AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಗತಿ ಪರಿಶೀಲನೆ ಮೂಲಕ ಸಚಿವರ ಮೇಲೆ ಹಿಡಿತ ಸಾಧಿಸಲು ಮುಂದಾದ ಹೈಕಮಾಂಡ್​; ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಟೆನ್ಷನ್​​

ಪ್ರಗತಿ ಪರಿಶೀಲನೆ ಮೂಲಕ ಸಿದ್ದರಾಮಯ್ಯ ಸಂಪುಟದ ಸಚಿವರ ಮೇಲೆ ಹಿಡಿತ ಸಾಧಿಸಲು ಹೈಕಮಾಂಡ್ ಮುಂದಾಗಿದೆ.

ಪ್ರಗತಿ ಪರಿಶೀಲನೆ ಮೂಲಕ ಸಚಿವರ ಮೇಲೆ ಹಿಡಿತ ಸಾಧಿಸಲು ಮುಂದಾದ ಹೈಕಮಾಂಡ್​; ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಟೆನ್ಷನ್​​
ಕಾಂಗ್ರೆಸ್​ ಸಚಿವ ಸಂಪುಟ
ಕಿರಣ್​ ಹನಿಯಡ್ಕ
| Edited By: ವಿವೇಕ ಬಿರಾದಾರ|

Updated on:Jul 11, 2023 | 11:10 AM

Share

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ (Congrees) 135 ಸ್ಥಾನಗಳನ್ನು ಗೆಲ್ಲುವ ಮುಖಾಂತ​ ಅಭೂತಪೂರ್ವ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಹಿಡಿದೆ. ಅಧಿಕಾರ ಚುಕ್ಕಾಣಿ ಹಿಡಿದ ನಂತರ ಮುಖ್ಯಮಂತ್ರಿ ಆಯ್ಕೆ ಮತ್ತು ಸಚಿವರ ಆಯ್ಕೆಗೆ ಸಾಕಷ್ಟು ಕಸರತ್ತು ನಡೆಯಿತು. ಬಳಿಕ ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗಿದ್ದು, ಇದೀಗ ಈ ಸಚಿವರ ತಲೆ ಮೇಲೆ ತೂಗುಗತ್ತಿ ಇದೆ. ಹೌದು ಸಚಿವರ (Ministers) ಕಾರ್ಯವೈಖರಿ ಬಗ್ಗೆ ಹೈಕಮಾಂಡ್ ಮಾಹಿತಿ ಪಡೆಯಲಿದೆ.

ಸಚಿವರು ನಡೆಸಿದ ಸಭೆ, ಭೇಟಿ ಮಾಡಿದ ಪ್ರಮುಖರ ಬಗ್ಗೆ ಹೈಕಮಾಂಡ್ ಮಾಹಿತಿ ಪಡೆಯಲಿದೆ. ಮುಂದಿನ ಚುನಾವಣೆ ದೃಷ್ಟಿಯಿಂದ ಸಚಿವರ ಕಾರ್ಯವೈಖರಿ ಮೇಲೆ ಹೈಕಮಾಂಡ್ ಹದ್ದಿನ ಕಣ್ಣು ಇಟ್ಟಿದೆ. ಪ್ರತಿ ತಿಂಗಳೂ ಸಚಿವರು ತಮ್ಮ ಸಾಧನೆ ಸಭೆಗಳ ಬಗ್ಗೆ ವರದಿ ಪ್ರಕಟಿಸುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ರಾಜ್ಯ ರಾಜಕಾರಣದಲ್ಲಿ ಸಂಚಲನ: ಕಾಂಗ್ರೆಸ್​ನತ್ತ ಮುಖ ಮಾಡಿದ ಬಿಎಸ್​ ಯಡಿಯೂರಪ್ಪ ಸಂಬಂಧಿ

ಈಗಾಗಲೇ ಸಚಿವ ಪ್ರಿಯಾಂಕ ಖರ್ಗೆ, ಸಚಿವ ಝಮೀರ್ ಅಹಮದ್ ಖಾನ್ ತಮ್ಮ ಮೊದಲ ತಿಂಗಳ ವರದಿ ಪ್ರಕಟಿಸಿದ್ದಾರೆ. ಲೋಕಸಭೆ ಚುನಾವಣೆ ದೃಷ್ಟಿಯಿಂದ ಆಡಳಿತ ಹಿಡಿದಲ್ಲಿಟ್ಟುಕೊಳ್ಳಲು ಸಚಿವರ ಮೇಲೆ ಹೈಕಮಾಂಡ್​​ ಹಿಡಿತ ಸಾಧಿಸಲಿದೆ. ಸರ್ಕಾರಕ್ಕೆ ಯಾವುದೇ ಕಪ್ಪು ಚುಕ್ಕೆ ಬಾರದಂತೆ ನೋಡಿಕೊಳ್ಳಲು ಮಾಸ್ಟರ್ ಪ್ಲ್ಯಾನ್ ರೂಪಿಸಿದೆ.

ಅಕಸ್ಮಾತ್ ಕಳಪೆ ಪ್ರದರ್ಶನ ತೋರುವ ಸಚಿವರ ಮಾಹಿತಿ ಬಂದರೆ ಸಂಪುಟದಿಂದ ಕೈಬಿಡುವ ಸಾಧ್ಯತೆ ಇದೆ. ವಿಪಕ್ಷ ಬಿಜೆಪಿ ಸರ್ಕಾರದ ಸಾಧನೆ ಬಗ್ಗೆ ಪ್ರಶ್ನಿಸಿದರೆ ದಾಖಲೆ ಸಮೇತ ತೋರಿಸಲು ಸಿಎಂ ಸಿದ್ದರಾಮಯ್ಯ ಟೀಂ ಸಿದ್ದವಾಗಿದೆ. ಸಚಿವ ಸಂಪುಟ ಬದಲಾವಣೆಯಂತ ಸಾಧ್ಯತೆ ಎದುರಾದರೆ ಪ್ರಗತಿ ಪರಿಶೀಲನೆ ಆಧಾರದ ಮೇಲೆ ಹೈಕಮಾಂಡ್ ನಿರ್ಣಯ ಕೈಗೊಳ್ಳಲಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:29 am, Tue, 11 July 23

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ