AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯ ಲಿಂಗಾಯತ ಮತ ಬ್ಯಾಂಕ್​ ಮೇಲೆ ಕಾಂಗ್ರೆಸ್ ಕಣ್ಣು: ವೀರಶೈವ ಸಮುದಾಯವನ್ನು ಸೆಳೆಯಲು ತಂತ್ರಗಾರಿಕೆ

ದಲಿತ ಮತ ಬ್ಯಾಂಕ್​ಗೂ ಕಾಂಗ್ರೆಸ್​ ಕೈ ಹಾಕಿದೆ. ವಾರದ ಹಿಂದಷ್ಟೇ ಹಿಂದುಳಿದ ವರ್ಗಗಳು ಬಿಜೆಪಿ ಜೊತೆಗೆ ಕೈ ಜೋಡಿಸುವಂತೆ ಸ್ವಾಮೀಜಿಗಳು ಕರೆ ನೀಡಿದ್ದರು.

ಬಿಜೆಪಿಯ ಲಿಂಗಾಯತ ಮತ ಬ್ಯಾಂಕ್​ ಮೇಲೆ ಕಾಂಗ್ರೆಸ್ ಕಣ್ಣು: ವೀರಶೈವ ಸಮುದಾಯವನ್ನು ಸೆಳೆಯಲು ತಂತ್ರಗಾರಿಕೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: May 16, 2022 | 1:43 PM

Share

ಬೆಂಗಳೂರು: ಬಿಜೆಪಿಯ ಲಿಂಗಾಯತ ಮತ ಬ್ಯಾಂಕ್​ ಮೇಲೆ ಕಾಂಗ್ರೆಸ್ (Congress) ಕಣ್ಣಿಟ್ಟಿದೆ. ಹಳೆ ತಪ್ಪು ಸರಿಪಡಿಸಿ ಒಗ್ಗಟ್ಟಿನ ಮಂತ್ರ ಪಠಿಸಲು ಸಜ್ಜಾಗಿದೆ. ವೀರಶೈವ ಸಮುದಾಯವನ್ನು ಸೆಳೆಯಲು ತಂತ್ರಗಾರಿಕೆ ರೂಪಿಸಲಾಗುತ್ತಿದೆ. ಮೂರು ಪ್ರಮುಖ ಅಂಶಗಳನ್ನು ಹೈಕಮಾಂಡ್ ‌ಗಮನಕ್ಕೆ ತರಲು ಲಿಂಗಾಯತ ಶಾಸಕರ ನಿರ್ಧಾರ ಮಾಡಿದ್ದು, ಕಾಂಗ್ರೆಸ್​ನಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಮತ್ತಷ್ಟು ಪ್ರಾತಿನಿಧ್ಯ ನೀಡಲು ಪ್ಲ್ಯಾನ್ ಮಾಡಲಾಗುತ್ತಿದೆ. ಲಿಂಗಾಯತ ಸಮಯದಾಯದ ಎಲ್ಲ ಒಳಪಂಗಡಗಳ ಶಾಸಕರು ಒಗ್ಗೂಡಲು ಸೂಚಿಸಲಾಗಿದೆ. ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಿಂದ ಕಾಂಗ್ರೆಸ್ ಲಿಂಗಾಯತ ಶಾಸಕರಲ್ಲಿ ಒಡಕು ಮೂಡಿದೆ. ಆದರೆ ಇದೀಗ 2018ರ ತಪ್ಪನ್ನು ಮರುಕಳಿಸದಂತೆ ನೋಡಿಕೊಳ್ಳಲು ತೀರ್ಮಾನ ಮಾಡಲಾಗಿದೆ. ಯಡಿಯೂರಪ್ಪ ಸಿಎಂ ಸ್ಥಾನದಿಂದ ಇಳಿದ ಬಳಿಕ ಲಿಂಗಾಯತ ನಾಯಕತ್ವಕ್ಕೆ ಪೈಪೋಟಿ ನಡೆಯುತ್ತಿದೆ.

ಈ ಸ್ಥಾನವನ್ನು ಕಾಂಗ್ರೆಸ್ ಲಿಂಗಾಯತ ಶಾಸಕರು ಒಗ್ಗೂಡಿ ಭರ್ತಿ ಮಾಡಲು ತೀರ್ಮಾನ ಮಾಡಲಾಗಿದೆ. ಎಲ್ಲ ಒಳಪಂಗಡಗಳ ಶಾಸಕರು ಸೇರಿ ಓಬಿಸಿ ಪಟ್ಟಿಗೆ ಸೇರಿಸಲು ಹೋರಾಟಕ್ಕೆ ನಿರ್ಧರಿಸಲಾಗಿದೆ. ವೀರಶೈವ ಲಿಂಗಾಯತ ಶಾಸಕರಿಗೆ ಹೆಚ್ಚಿನ ಸ್ಥಾನ ಮಾನ ನೀಡುವಂತೆ ಹೈಕಮಾಂಡ್​ಗೆ ಒತ್ತಡ ಹೇರಲು ತೀರ್ಮಾನ ಮಾಡಲಾಗುತ್ತಿದೆ. ಎಂಬಿ ಪಾಟೀಲ್, ಈಶ್ವರ್ ಖಂಡ್ರೆ ಸೆರಿ ಹಲವರು ಒಗ್ಗೂಡಿ ಕೆಲಸ ಮಾಡಬೇಕು ಎಂದು ನಿರ್ಧಾರ ಮಾಡಲಾಗಿದೆ. ವೀರಶೈವ ಮತ್ತು ಲಿಂಗಾಯತ ಪ್ರತ್ಯೇಕ ಅಲ್ಲ ಎಂಬ ಸಂದೇಶ ರವಾನಿಸಲು ಸೂಚಿಸಲಾಗಿದೆ. ವೀರಶೈವ ಮತ್ತು ಲಿಂಗಾಯತ ಸಮುದಾಯ ಒಂದೇ ಎಂದು ರಾಜ್ಯಾದ್ಯಂತ ಜಾಗೃತಿ ಕಾರ್ಯಕ್ರಮ ಆಯೋಜನೆಗೆ ನಿರ್ಧರಿಸಲಾಗಿದೆ. ವಿಜಯೇಂದ್ರ ರಾಜಕೀಯ ಎಂಟ್ರಿಯಿಂದಲೂ ಅಂತ ಬದಲಾವಣೆ ಸಾಧ್ಯವಿಲ್ಲ ಎಂಬ ವಿಶ್ವಾಸದಲ್ಲಿರುವ ಕೈ ಶಾಸಕರಿದ್ದಾರೆ. ಯಡಿಯೂರಪ್ಪಗೆ ಇರುವ ಇಮೇಜ್ ವಿಜಯೇಂದ್ರಗೆ ಮುಂದುವರಿಯುವುದಿಲ್ಲ ಎಂಬ ಲೆಕ್ಕಾಚಾರ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ವಿಜಯೇಂದ್ರಗೆ ಮಂತ್ರಿ ಸ್ಥಾನ ನೀಡಿದರೆ ತಂತ್ರಗಾರಿಕೆ ಬದಲಾವಣೆ ಬಗ್ಗೆಯೂ ಲಿಂಗಾಯತ ಕಾಂಗ್ರೆಸ್ ಶಾಸಕರು ಚರ್ಚೆ ಮಾಡಿದ್ದಾರೆ.

ದಲಿತ ಮತ ಬ್ಯಾಂಕ್​ಗೂ ಕಾಂಗ್ರೆಸ್​ ಕೈ ಹಾಕಿದೆ. ವಾರದ ಹಿಂದಷ್ಟೇ ಹಿಂದುಳಿದ ವರ್ಗಗಳು ಬಿಜೆಪಿ ಜೊತೆಗೆ ಕೈ ಜೋಡಿಸುವಂತೆ ಸ್ವಾಮೀಜಿಗಳು ಕರೆ ನೀಡಿದ್ದರು. ಚಿತ್ರದುರ್ಗದ ಮಾದಾರ ಚೆನ್ನಯ್ಯ ಸ್ವಾಮೀಜಿಯಿಂದ ದಲಿತರು ಹಿಂದುಳಿದ ವರ್ಗ ಬಿಜೆಪಿ ಜೊತೆಗಿರುವಂತೆ ಕರೆ ನೀಡಲಾಗಿತ್ತು. ಇದರ ಬೆನ್ನಲ್ಲೇ ದಲಿತ ಕೇಂದ್ರಿತ ಕಾರ್ಯಕ್ರಮಗಳ ಆಯೋಜನೆಗೆ ಎಐಸಿಸಿ ಸೂಚನೆ ನೀಡಲಾಗಿತ್ತು. ಎಐಸಿಸಿ ಸೂಚನೆ ಮೇರೆಗೆ ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಹೆಸರಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಧರ್ಮಸೇನಾ ಹೇಳಿಕೆ ನೀಡಿದ್ದಾರೆ. ಡಾ.ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಮ್ ಸ್ಮರಣೆ ಕಾರ್ಯಕ್ರಮ ಮಾಡುವಂತೆ ಕೆಪಿಸಿಸಿ ಸೂಚಿಸಿದೆ. ಹಾಲಿ ಶಾಸಕರು ಹಾಗು ಮಾಜಿ ಶಾಸಕರು ಹಾಗು ಹಿರಿಯ ಮುಖಂಡರುಗಳಿಗೆ ಸಭೆಗೆ ಆಹ್ವಾನಿಸಲಾಗಿದೆ. ಸಭೆಯನ್ನ ಯಾವ ಮಟ್ಟದಲ್ಲಿ ನಡೆಯಬೇಕು ಅನ್ನೋ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡ್ತೇವೆ. 18 ತಾರೀಖು ನಡೆಯಲಿರುವ ಸಭೆಗೆ ಆಗಮಿಸಬೇಕು. ರಾಜ್ಯದಲ್ಲಿ ದಲಿತರು ಅತಿಹೆಚ್ಚು ಮತದಾರರಿದ್ದಾರೆ. ಕಾಂಗ್ರೆಸ್ ದಲಿತರಿಗೆ ಅನ್ಯಾಯ ಮಾಡ್ತಿದೆ ಎಂದು ಬಿಜೆಪಿ ಆರೋಪ ಮಾಡ್ತಿದೆ. ಅದನ್ನ ನಾವು ದಲಿತರಿಗೆ ಮನವರಿಕೆ ಮಾಡಿಕೊಡಬೇಕಿದೆ ಎಂದು ಹೇಳಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು