AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಕ್ರೌಡ್​ ಫಂಡ್​​​ಗೆ ಕರ್ನಾಟಕದ ಕೊಡುಗೆ ಅತಿ ಕಡಿಮೆ! ಎಷ್ಟು ಗೊತ್ತೇ?

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವೇ ಅಸ್ತಿತ್ವದಲ್ಲಿರುವುದರಿಂದ ಪಕ್ಷದ ಹೈಕಮಾಂಡ್ ಆರಂಭಿಸಿರುವ ಕ್ರೌಡ್ ​ಫಂಡಿಂಗ್​ಗೆ ಇಲ್ಲಿಂದ ಉತ್ತಮ ಸ್ಪಂದನೆ ದೊರೆಯಬಹುದು ಎಂಬ ನಿರೀಕ್ಷೆ ಇತ್ತು. ಆದರೆ, ಆಗಿದ್ದೇನು? ಕರ್ನಾಟಕದಿಂದ ಎಷ್ಟು ಮಂದಿ 1 ಲಕ್ಷ ರೂಪಾಯಿಗೂ ಹೆಚ್ಚು ದೇಣಿಗೆ ನೀಡಿದ್ದಾರೆ? ಇಲ್ಲಿದೆ ಮಾಹಿತಿ.

ಕಾಂಗ್ರೆಸ್ ಕ್ರೌಡ್​ ಫಂಡ್​​​ಗೆ ಕರ್ನಾಟಕದ ಕೊಡುಗೆ ಅತಿ ಕಡಿಮೆ! ಎಷ್ಟು ಗೊತ್ತೇ?
ಕಾಂಗ್ರೆಸ್ ಕ್ರೌಡ್​ ಫಂಡ್​​​ಗೆ ಕರ್ನಾಟಕದ ಕೊಡುಗೆ ಅತಿ ಕಡಿಮೆ! ಎಷ್ಟು ಗೊತ್ತೇ?
ಗಣಪತಿ ಶರ್ಮಾ
|

Updated on: Jan 24, 2024 | 12:48 PM

Share

ಬೆಂಗಳೂರು, ಜನವರಿ 24: ದೇಣಿಗೆ ಸಂಗ್ರಹಕ್ಕಾಗಿ ಕಾಂಗ್ರೆಸ್ (Congress) ಪಕ್ಷವು ಆರಂಭಿಸಿದ್ದ ಕ್ರೌಡ್‌ ಫಂಡಿಂಗ್ (Crowdfunding) ಇನ್ನೂ ವೇಗವನ್ನು ಪಡೆದುಕೊಂಡಿಲ್ಲ. ಈವರೆಗೆ ಸುಮಾರು ಮೂರು ಲಕ್ಷ ದಾನಿಗಳಿಂದ ಪಕ್ಷವು ಕೇವಲ 16 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ. ಇದು ಪಕ್ಷದ ಹೈಕಮಾಂಡ್​​​ ಆತಂಕಕ್ಕೆ ಕಾರಣವಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವೇ ಅಸ್ತಿತ್ವದಲ್ಲಿರುವುದರಿಂದ ಸಹಜವಾಗಿಯೇ ರಾಜ್ಯದಿಂದ ಕಾಂಗ್ರೆಸ್​​ಗೆ ಕ್ರೌಡ್​ ಫಂಡ್​ಗೆ ಹೆಚ್ಚು ಮೊತ್ತ ಜಮೆಯಾಗಬಹುದು ಎಂಬ ನಿರೀಕ್ಷೆ ಸಹಜವಾಗಿಯೇ ಇತ್ತು. ಆದರೆ, ಕರ್ನಾಟಕದಿಂದ ಅತಿ ಕಡಿಮೆ ಮಂದಿ ದೇಣಿಗೆ ನೀಡಿರುವುದು ಬೆಳಕಿಗೆ ಬಂದಿದೆ.

1 ಲಕ್ಷ ರೂಪಾಯಿಗಿಂತ ಹೆಚ್ಚಿನ ಮೊತ್ತ ದೇಣಿಗೆ ನೀಡಿದವರ ಪಟ್ಟಿಯನ್ನು ಕಾಂಗ್ರೆಸ್ ಖಜಾಂಚಿ ಅಜಯ್ ಮಾಕೆನ್ ಸಾಮಾಜಿಕ ಮಾಧ್ಯಮ ಎಕ್ಸ್​​​ನಲ್ಲಿ ಪ್ರಕಟಿಸಿದ್ದಾರೆ. ಇದರಲ್ಲಿ ರಾಜಸ್ಥಾನ ಅಗ್ರ ಸ್ಥಾನ ಕಾಯ್ದುಕೊಂಡಿದ್ದರೆ, ಕರ್ನಾಟಕ 11ನೇ ಸ್ಥಾನದಲ್ಲಿದೆ.

ರಾಜಸ್ಥಾನದಲ್ಲಿ 181 ಮಂದಿ ದಾನಿಗಳು 1 ಲಕ್ಷ ರೂಪಾಯಿಗೂ ಹೆಚ್ಚು ದೇಣಿಗೆ ನೀಡಿದ್ದಾರೆ. ಹರಿಯಾಣದಲ್ಲಿ 73 ಮಂದಿ ದಾನಿಗಳು 1 ಲಕ್ಷ ರೂಪಾಯಿಗೂ ಹೆಚ್ಚು ನೀಡಿದ್ದಾರೆ. ಕರ್ನಾಟಕದಲ್ಲಿ ಕೇವಲ 11 ಮಂದಿ ಮಾತ್ರ 1 ಲಕ್ಷ ರೂಪಾಯಿಗೂ ಹೆಚ್ಚು ದೇಣಿಗೆ ನೀಡಿದ್ದಾರೆ.

ಇದನ್ನೂ ಓದಿ: Lok Sabha Election: ಕೇಂದ್ರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸಲು 40 ಸಾವಿರ ಕಾರ್ಯಕರ್ತರನ್ನು ನಿಯೋಜಿಸಲಿದೆ ಬಿಜೆಪಿ

‘ಹೊಸ ಅನುಭವ, ಹಲವು ಹೊಸ ಪ್ರಯೋಗಗಳು! ಈ ಅಭಿಯಾನದಡಿ ನಾವು 16 ಕೋಟಿ ರೂ. ಸಂಗ್ರಹ ದಾಟಿದ್ದೇವೆ. ಇದುವರೆಗೆ ಸುಮಾರು 3 ಲಕ್ಷ ಮಂದಿ ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ಮೊದಲ ಬಾರಿಗೆ ಆರಂಭವಾದ ಇಂತಹ ಅಭಿಯಾನ ನಮಗೆ ಹೊಸ ವಿಷಯಗಳನ್ನು ಕಲಿಸಿದೆ. ನಾವೂ ಕೂಡ ಅನೇಕ ಹೊಸ ಪ್ರಯೋಗಗಳನ್ನು ಮಾಡಿದ್ದೇವೆ. ಇದರಿಂದ ರಾಜಕೀಯವನ್ನು ಸ್ವಚ್ಛವಾಗಿ ಮಾಡಬಹುದು. ಅಂತಹ ಹೊಸ ಯಶಸ್ವಿ ಪ್ರಯೋಗವನ್ನು ನಾನು ಉಲ್ಲೇಖಿಸಲು ಬಯಸುತ್ತೇನೆ. ಜನವರಿ 12 ರಂದು ಸಚಿನ್ ಪೈಲಟ್ ಅವರು 138 ಕಾಂಗ್ರೆಸ್ ನಾಯಕರನ್ನು ತಮ್ಮ ನಿವಾಸಕ್ಕೆ ಆಹ್ವಾನಿಸಿದರು ಮತ್ತು ಈ ಅಭಿಯಾನಕ್ಕೆ 1 ಲಕ್ಷದ 38 ಸಾವಿರ ರೂಪಾಯಿಗಳ ಮೊತ್ತವನ್ನು ದೇಣಿಗೆ ನೀಡಲು ಅವರೆಲ್ಲರಿಗೂ ಸ್ಫೂರ್ತಿ ನೀಡಿದರು. ಆದ್ದರಿಂದ, 1 ಲಕ್ಷಕ್ಕಿಂತ ಹೆಚ್ಚಿನ ದಾನಿಗಳಲ್ಲಿ ಮತ್ತು ಒಟ್ಟು ಮೊತ್ತದಲ್ಲಿ ರಾಜಸ್ಥಾನ ಉನ್ನತ ಸ್ಥಾನ ತಲುಪಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು