AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಇನ್ನು ಆರು ತಿಂಗಳಲ್ಲಿ ಕಾಂಗ್ರೆಸ್​ ಸರ್ಕಾರ ಪತನ; ಬಸನಗೌಡ ಪಾಟೀಲ್​ ಯತ್ನಾಳ್​ ಭವಿಷ್ಯ

136 ಕಾಂಗ್ರೆಸ್ ಶಾಸಕರ ಪೈಕಿ 90 ಕ್ಕೂ ಅಧಿಕ ಶಾಸಕರು ಅಸಮಾಧಾನಗೊಂಡಿದ್ದಾರೆ. ಈ ಸರ್ಕಾರ ಐದು ವರ್ಷ ಅಧಿಕಾರದಲ್ಲಿ ಇರುತ್ತದೆ ಎಂದು ಸಚಿವ ಎಂಬಿ ಪಾಟೀಲ್ ಭಾವಿಸಿದ್ದಾರೆ. ಆದರೆ ನಿಮ್ಮ ಸರ್ಕಾರ ಲೋಕಸಭಾ ಚುನಾವಣೆಯೊಳಗೆ ಅಥವಾ ಲೋಕಸಭಾ ಚುನಾವಣೆಯ ಬಳಿಕ ಪತನ‌‌ವಾಗುವುದು ಖಚಿತ. ನೀವು ಮನಗೆ ಹೋಗುವುದು ನಿಶ್ಚಿತ ಎಂದು ಬಿಜೆಪಿ ಶಾಸಕ ಬಸನಗೌಡ ಭವಿಷ್ಯ ನುಡಿದರು.

ವಿಜಯಪುರ: ಇನ್ನು ಆರು ತಿಂಗಳಲ್ಲಿ ಕಾಂಗ್ರೆಸ್​ ಸರ್ಕಾರ ಪತನ; ಬಸನಗೌಡ ಪಾಟೀಲ್​ ಯತ್ನಾಳ್​ ಭವಿಷ್ಯ
ಬಸನಗೌಡ ಪಾಟೀಲ್ ಯತ್ನಾಳ್
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Aug 14, 2023 | 3:05 PM

Share

ವಿಜಯಪುರ (ಆ.14): 136 ಕಾಂಗ್ರೆಸ್ (Congress)​ ಶಾಸಕರ ಪೈಕಿ 90 ಕ್ಕೂ ಅಧಿಕ ಶಾಸಕರು ಅಸಮಾಧಾನಗೊಂಡಿದ್ದಾರೆ. ಇದು ಸರ್ಕಾರದ ‌ಮೂರು ತಿಂಗಳ ಹಣೆ ಬರಹ. ಈ ಆಧಾರದ ಮೇಲೆ ಆರು ತಿಂಗಳಲ್ಲಿ ಸರ್ಕಾರ ಪತನವಾಗುತ್ತದೆ. ಈ ಸರ್ಕಾರ ಐದು ವರ್ಷ ಅಧಿಕಾರದಲ್ಲಿ ಇರುತ್ತದೆ ಎಂದು ಸಚಿವ ಎಂಬಿ ಪಾಟೀಲ್ (MB Patil) ಭಾವಿಸಿದ್ದಾರೆ. ಆದರೆ ನಿಮ್ಮ ಸರ್ಕಾರ ಲೋಕಸಭಾ ಚುನಾವಣೆಯೊಳಗೆ ಅಥವಾ ಲೋಕಸಭಾ ಚುನಾವಣೆಯ ಬಳಿಕ ಪತನ‌‌ವಾಗುವುದು ಖಚಿತ. ನೀವು ಮನಗೆ ಹೋಗುವುದು ನಿಶ್ಚಿತ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ (Basangouda Patil Yatnal) ಭವಿಷ್ಯ ನುಡಿದರು. ವಿಜಯಪುರ ಕ್ಷೇತ್ರದ ಕಾರ್ಯಕರ್ತರಿಗೆ ನಿನ್ನೆ (ಆ.13) ರಂದು ಸಂಜೆ ಆಯೋಜಿಸಿದ್ದ ಅಭಿನಂದನಾ ಹಾಗೂ ಔತಣಕೂಟ ಸಭೆಯಲ್ಲಿ ಮಾತನಾಡಿದ ಅವರು ನಿಮ್ಮ ಉಚಿತ ಯೋಜನೆಗಳಿಗೆ ಜನರು ಉಚಿತ ಮತ ಹಾಕಿಲ್ಲ, ಆದ್ದರಿಂದ ನಿಮ್ಮ ಪತನ ಖಚಿತ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರದ ವರ್ಗಾವಣೆ ದಂಧೆ, ಐದು ಗ್ಯಾರಂಟಿಗಳ ಮೋಸತನ, ಬೆಂಗಳೂರು ಹಾಗೂ ಉತ್ತರ ಕರ್ನಾಟಕದ ಶಾಸಕರ ಅಸಮಾಧಾನ‌ಕ್ಕೆ ಕಾರಣವಾಗಿದೆ. ಸರ್ಕಾರ ಅಭಿವೃದ್ಧಿಗೆ ಹಣ ನೀಡುತ್ತಿಲ್ಲ. ಏನು ಕೇಳಿದರೂ ಗ್ಯಾರಂಟಿಗಳ ನೆಪ ಹೇಳುತ್ತಿದ್ದೀರಿ. ಹೀಗಾಗಿ ಸರ್ಕಾರ ತನ್ನಿಂದ‌‌ ತಾನೇ ಪತನವಾಗುತ್ತದೆ. ಇದಕ್ಕೆ ಬಿಜೆಪಿಯರು, ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರ ಪ್ರಯತ್ನ ಬೇಕಿಲ್ಲ ಎಂದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಭ್ರಷ್ಟಾಚಾರ ವ್ಯಾಪಕವಾಗಿದೆ. ಕಾಂಗ್ರೆಸ್ ಏಜೆಂಟ್ ಕೆಂಪಣ್ಣ ಅವರನ್ನು ಬಿಟ್ಟು ಉಳಿದ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳುತ್ತಿದ್ದಾರೆ. ನೀವು ಎಲ್ಲ ಗುತ್ತಿಗೆದಾರರ ಬಳಿ 15 ಪರ್ಸೆಂಟೇಜ್​ ಕಮಿಷನ್ ಕೇಳಿದ್ದೀರಿ ಎಂದು ಡಿಸಿಎಂ ಡಿಕೆ ಶಿವಕುಮಾರಗೆ ಓರ್ವ ಗುತ್ತಿಗೆದಾರ ಸವಾಲು ಹಾಕಿದ್ದಾರೆ. ನೀವೇ ನಂಬಿದ ನೊಣವಿನಕೆರೆ ಗುರುಗಳ ಹೆಸರಿನಲ್ಲಿ ಪ್ರಮಾಣ ಮಾಡಿ ಎಂದು ಸವಾಲು ಹಾಕಿದ್ದಾರೆ. ಈ ಕುರಿತು ಡಿಕೆ ಶಿವಕುಮಾರ್​ ಉತ್ತರ ಕೊಟ್ಟಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಿರದಿದ್ದರೆ ರಾಜ್ಯದಲ್ಲಿ ಬಿಜೆಪಿ ಸ್ಥಿತಿ ಮತ್ತಷ್ಟು ಶೋಚನೀಯವಾಗಿರುತಿತ್ತು: ಬಸನಗೌಡ ಯತ್ನಾಳ್

ಈ ಹಿಂದೆ ಮಾಜಿ ಸಚಿವ ಈಶ್ವರಪ್ಪ ಅವರ ಮೇಲೆ ಇಂಥ ಆರೋಪ ಬಂದಿತ್ತು. ಆ ಆರೋಪ ಸಾಬೀತಾಗದಿದ್ದರೂ ಅವರ ರಾಜೀನಾಮೆ ತೆಗೆದುಕೊಂಡರು. ಈ ತಾಕತ್ತು ಸಿಎಂ ಸಿದ್ದರಾಮಯ್ಯ ಅವರಿಗೆ ಇದೆಯಾ ? ಡಿಕೆ ಶಿವಕುಮಾರ್​ ಮೇಲೆ ಗಂಭೀರ ಆರೋಪವನ್ನು ಗುತ್ತಿಗೆದಾರರು ಮಾಡಿದ್ದಾರೆ. ಸಿದ್ದರಾಮಯ್ಯ ಅವರಿಗೆ ನೈತಿಕತೆ ಇದ್ದರೆ ಡಿಕೆ ಶಿವಕುಮಾರ್​ ಅವರ ರಾಜೀನಾಮೆ ಪಡೆಯಲಿ ಎಂದು ಸವಾಲು ಹಾಕಿದರು.

ಬೆಂಗಳೂರು ಮಹಾನಗರದ ಮೇಲೆ ಸಿದ್ದರಾಮಯ್ಯ ಅವರ ಹಿಡಿತದಲ್ಲಿಲ್ಲ. ಬೆಂಗಳೂರಿನ ಎಲ್ಲ ಶಾಸಕರ ಬಾಯಿ ಬಂದ್​ ಮಾಡಿ ಡಿಕೆ ಶಿವಕುಮಾರ್​ ಹಗಲು ದರೋಡೆ ಮಾಡುತ್ತಿದ್ದಾರೆ. ಆರೋಪ ನಾನು ಮಾಡುತ್ತಿಲ್ಲ ಗುತ್ತಿಗೆದಾರರು ಮಾಡುತ್ತಿದ್ದಾರೆ. ಈ ವಿಚಾರದಲ್ಲಿಯೂ ಸಹ ಸಿಎಂ ಅಸಹಾಯಕತೆಯನ್ನು ತೋರಿಸುತ್ತಿದ್ದಾರೆ. ಸರ್ಕಾರದಲ್ಲಿನ ಭ್ರಷ್ಟಾಚಾರದ ಕುರಿತು ಅವರದೇ ಪಕ್ಷದ ಶಾಸಕ ಬಸವರಾಜ ರಾಯರೆಡ್ಡಿ ಆರೋಪ ಮಾಡಿದ್ದಾರೆ ಎಂದು ತಿಳಿಸಿದರು.

ಇನ್ನು ವಿಜಯಪುರ ಮಹಾನಗರ ಪಾಲಿಕೆಗೆ ಅರ್ಹತೆ ಇಲ್ಲದ ವ್ಯಕ್ತಿಯನ್ನು ನೇಮಿಸಿದ್ದಾರೆ. ಈ ಮೂಲಕ ನಗರದಲ್ಲಿ ನಡೆಯುವ ಅಭಿವೃದ್ದಿ ಕಾರ್ಯಗಳನ್ನು ತಡೆಯಲಾಗತ್ತಿದೆ. ಈ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ ಜಿಲ್ಲೆಯಲ್ಲಿ ಕೆಟ್ಟ ಚಾಳಿಯನ್ನು ಮುಂದುವರಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಲೋಕಸಭಾ ಚುನಾವಣೆ ಬಳಿಕ ಸಿಎಂ ಆಗಲು ಡಿಕೆ ಶಿವಕುಮಾರ್​ ರೆಡಿ

ಗ್ಯಾರಂಟಿ ಯೋಜನೆಯಿಂದಾಗಿ ಶಾಸಕರಿಗೆ ಅನುದಾನ ಕೊಡುತ್ತಿಲ್ಲ. ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ಹಣ ಸಂಪಾದನೆಗಾಗಿ ಪೈಪೋಟಿ ನಡೆಸಿದ್ದಾರೆ. ಕೊನೆ ಚುನಾವಣೆ ಅಂತ ಹೇಳಿ ಸಿದ್ದರಾಮಯ್ಯ ದುಡ್ಡು ಮಾಡುತ್ತಿದ್ದಾರೆ. ಲೋಕಸಭಾ ಚುನಾವಣೆ ಬಳಿಕ ಸಿಎಂ ಆಗಲು ಡಿಕೆ ಶಿವಕುಮಾರ್​ ಹೊರಟಿದ್ದಾರೆ. ಇವರಿಬ್ಬರ ಮಧ್ಯೆ ನಮಗೇನು ಸಿಗುತ್ತಿಲ್ಲ ಅಂತ ಶಾಸಕರು ಅಸಮಾಧಾನ ಹೊರಹಾಕಿದ್ದಾರೆ. ಆಡಳಿತ ಪಕ್ಷದ ಶಾಸಕರಿಗೆ ಅನುದಾನ ಈಗ ಕೇಳಬೇಡಿ ಅಂತಿದ್ದಾರೆ. ಇನ್ನು ವಿಪಕ್ಷ ಶಾಸಕರಿಗೆ ಅನುದಾನ ಕೊಡೋದು ದೂರದ ಮಾತು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:56 pm, Mon, 14 August 23

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ