Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಗತಿ ಪರಿಶೀಲನೆ ಮೂಲಕ ಸಚಿವರ ಮೇಲೆ ಹಿಡಿತ ಸಾಧಿಸಲು ಮುಂದಾದ ಹೈಕಮಾಂಡ್​; ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಟೆನ್ಷನ್​​

ಪ್ರಗತಿ ಪರಿಶೀಲನೆ ಮೂಲಕ ಸಿದ್ದರಾಮಯ್ಯ ಸಂಪುಟದ ಸಚಿವರ ಮೇಲೆ ಹಿಡಿತ ಸಾಧಿಸಲು ಹೈಕಮಾಂಡ್ ಮುಂದಾಗಿದೆ.

ಪ್ರಗತಿ ಪರಿಶೀಲನೆ ಮೂಲಕ ಸಚಿವರ ಮೇಲೆ ಹಿಡಿತ ಸಾಧಿಸಲು ಮುಂದಾದ ಹೈಕಮಾಂಡ್​; ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಟೆನ್ಷನ್​​
ಕಾಂಗ್ರೆಸ್​ ಸಚಿವ ಸಂಪುಟ
Follow us
ಕಿರಣ್​ ಹನಿಯಡ್ಕ
| Updated By: ವಿವೇಕ ಬಿರಾದಾರ

Updated on:Jul 11, 2023 | 11:10 AM

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ (Congrees) 135 ಸ್ಥಾನಗಳನ್ನು ಗೆಲ್ಲುವ ಮುಖಾಂತ​ ಅಭೂತಪೂರ್ವ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಹಿಡಿದೆ. ಅಧಿಕಾರ ಚುಕ್ಕಾಣಿ ಹಿಡಿದ ನಂತರ ಮುಖ್ಯಮಂತ್ರಿ ಆಯ್ಕೆ ಮತ್ತು ಸಚಿವರ ಆಯ್ಕೆಗೆ ಸಾಕಷ್ಟು ಕಸರತ್ತು ನಡೆಯಿತು. ಬಳಿಕ ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗಿದ್ದು, ಇದೀಗ ಈ ಸಚಿವರ ತಲೆ ಮೇಲೆ ತೂಗುಗತ್ತಿ ಇದೆ. ಹೌದು ಸಚಿವರ (Ministers) ಕಾರ್ಯವೈಖರಿ ಬಗ್ಗೆ ಹೈಕಮಾಂಡ್ ಮಾಹಿತಿ ಪಡೆಯಲಿದೆ.

ಸಚಿವರು ನಡೆಸಿದ ಸಭೆ, ಭೇಟಿ ಮಾಡಿದ ಪ್ರಮುಖರ ಬಗ್ಗೆ ಹೈಕಮಾಂಡ್ ಮಾಹಿತಿ ಪಡೆಯಲಿದೆ. ಮುಂದಿನ ಚುನಾವಣೆ ದೃಷ್ಟಿಯಿಂದ ಸಚಿವರ ಕಾರ್ಯವೈಖರಿ ಮೇಲೆ ಹೈಕಮಾಂಡ್ ಹದ್ದಿನ ಕಣ್ಣು ಇಟ್ಟಿದೆ. ಪ್ರತಿ ತಿಂಗಳೂ ಸಚಿವರು ತಮ್ಮ ಸಾಧನೆ ಸಭೆಗಳ ಬಗ್ಗೆ ವರದಿ ಪ್ರಕಟಿಸುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ರಾಜ್ಯ ರಾಜಕಾರಣದಲ್ಲಿ ಸಂಚಲನ: ಕಾಂಗ್ರೆಸ್​ನತ್ತ ಮುಖ ಮಾಡಿದ ಬಿಎಸ್​ ಯಡಿಯೂರಪ್ಪ ಸಂಬಂಧಿ

ಈಗಾಗಲೇ ಸಚಿವ ಪ್ರಿಯಾಂಕ ಖರ್ಗೆ, ಸಚಿವ ಝಮೀರ್ ಅಹಮದ್ ಖಾನ್ ತಮ್ಮ ಮೊದಲ ತಿಂಗಳ ವರದಿ ಪ್ರಕಟಿಸಿದ್ದಾರೆ. ಲೋಕಸಭೆ ಚುನಾವಣೆ ದೃಷ್ಟಿಯಿಂದ ಆಡಳಿತ ಹಿಡಿದಲ್ಲಿಟ್ಟುಕೊಳ್ಳಲು ಸಚಿವರ ಮೇಲೆ ಹೈಕಮಾಂಡ್​​ ಹಿಡಿತ ಸಾಧಿಸಲಿದೆ. ಸರ್ಕಾರಕ್ಕೆ ಯಾವುದೇ ಕಪ್ಪು ಚುಕ್ಕೆ ಬಾರದಂತೆ ನೋಡಿಕೊಳ್ಳಲು ಮಾಸ್ಟರ್ ಪ್ಲ್ಯಾನ್ ರೂಪಿಸಿದೆ.

ಅಕಸ್ಮಾತ್ ಕಳಪೆ ಪ್ರದರ್ಶನ ತೋರುವ ಸಚಿವರ ಮಾಹಿತಿ ಬಂದರೆ ಸಂಪುಟದಿಂದ ಕೈಬಿಡುವ ಸಾಧ್ಯತೆ ಇದೆ. ವಿಪಕ್ಷ ಬಿಜೆಪಿ ಸರ್ಕಾರದ ಸಾಧನೆ ಬಗ್ಗೆ ಪ್ರಶ್ನಿಸಿದರೆ ದಾಖಲೆ ಸಮೇತ ತೋರಿಸಲು ಸಿಎಂ ಸಿದ್ದರಾಮಯ್ಯ ಟೀಂ ಸಿದ್ದವಾಗಿದೆ. ಸಚಿವ ಸಂಪುಟ ಬದಲಾವಣೆಯಂತ ಸಾಧ್ಯತೆ ಎದುರಾದರೆ ಪ್ರಗತಿ ಪರಿಶೀಲನೆ ಆಧಾರದ ಮೇಲೆ ಹೈಕಮಾಂಡ್ ನಿರ್ಣಯ ಕೈಗೊಳ್ಳಲಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:29 am, Tue, 11 July 23

ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ