AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರ ಅಕ್ಕಿ ನೀಡದಿರುವುದನ್ನು ಕಾಂಗ್ರೆಸ್​​ ಖಂಡಿಸುತ್ತೆ, ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್

ಅನ್ನಭಾಗ್ಯಕ್ಕೆ ಇದೀಗ ಅಕ್ಕಿ ಕೊರತೆ ಎದುರಾಗಿದ್ದು, ಕೇಂದ್ರ ಅಕ್ಕಿ ನೀಡದಿರುವುದನ್ನು ಕಾಂಗ್ರೆಸ್‌ ತೀವ್ರವಾಗಿ ಖಂಡಿಸುತ್ತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ದೊಡ್ಡ ಹೋರಾಟ ಮಾಡುವುದಾಗಿ ಹೇಳಿದ್ದಾರೆ.

ಕೇಂದ್ರ ಸರ್ಕಾರ ಅಕ್ಕಿ ನೀಡದಿರುವುದನ್ನು ಕಾಂಗ್ರೆಸ್​​ ಖಂಡಿಸುತ್ತೆ, ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್
ಡಿಸಿಎಂ ಡಿ.ಕೆ.ಶಿವಕುಮಾರ್
Follow us
ಗಂಗಾಧರ​ ಬ. ಸಾಬೋಜಿ
|

Updated on:Jun 15, 2023 | 11:22 PM

ಮೈಸೂರು: ಹೆಚ್ಚುವರಿ ಅಕ್ಕಿ ಕೊಡಲ್ಲವೆಂದು ಕೇಂದ್ರ ಸರ್ಕಾರ ಪತ್ರ ಬರೆದಿದೆ. ಅಕ್ಕಿ ನೀಡದಿರುವುದನ್ನು ಕಾಂಗ್ರೆಸ್‌ ತೀವ್ರವಾಗಿ ಖಂಡಿಸುತ್ತೆ. ನಾವು ಪುಕ್ಸಟ್ಟೆ ಕೇಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DCM DK Shivakumar) ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಅವರು, ನಮಗೆ ಕೊಡಬೇಕಾಗುತ್ತೆಂದು ಎಲ್ಲಾ ರಾಜ್ಯಕ್ಕೂ ಕೊಡಲ್ಲ ಅಂದಿದ್ದಾರೆ. ಈ ಬಗ್ಗೆ ದೊಡ್ಡ ಹೋರಾಟ ಮಾಡುತ್ತೇವೆ, ರೂಪುರೇಷೆ ಬಗ್ಗೆ ನಾಳೆ ಹೇಳುತ್ತೇನೆ ಎಂದರು.

ಕರ್ನಾಟಕ ರಾಜ್ಯದ ರೈತರಿಂದಲೇ ಅಕ್ಕಿ ಖರೀದಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಓಪನ್ ಮಾರ್ಕೆಟ್‌ನಲ್ಲಿ ಅಕ್ಕಿ ಖರೀದಿ ಮಾಡಲು ಸಾಧ್ಯವಿಲ್ಲ. ಕೆಲವು ಸಂಸ್ಥೆಗಳು, ಬೇರೆ ಏಜೆನ್ಸಿಗಳ ಮೂಲಕ ಖರೀದಿ ಮಾಡಬೇಕು. ಯಾರ ಬಳಿಯೂ‌ ಬೆಟ್ಟು ತೋರಿಸುಕೊಳ್ಳುವ ರೀತಿ ಕೆಲಸ ಮಾಡುವುದಿಲ್ಲ. ತಿನ್ನುವ ಅಕ್ಕಿ ಹಾಗೂ ಬಡವರ ಮೇಲೆ ರಾಜಕೀಯ ಮಾಡುವುದು ಸರಿಯಲ್ಲ ಎಂದು ಹೇಳಿದರು.

ಹೈಕಮಾಂಡ್​ ಭೇಟಿಗೆ ಮುಂದಾದ ಸಿಎಂ ಸಿದ್ಧರಾಮಯ್ಯ

ಈ ವಿಚಾರವಾಗಿ ಹೈಕಮಾಂಡ್‌ ಜೊತೆ ಮಾತನಾಡಲು ಸಿಎಂ ಸಿದ್ಧರಾಮಯ್ಯ ಅವರು ಜೂ.21 ರಂದು ದೆಹಲಿಗೆ ತೆರಳಲಿದ್ದಾರೆ. ಇದೇ ವೇಳೆ ಭೇಟಿಗೆ ಅವಕಾಶ ಸಿಕ್ಕರೆ ಪ್ರಧಾನಮಂತ್ರಿ ಹಾಗೂ ರಾಷ್ಟ್ರಪತಿಗಳನ್ನೂ ಭೇಟಿಯಾಗಿ ಬರಲಿದ್ದಾರೆ. ಸೌಜನ್ಯ ಭೇಟಿ ವೇಳೆ ರಾಜ್ಯದ ವಿಚಾರಗಳ ಬಗ್ಗೆಯೂ ಪ್ರಸ್ತಾಪಿಸುವ ಸಾಧ್ಯತೆಯಿದೆ. ಅದರಲ್ಲೂ ಮುಖ್ಯವಾಗಿ ಅನ್ನಭಾಗ್ಯಕ್ಕೆ ನೀಡುವ ಅಕ್ಕಿ ಬಗ್ಗೆ ಚರ್ಚೆ ನಡೆಸಲಿದ್ದು, ರಾಜ್ಯ ಹೆಚ್ಚಿನ ಪ್ರಮಾಣದಲ್ಲಿ ಅಕ್ಕಿ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಅಕ್ಕಿ ರಾಜಕೀಯ ಜಟಾಪಟಿ ನಡುವೆ ಖುದ್ದು ಪ್ರಧಾನಿ ಮೋದಿ ಭೇಟಿಗೆ ಮುಂದಾದ ಸಿದ್ದರಾಮಯ್ಯ

ಆದರೆ ಇನ್ನು ಈವರೆಗೂ ಪ್ರಧಾನಮಂತ್ರಿ ಹಾಗೂ ರಾಷ್ಟ್ರಪತಿಗಳ ಕಚೇರಿಯಿಂದ ಅಧಿಕೃತ ಭೇಟಿ ಬಗ್ಗೆ ಸಮಯವಕಾಶದ ಬಗ್ಗೆ ಮಾಹಿತಿ ಬಂದಿಲ್ಲ. ಅವಕಾಶ ದೊರೆತ ತಕ್ಷಣ ಭೇಟಿ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:17 pm, Thu, 15 June 23

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ