AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಇನ್ನು ಆರು ತಿಂಗಳಲ್ಲಿ ಕಾಂಗ್ರೆಸ್​ ಸರ್ಕಾರ ಪತನ; ಬಸನಗೌಡ ಪಾಟೀಲ್​ ಯತ್ನಾಳ್​ ಭವಿಷ್ಯ

136 ಕಾಂಗ್ರೆಸ್ ಶಾಸಕರ ಪೈಕಿ 90 ಕ್ಕೂ ಅಧಿಕ ಶಾಸಕರು ಅಸಮಾಧಾನಗೊಂಡಿದ್ದಾರೆ. ಈ ಸರ್ಕಾರ ಐದು ವರ್ಷ ಅಧಿಕಾರದಲ್ಲಿ ಇರುತ್ತದೆ ಎಂದು ಸಚಿವ ಎಂಬಿ ಪಾಟೀಲ್ ಭಾವಿಸಿದ್ದಾರೆ. ಆದರೆ ನಿಮ್ಮ ಸರ್ಕಾರ ಲೋಕಸಭಾ ಚುನಾವಣೆಯೊಳಗೆ ಅಥವಾ ಲೋಕಸಭಾ ಚುನಾವಣೆಯ ಬಳಿಕ ಪತನ‌‌ವಾಗುವುದು ಖಚಿತ. ನೀವು ಮನಗೆ ಹೋಗುವುದು ನಿಶ್ಚಿತ ಎಂದು ಬಿಜೆಪಿ ಶಾಸಕ ಬಸನಗೌಡ ಭವಿಷ್ಯ ನುಡಿದರು.

ವಿಜಯಪುರ: ಇನ್ನು ಆರು ತಿಂಗಳಲ್ಲಿ ಕಾಂಗ್ರೆಸ್​ ಸರ್ಕಾರ ಪತನ; ಬಸನಗೌಡ ಪಾಟೀಲ್​ ಯತ್ನಾಳ್​ ಭವಿಷ್ಯ
ಬಸನಗೌಡ ಪಾಟೀಲ್ ಯತ್ನಾಳ್
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Aug 14, 2023 | 3:05 PM

Share

ವಿಜಯಪುರ (ಆ.14): 136 ಕಾಂಗ್ರೆಸ್ (Congress)​ ಶಾಸಕರ ಪೈಕಿ 90 ಕ್ಕೂ ಅಧಿಕ ಶಾಸಕರು ಅಸಮಾಧಾನಗೊಂಡಿದ್ದಾರೆ. ಇದು ಸರ್ಕಾರದ ‌ಮೂರು ತಿಂಗಳ ಹಣೆ ಬರಹ. ಈ ಆಧಾರದ ಮೇಲೆ ಆರು ತಿಂಗಳಲ್ಲಿ ಸರ್ಕಾರ ಪತನವಾಗುತ್ತದೆ. ಈ ಸರ್ಕಾರ ಐದು ವರ್ಷ ಅಧಿಕಾರದಲ್ಲಿ ಇರುತ್ತದೆ ಎಂದು ಸಚಿವ ಎಂಬಿ ಪಾಟೀಲ್ (MB Patil) ಭಾವಿಸಿದ್ದಾರೆ. ಆದರೆ ನಿಮ್ಮ ಸರ್ಕಾರ ಲೋಕಸಭಾ ಚುನಾವಣೆಯೊಳಗೆ ಅಥವಾ ಲೋಕಸಭಾ ಚುನಾವಣೆಯ ಬಳಿಕ ಪತನ‌‌ವಾಗುವುದು ಖಚಿತ. ನೀವು ಮನಗೆ ಹೋಗುವುದು ನಿಶ್ಚಿತ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ (Basangouda Patil Yatnal) ಭವಿಷ್ಯ ನುಡಿದರು. ವಿಜಯಪುರ ಕ್ಷೇತ್ರದ ಕಾರ್ಯಕರ್ತರಿಗೆ ನಿನ್ನೆ (ಆ.13) ರಂದು ಸಂಜೆ ಆಯೋಜಿಸಿದ್ದ ಅಭಿನಂದನಾ ಹಾಗೂ ಔತಣಕೂಟ ಸಭೆಯಲ್ಲಿ ಮಾತನಾಡಿದ ಅವರು ನಿಮ್ಮ ಉಚಿತ ಯೋಜನೆಗಳಿಗೆ ಜನರು ಉಚಿತ ಮತ ಹಾಕಿಲ್ಲ, ಆದ್ದರಿಂದ ನಿಮ್ಮ ಪತನ ಖಚಿತ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರದ ವರ್ಗಾವಣೆ ದಂಧೆ, ಐದು ಗ್ಯಾರಂಟಿಗಳ ಮೋಸತನ, ಬೆಂಗಳೂರು ಹಾಗೂ ಉತ್ತರ ಕರ್ನಾಟಕದ ಶಾಸಕರ ಅಸಮಾಧಾನ‌ಕ್ಕೆ ಕಾರಣವಾಗಿದೆ. ಸರ್ಕಾರ ಅಭಿವೃದ್ಧಿಗೆ ಹಣ ನೀಡುತ್ತಿಲ್ಲ. ಏನು ಕೇಳಿದರೂ ಗ್ಯಾರಂಟಿಗಳ ನೆಪ ಹೇಳುತ್ತಿದ್ದೀರಿ. ಹೀಗಾಗಿ ಸರ್ಕಾರ ತನ್ನಿಂದ‌‌ ತಾನೇ ಪತನವಾಗುತ್ತದೆ. ಇದಕ್ಕೆ ಬಿಜೆಪಿಯರು, ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರ ಪ್ರಯತ್ನ ಬೇಕಿಲ್ಲ ಎಂದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಭ್ರಷ್ಟಾಚಾರ ವ್ಯಾಪಕವಾಗಿದೆ. ಕಾಂಗ್ರೆಸ್ ಏಜೆಂಟ್ ಕೆಂಪಣ್ಣ ಅವರನ್ನು ಬಿಟ್ಟು ಉಳಿದ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳುತ್ತಿದ್ದಾರೆ. ನೀವು ಎಲ್ಲ ಗುತ್ತಿಗೆದಾರರ ಬಳಿ 15 ಪರ್ಸೆಂಟೇಜ್​ ಕಮಿಷನ್ ಕೇಳಿದ್ದೀರಿ ಎಂದು ಡಿಸಿಎಂ ಡಿಕೆ ಶಿವಕುಮಾರಗೆ ಓರ್ವ ಗುತ್ತಿಗೆದಾರ ಸವಾಲು ಹಾಕಿದ್ದಾರೆ. ನೀವೇ ನಂಬಿದ ನೊಣವಿನಕೆರೆ ಗುರುಗಳ ಹೆಸರಿನಲ್ಲಿ ಪ್ರಮಾಣ ಮಾಡಿ ಎಂದು ಸವಾಲು ಹಾಕಿದ್ದಾರೆ. ಈ ಕುರಿತು ಡಿಕೆ ಶಿವಕುಮಾರ್​ ಉತ್ತರ ಕೊಟ್ಟಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಿರದಿದ್ದರೆ ರಾಜ್ಯದಲ್ಲಿ ಬಿಜೆಪಿ ಸ್ಥಿತಿ ಮತ್ತಷ್ಟು ಶೋಚನೀಯವಾಗಿರುತಿತ್ತು: ಬಸನಗೌಡ ಯತ್ನಾಳ್

ಈ ಹಿಂದೆ ಮಾಜಿ ಸಚಿವ ಈಶ್ವರಪ್ಪ ಅವರ ಮೇಲೆ ಇಂಥ ಆರೋಪ ಬಂದಿತ್ತು. ಆ ಆರೋಪ ಸಾಬೀತಾಗದಿದ್ದರೂ ಅವರ ರಾಜೀನಾಮೆ ತೆಗೆದುಕೊಂಡರು. ಈ ತಾಕತ್ತು ಸಿಎಂ ಸಿದ್ದರಾಮಯ್ಯ ಅವರಿಗೆ ಇದೆಯಾ ? ಡಿಕೆ ಶಿವಕುಮಾರ್​ ಮೇಲೆ ಗಂಭೀರ ಆರೋಪವನ್ನು ಗುತ್ತಿಗೆದಾರರು ಮಾಡಿದ್ದಾರೆ. ಸಿದ್ದರಾಮಯ್ಯ ಅವರಿಗೆ ನೈತಿಕತೆ ಇದ್ದರೆ ಡಿಕೆ ಶಿವಕುಮಾರ್​ ಅವರ ರಾಜೀನಾಮೆ ಪಡೆಯಲಿ ಎಂದು ಸವಾಲು ಹಾಕಿದರು.

ಬೆಂಗಳೂರು ಮಹಾನಗರದ ಮೇಲೆ ಸಿದ್ದರಾಮಯ್ಯ ಅವರ ಹಿಡಿತದಲ್ಲಿಲ್ಲ. ಬೆಂಗಳೂರಿನ ಎಲ್ಲ ಶಾಸಕರ ಬಾಯಿ ಬಂದ್​ ಮಾಡಿ ಡಿಕೆ ಶಿವಕುಮಾರ್​ ಹಗಲು ದರೋಡೆ ಮಾಡುತ್ತಿದ್ದಾರೆ. ಆರೋಪ ನಾನು ಮಾಡುತ್ತಿಲ್ಲ ಗುತ್ತಿಗೆದಾರರು ಮಾಡುತ್ತಿದ್ದಾರೆ. ಈ ವಿಚಾರದಲ್ಲಿಯೂ ಸಹ ಸಿಎಂ ಅಸಹಾಯಕತೆಯನ್ನು ತೋರಿಸುತ್ತಿದ್ದಾರೆ. ಸರ್ಕಾರದಲ್ಲಿನ ಭ್ರಷ್ಟಾಚಾರದ ಕುರಿತು ಅವರದೇ ಪಕ್ಷದ ಶಾಸಕ ಬಸವರಾಜ ರಾಯರೆಡ್ಡಿ ಆರೋಪ ಮಾಡಿದ್ದಾರೆ ಎಂದು ತಿಳಿಸಿದರು.

ಇನ್ನು ವಿಜಯಪುರ ಮಹಾನಗರ ಪಾಲಿಕೆಗೆ ಅರ್ಹತೆ ಇಲ್ಲದ ವ್ಯಕ್ತಿಯನ್ನು ನೇಮಿಸಿದ್ದಾರೆ. ಈ ಮೂಲಕ ನಗರದಲ್ಲಿ ನಡೆಯುವ ಅಭಿವೃದ್ದಿ ಕಾರ್ಯಗಳನ್ನು ತಡೆಯಲಾಗತ್ತಿದೆ. ಈ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ ಜಿಲ್ಲೆಯಲ್ಲಿ ಕೆಟ್ಟ ಚಾಳಿಯನ್ನು ಮುಂದುವರಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಲೋಕಸಭಾ ಚುನಾವಣೆ ಬಳಿಕ ಸಿಎಂ ಆಗಲು ಡಿಕೆ ಶಿವಕುಮಾರ್​ ರೆಡಿ

ಗ್ಯಾರಂಟಿ ಯೋಜನೆಯಿಂದಾಗಿ ಶಾಸಕರಿಗೆ ಅನುದಾನ ಕೊಡುತ್ತಿಲ್ಲ. ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ಹಣ ಸಂಪಾದನೆಗಾಗಿ ಪೈಪೋಟಿ ನಡೆಸಿದ್ದಾರೆ. ಕೊನೆ ಚುನಾವಣೆ ಅಂತ ಹೇಳಿ ಸಿದ್ದರಾಮಯ್ಯ ದುಡ್ಡು ಮಾಡುತ್ತಿದ್ದಾರೆ. ಲೋಕಸಭಾ ಚುನಾವಣೆ ಬಳಿಕ ಸಿಎಂ ಆಗಲು ಡಿಕೆ ಶಿವಕುಮಾರ್​ ಹೊರಟಿದ್ದಾರೆ. ಇವರಿಬ್ಬರ ಮಧ್ಯೆ ನಮಗೇನು ಸಿಗುತ್ತಿಲ್ಲ ಅಂತ ಶಾಸಕರು ಅಸಮಾಧಾನ ಹೊರಹಾಕಿದ್ದಾರೆ. ಆಡಳಿತ ಪಕ್ಷದ ಶಾಸಕರಿಗೆ ಅನುದಾನ ಈಗ ಕೇಳಬೇಡಿ ಅಂತಿದ್ದಾರೆ. ಇನ್ನು ವಿಪಕ್ಷ ಶಾಸಕರಿಗೆ ಅನುದಾನ ಕೊಡೋದು ದೂರದ ಮಾತು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:56 pm, Mon, 14 August 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು