AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೋಕ್ಷವಾಗಿ ಪ್ರತ್ಯೇಕ ಭಾರತದ ಮಾತು ಆಡಿದ ಕಾಂಗ್ರೆಸ್​ ಮಾಜಿ ಸಂಸದ ಡಿಕೆ ಸುರೇಶ್​​

ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಮಾಡುತ್ತಿರುವ ತಾರತಮ್ಯವನ್ನು ವಿರೋಧಿಸುವ ಭರದಲ್ಲಿ ಮಾಜಿ ಸಂಸದ ಡಿಕೆ ಸುರೇಶ್​ ಈ ಹಿಂದೆ ಪ್ರತ್ಯೇಕ ಭಾರತದ ಮಾತಗಳನ್ನು ಆಡಿದ್ದರು. ಇದೀಗ ಮತ್ತೆ ಡಿಕೆ ಸುರೇಶ್​ ಕುಮಾರ್​ ಮತ್ತೆ ಪರೋಕ್ಷವಾಗಿ ಪ್ರತ್ಯೇಕ ಭಾರತದ ಮಾತುಗಳನ್ನು ಆಡಿದ್ದಾರೆ.

ಪರೋಕ್ಷವಾಗಿ ಪ್ರತ್ಯೇಕ ಭಾರತದ ಮಾತು ಆಡಿದ ಕಾಂಗ್ರೆಸ್​ ಮಾಜಿ ಸಂಸದ ಡಿಕೆ ಸುರೇಶ್​​
ಮಾಜಿ ಸಂಸದ ಡಿಕೆ ಸುರೇಶ್​
Sunil MH
| Edited By: |

Updated on: Oct 11, 2024 | 12:20 PM

Share

ಬೆಂಗಳೂರು, ಅಕ್ಟೋಬರ್​ 11: ಕೇಂದ್ರ ಸರ್ಕಾರ (Union Government) ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿರುವ ಬಗ್ಗೆ ಕಳೆದ ಬಾರಿಯೇ ಈ ವಿಷಯ ಪ್ರಸ್ತಾಪ ಮಾಡಿದ್ದೆ. ಕರ್ನಾಟಕದ (Karnataka) ಸೇರಿ ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಅಂತ ಹೇಳಿದ್ದೆ. ಹೊರತು ಪ್ರತ್ಯೇಕ ದಕ್ಷಿಣ ಭಾರತ ನನ್ನ ಕೂಗಲ್ಲ. ತಮಿಳುನಾಡಿನಲ್ಲಿ ಬಹಳ ಹಿಂದೆಯೇ ಈ ಕೂಗು ಇತ್ತು. ಈಗ ಮತ್ತೆ ಅನ್ಯಾಯ ಮಾಡಿ ಕೂಗು ಏಳಿಸಬೇಡಿ. ನಾವು ಭಾರತಾಂಬೆಯ ಮಕ್ಕಳು. ನಮ್ಮನ್ನು ದೂರ ಮಾಡುವ ಪ್ರಯತ್ನ ಮಾಡಬೇಡಿ ಎಂದು ಕೇಂದ್ರ ಸರ್ಕಾರಕ್ಕೆ ಮಾಜಿ ಸಂಸದ ಡಿಕೆ ಸುರೇಶ್ ಕುಮಾರ್​ (DK Suresh Kumar)​ ಎಚ್ಚರಿಕೆ ನೀಡಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗುರುವಾರ ಕೇಂದ್ರ ಸರ್ಕಾರ ತೆರಿಗೆ ಹಣ ಬಿಡುಗಡೆ ಮಾಡಿದೆ. ದಕ್ಷಿಣ ಭಾರತಕ್ಕೆ 28,152 ಕೋಟಿ ರೂಪಾಯಿ ನೀಡಿದೆ. ಉತ್ತರ ಪ್ರದೇಶಕ್ಕೆ ಮಾತ್ರ 32 ಸಾವಿರ ಕೋಟಿ ರೂ. ಕೊಟ್ಟಿದ್ದಾರೆ. ಈ ಮೂಲಕ ಪದೇಪದೆ ಕೆಣಕುವ ಪ್ರಯತ್ನ ನಡೆಯುತ್ತಿದೆ. ದುಃಖದಿಂದ ಈ ಮಾತು ಹೇಳಬೇಕಿದೆ. ರಾಜ್ಯದ ಅಭಿವೃದ್ಧಿಗೆ ಅನ್ಯಾಯವಾಗುತ್ತಿದೆ. ದಕ್ಷಿಣ ಭಾರತದ ರಾಜ್ಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗಬೇಕು ಎಂದರು.

ಇದನ್ನೂ ಓದಿ: ಡಿಕೆ ಸುರೇಶ್ ಪ್ರತ್ಯೇಕ ರಾಷ್ಟ್ರ ಹೇಳಿಕೆಯಿಂದ ವಿವಾದದ ಕಿಡಿ: ಮುಗಿಬಿದ್ದ ಬಿಜೆಪಿ

ರಾಜ್ಯದಲ್ಲಿ ಬಿಜೆಪಿಗೆ ಹೆಚ್ಚಿನ ಬೆಂಬಲ ಇದೆ, ಆದರೆ ಇಲ್ಲಿನ ನಾಯಕರು ಧ್ವನಿ ಎತ್ತುತ್ತಿಲ್ಲ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತಕ್ಕೆ ಹೆಚ್ಚಿನ ತೆರಿಗೆ ನೀಡಿ. ಕರ್ನಾಟಕದಿಂದ ಬಿಜೆಪಿಯ 19 ಸಂಸದರು ಆಯ್ಕೆಯಾಗಿದ್ದಾರೆ. ಈ ಸಂಸದರು ಧ್ವನಿ ಎತ್ತುತ್ತಿಲ್ಲ. ನಾನು ಒತ್ತಾಯ ಮಾಡಿತ್ತೇನೆ, ನಿಮ್ಮ ನೀತಿ ಬದಲಾವಣೆ ಮಾಡಿ. ರಾಜ್ಯಕ್ಕೆ, ದಕ್ಷಿಣ ಭಾರತಕ್ಕೆ ಹೆಚ್ಚಿನ ತೆರಿಗೆ ನೀಡಿ ಎಂದು ಒತ್ತಾಯಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ