AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೋಕ್ಷವಾಗಿ ಪ್ರತ್ಯೇಕ ಭಾರತದ ಮಾತು ಆಡಿದ ಕಾಂಗ್ರೆಸ್​ ಮಾಜಿ ಸಂಸದ ಡಿಕೆ ಸುರೇಶ್​​

ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಮಾಡುತ್ತಿರುವ ತಾರತಮ್ಯವನ್ನು ವಿರೋಧಿಸುವ ಭರದಲ್ಲಿ ಮಾಜಿ ಸಂಸದ ಡಿಕೆ ಸುರೇಶ್​ ಈ ಹಿಂದೆ ಪ್ರತ್ಯೇಕ ಭಾರತದ ಮಾತಗಳನ್ನು ಆಡಿದ್ದರು. ಇದೀಗ ಮತ್ತೆ ಡಿಕೆ ಸುರೇಶ್​ ಕುಮಾರ್​ ಮತ್ತೆ ಪರೋಕ್ಷವಾಗಿ ಪ್ರತ್ಯೇಕ ಭಾರತದ ಮಾತುಗಳನ್ನು ಆಡಿದ್ದಾರೆ.

ಪರೋಕ್ಷವಾಗಿ ಪ್ರತ್ಯೇಕ ಭಾರತದ ಮಾತು ಆಡಿದ ಕಾಂಗ್ರೆಸ್​ ಮಾಜಿ ಸಂಸದ ಡಿಕೆ ಸುರೇಶ್​​
ಮಾಜಿ ಸಂಸದ ಡಿಕೆ ಸುರೇಶ್​
Sunil MH
| Edited By: |

Updated on: Oct 11, 2024 | 12:20 PM

Share

ಬೆಂಗಳೂರು, ಅಕ್ಟೋಬರ್​ 11: ಕೇಂದ್ರ ಸರ್ಕಾರ (Union Government) ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿರುವ ಬಗ್ಗೆ ಕಳೆದ ಬಾರಿಯೇ ಈ ವಿಷಯ ಪ್ರಸ್ತಾಪ ಮಾಡಿದ್ದೆ. ಕರ್ನಾಟಕದ (Karnataka) ಸೇರಿ ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಅಂತ ಹೇಳಿದ್ದೆ. ಹೊರತು ಪ್ರತ್ಯೇಕ ದಕ್ಷಿಣ ಭಾರತ ನನ್ನ ಕೂಗಲ್ಲ. ತಮಿಳುನಾಡಿನಲ್ಲಿ ಬಹಳ ಹಿಂದೆಯೇ ಈ ಕೂಗು ಇತ್ತು. ಈಗ ಮತ್ತೆ ಅನ್ಯಾಯ ಮಾಡಿ ಕೂಗು ಏಳಿಸಬೇಡಿ. ನಾವು ಭಾರತಾಂಬೆಯ ಮಕ್ಕಳು. ನಮ್ಮನ್ನು ದೂರ ಮಾಡುವ ಪ್ರಯತ್ನ ಮಾಡಬೇಡಿ ಎಂದು ಕೇಂದ್ರ ಸರ್ಕಾರಕ್ಕೆ ಮಾಜಿ ಸಂಸದ ಡಿಕೆ ಸುರೇಶ್ ಕುಮಾರ್​ (DK Suresh Kumar)​ ಎಚ್ಚರಿಕೆ ನೀಡಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗುರುವಾರ ಕೇಂದ್ರ ಸರ್ಕಾರ ತೆರಿಗೆ ಹಣ ಬಿಡುಗಡೆ ಮಾಡಿದೆ. ದಕ್ಷಿಣ ಭಾರತಕ್ಕೆ 28,152 ಕೋಟಿ ರೂಪಾಯಿ ನೀಡಿದೆ. ಉತ್ತರ ಪ್ರದೇಶಕ್ಕೆ ಮಾತ್ರ 32 ಸಾವಿರ ಕೋಟಿ ರೂ. ಕೊಟ್ಟಿದ್ದಾರೆ. ಈ ಮೂಲಕ ಪದೇಪದೆ ಕೆಣಕುವ ಪ್ರಯತ್ನ ನಡೆಯುತ್ತಿದೆ. ದುಃಖದಿಂದ ಈ ಮಾತು ಹೇಳಬೇಕಿದೆ. ರಾಜ್ಯದ ಅಭಿವೃದ್ಧಿಗೆ ಅನ್ಯಾಯವಾಗುತ್ತಿದೆ. ದಕ್ಷಿಣ ಭಾರತದ ರಾಜ್ಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗಬೇಕು ಎಂದರು.

ಇದನ್ನೂ ಓದಿ: ಡಿಕೆ ಸುರೇಶ್ ಪ್ರತ್ಯೇಕ ರಾಷ್ಟ್ರ ಹೇಳಿಕೆಯಿಂದ ವಿವಾದದ ಕಿಡಿ: ಮುಗಿಬಿದ್ದ ಬಿಜೆಪಿ

ರಾಜ್ಯದಲ್ಲಿ ಬಿಜೆಪಿಗೆ ಹೆಚ್ಚಿನ ಬೆಂಬಲ ಇದೆ, ಆದರೆ ಇಲ್ಲಿನ ನಾಯಕರು ಧ್ವನಿ ಎತ್ತುತ್ತಿಲ್ಲ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತಕ್ಕೆ ಹೆಚ್ಚಿನ ತೆರಿಗೆ ನೀಡಿ. ಕರ್ನಾಟಕದಿಂದ ಬಿಜೆಪಿಯ 19 ಸಂಸದರು ಆಯ್ಕೆಯಾಗಿದ್ದಾರೆ. ಈ ಸಂಸದರು ಧ್ವನಿ ಎತ್ತುತ್ತಿಲ್ಲ. ನಾನು ಒತ್ತಾಯ ಮಾಡಿತ್ತೇನೆ, ನಿಮ್ಮ ನೀತಿ ಬದಲಾವಣೆ ಮಾಡಿ. ರಾಜ್ಯಕ್ಕೆ, ದಕ್ಷಿಣ ಭಾರತಕ್ಕೆ ಹೆಚ್ಚಿನ ತೆರಿಗೆ ನೀಡಿ ಎಂದು ಒತ್ತಾಯಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ
ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ