ಪರೋಕ್ಷವಾಗಿ ಪ್ರತ್ಯೇಕ ಭಾರತದ ಮಾತು ಆಡಿದ ಕಾಂಗ್ರೆಸ್​ ಮಾಜಿ ಸಂಸದ ಡಿಕೆ ಸುರೇಶ್​​

| Updated By: ವಿವೇಕ ಬಿರಾದಾರ

Updated on: Oct 11, 2024 | 12:20 PM

ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಮಾಡುತ್ತಿರುವ ತಾರತಮ್ಯವನ್ನು ವಿರೋಧಿಸುವ ಭರದಲ್ಲಿ ಮಾಜಿ ಸಂಸದ ಡಿಕೆ ಸುರೇಶ್​ ಈ ಹಿಂದೆ ಪ್ರತ್ಯೇಕ ಭಾರತದ ಮಾತಗಳನ್ನು ಆಡಿದ್ದರು. ಇದೀಗ ಮತ್ತೆ ಡಿಕೆ ಸುರೇಶ್​ ಕುಮಾರ್​ ಮತ್ತೆ ಪರೋಕ್ಷವಾಗಿ ಪ್ರತ್ಯೇಕ ಭಾರತದ ಮಾತುಗಳನ್ನು ಆಡಿದ್ದಾರೆ.

ಪರೋಕ್ಷವಾಗಿ ಪ್ರತ್ಯೇಕ ಭಾರತದ ಮಾತು ಆಡಿದ ಕಾಂಗ್ರೆಸ್​ ಮಾಜಿ ಸಂಸದ ಡಿಕೆ ಸುರೇಶ್​​
ಮಾಜಿ ಸಂಸದ ಡಿಕೆ ಸುರೇಶ್​
Follow us on

ಬೆಂಗಳೂರು, ಅಕ್ಟೋಬರ್​ 11: ಕೇಂದ್ರ ಸರ್ಕಾರ (Union Government) ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿರುವ ಬಗ್ಗೆ ಕಳೆದ ಬಾರಿಯೇ ಈ ವಿಷಯ ಪ್ರಸ್ತಾಪ ಮಾಡಿದ್ದೆ. ಕರ್ನಾಟಕದ (Karnataka) ಸೇರಿ ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಅಂತ ಹೇಳಿದ್ದೆ. ಹೊರತು ಪ್ರತ್ಯೇಕ ದಕ್ಷಿಣ ಭಾರತ ನನ್ನ ಕೂಗಲ್ಲ. ತಮಿಳುನಾಡಿನಲ್ಲಿ ಬಹಳ ಹಿಂದೆಯೇ ಈ ಕೂಗು ಇತ್ತು. ಈಗ ಮತ್ತೆ ಅನ್ಯಾಯ ಮಾಡಿ ಕೂಗು ಏಳಿಸಬೇಡಿ. ನಾವು ಭಾರತಾಂಬೆಯ ಮಕ್ಕಳು. ನಮ್ಮನ್ನು ದೂರ ಮಾಡುವ ಪ್ರಯತ್ನ ಮಾಡಬೇಡಿ ಎಂದು ಕೇಂದ್ರ ಸರ್ಕಾರಕ್ಕೆ ಮಾಜಿ ಸಂಸದ ಡಿಕೆ ಸುರೇಶ್ ಕುಮಾರ್​ (DK Suresh Kumar)​ ಎಚ್ಚರಿಕೆ ನೀಡಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗುರುವಾರ ಕೇಂದ್ರ ಸರ್ಕಾರ ತೆರಿಗೆ ಹಣ ಬಿಡುಗಡೆ ಮಾಡಿದೆ. ದಕ್ಷಿಣ ಭಾರತಕ್ಕೆ 28,152 ಕೋಟಿ ರೂಪಾಯಿ ನೀಡಿದೆ. ಉತ್ತರ ಪ್ರದೇಶಕ್ಕೆ ಮಾತ್ರ 32 ಸಾವಿರ ಕೋಟಿ ರೂ. ಕೊಟ್ಟಿದ್ದಾರೆ. ಈ ಮೂಲಕ ಪದೇಪದೆ ಕೆಣಕುವ ಪ್ರಯತ್ನ ನಡೆಯುತ್ತಿದೆ. ದುಃಖದಿಂದ ಈ ಮಾತು ಹೇಳಬೇಕಿದೆ. ರಾಜ್ಯದ ಅಭಿವೃದ್ಧಿಗೆ ಅನ್ಯಾಯವಾಗುತ್ತಿದೆ. ದಕ್ಷಿಣ ಭಾರತದ ರಾಜ್ಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗಬೇಕು ಎಂದರು.

ಇದನ್ನೂ ಓದಿ: ಡಿಕೆ ಸುರೇಶ್ ಪ್ರತ್ಯೇಕ ರಾಷ್ಟ್ರ ಹೇಳಿಕೆಯಿಂದ ವಿವಾದದ ಕಿಡಿ: ಮುಗಿಬಿದ್ದ ಬಿಜೆಪಿ

ರಾಜ್ಯದಲ್ಲಿ ಬಿಜೆಪಿಗೆ ಹೆಚ್ಚಿನ ಬೆಂಬಲ ಇದೆ, ಆದರೆ ಇಲ್ಲಿನ ನಾಯಕರು ಧ್ವನಿ ಎತ್ತುತ್ತಿಲ್ಲ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತಕ್ಕೆ ಹೆಚ್ಚಿನ ತೆರಿಗೆ ನೀಡಿ. ಕರ್ನಾಟಕದಿಂದ ಬಿಜೆಪಿಯ 19 ಸಂಸದರು ಆಯ್ಕೆಯಾಗಿದ್ದಾರೆ. ಈ ಸಂಸದರು ಧ್ವನಿ ಎತ್ತುತ್ತಿಲ್ಲ. ನಾನು ಒತ್ತಾಯ ಮಾಡಿತ್ತೇನೆ, ನಿಮ್ಮ ನೀತಿ ಬದಲಾವಣೆ ಮಾಡಿ. ರಾಜ್ಯಕ್ಕೆ, ದಕ್ಷಿಣ ಭಾರತಕ್ಕೆ ಹೆಚ್ಚಿನ ತೆರಿಗೆ ನೀಡಿ ಎಂದು ಒತ್ತಾಯಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ