶಾಸಕಾಂಗ ಸಭೆಗೆ ಅನಿವಾರ್ಯ ಕಾರಣಕ್ಕೆ ಕೆಲವು ಸಚಿವರು ಗೈರಾಗಿದ್ರು. ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್, ಶರಣು ಪ್ರಕಾಶ್ ಪಾಟೀಲ್, ಜಮೀರ್ ಅಹಮದ್ ಹಾಗೂ ಸತೀಶ್ ಜಾರಕಿಹೊಳಿ ಸೇರಿದಂತೆ ಹಲವರು ಚಕ್ಕರ್ ಹೊಡೆದಿದ್ದು ಸಿಎಂ ಗರಂ ಆಗಿದ್ದಾರೆ.

ಶಾಸಕಾಂಗ ಪಕ್ಷದ ಸಭೆಯಲ್ಲೂ ಮತ್ತೆ ದೂರುಗಳ ಸರಮಾಲೆ ಮುಂದುವರಿದಿದೆ.‌ ಮತ್ತೆ ಸಚಿವರ ಮೇಲೆ ದೂರು ಹೇಳಿದ ಬಿ.ಆರ್ ಪಾಟೀಲ್, ಸಚಿವರ ವರ್ತನೆಗಳು ಬದಲಾಗಿಲ್ಲ ಎಂದು ದೂರಿದ್ದಾರೆ. ಅಧಿಕಾರಿಗಳ ಮೇಲೆ ದೂರು ಹೇಳಿದ ಕೆಲ ಶಾಸಕರು, ಶಾಸಕರ ಮನವಿಗಳನ್ನ ಅಧಿಕಾರಿಗಳು ಸೀರಿಯಸ್ ಆಗಿ ಪರಿಗಣಿಸುವುದಿಲ್ಲ. ಶಾಸಕರನ್ನ ಅಸಡ್ಡೆಯಿಂದ ನೋಡ್ತಾರೆ ಎಂದು ದೂರಿದ್ದಾರೆ. ಸಚಿವರು ಈ ಬಗ್ಗೆ ಗಮನಹರಿಸಲಿ, ಸಚಿವರು ಈ ವಿಚಾರವನ್ನ ಗಂಭೀರವಾಗಿ ಪರಿಗಣಿಸಿ ಎಂದು ಒತ್ತಾಯಿಸಿದ್ದಾರೆ.‌

ಇದನ್ನೂ ಓದಿ: ಸಿದ್ದರಾಮಯ್ಯ ಮುಸಲ್ಮಾನರೇ, ವಿವಾದತ್ಮಕ ಹೇಳಿಕೆ ನೀಡಿದ ಈಶ್ವರಪ್ಪ!

ಡಿನ್ನರ್ ಮೀಟ್​ನಲ್ಲಿ ಸೋಮಶೇಖರ್, ಹೆಬ್ಬಾರ್ ಭಾಗಿ

ಬಿಜೆಪಿಯ ಶಾಸಕರಿಬ್ಬರು ಕಾಂಗ್ರೆಸ್ ಶಾಸಕಾಂಗ ಸಭೆಯ ಡಿನ್ನರ್​ನಲ್ಲಿ ಭಾಗಿ ಆಗಿದ್ದರು. ಕಾಂಗ್ರೆಸ್ ಶಾಸಕಾಂಗ ಸಭೆ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಶಾಸಕರಿಗೆ ಭೋಜನಕೂಟ ಏರ್ಪಾಟು ಮಾಡಿದ್ದರು. ಭೋಜನಕೂಟಕ್ಕೆ ಅಧಿಕೃತವಾಗಿ ಬಿಜೆಪಿಯ ಎಂಎಲ್​ಸಿ ಹೆಚ್​.ವಿಶ್ವನಾಥ್, ಶಾಸಕರಾದ ಎಸ್.ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಭಾಗಿಯಾಗಿದ್ದು ಕುತೂಹಲ ಮೂಡಿಸಿದೆ.

ಮತ್ತಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ