AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Congress: ಶಾಸಕರು ಸೇರಿದಂತೆ ರಾಜ್ಯದ 25 ನಾಯಕರಿಗೆ ದೆಹಲಿ ಬರುವಂತೆ ಕಾಂಗ್ರೆಸ್​ ಹೈಕಮಾಂಡ್ ಸೂಚನೆ

Congress: ರಾಜ್ಯದಲ್ಲಿ ನಡೆಯುತ್ತಿರುವ ಕಾಂಗ್ರೆಸ್​ ಶಾಸಕರು ಮತ್ತು ಸಚಿವರ ನಡುವೆ ನಡೆಯುತ್ತಿರುವ ಕಿತ್ತಾಟಕ್ಕೆ ಕಾಂಗ್ರೆಸ್​ ಹೈಕಮಾಂಡ್ ಎಂಟ್ರಿ ನೀಡಿದ್ದು, ಆಗಸ್ಟ್​ 2ಕ್ಕೆ ರಾಜ್ಯದ 25 ನಾಯಕರಿಗೆ ದೆಹಲಿಗೆ ಬರುವಂತೆ ಸೂಚನೆ ನೀಡಿದೆ.

Karnataka Congress: ಶಾಸಕರು ಸೇರಿದಂತೆ ರಾಜ್ಯದ 25 ನಾಯಕರಿಗೆ ದೆಹಲಿ ಬರುವಂತೆ ಕಾಂಗ್ರೆಸ್​ ಹೈಕಮಾಂಡ್ ಸೂಚನೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Jul 29, 2023 | 10:29 AM

Share

ದೆಹಲಿ, ಜು 29: ರಾಜ್ಯ ಕಾಂಗ್ರೆಸ್​​ ಶಾಸಕರ (Congress MLAs) ಪತ್ರ ವ್ಯವಹಾರ ದೆಹಲಿ ಕಾಂಗ್ರೆಸ್​​ ನಾಯಕರಿಗೆ ದೊಡ್ಡ ತಲೆನೋವುವಾಗಿದೆ, ಸಿಎಂ ಸಿದ್ಧರಾಮಯ್ಯ (CM Siddaramaiah) ನೇತೃತ್ವದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲೂ ಶಾಸಕರು ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು, ಈ ಸಭೆಯಲ್ಲಿ ರಾಜೀನಾಮೆ ಬೆದರಿಕೆಗಳು ಕೂಡ ಮಾಡಲಾಗಿತ್ತು ಎಂದು ಹೇಳಲಾಗಿದೆ. ಇದೀಗ ಸಚಿವರ ವಿರುದ್ಧ ಅಸಹಕಾರ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಎಂಟ್ರಿ ನೀಡಿದೆ. ಶಾಸಕಾಂಗ ಪಕ್ಷದ ಸಭೆಯ ನಂತರ ಈ ಬೆಳವಣಿಗೆ ನಡೆದಿದೆ. ಇದೀಗ ಸಚಿವರು ಮತ್ತು ಪ್ರಮುಖ ನಾಯಕರು ಆಗಸ್ಟ್​ 2ಕ್ಕೆ ದೆಹಲಿಗೆ ಬರುವಂತೆ ಹೈಕಮಾಂಡ್ ತಿಳಿಸಿದೆ. ಸಚಿವರ ವಿರುದ್ಧ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವ ಕೆಲ ಶಾಸಕರು, ಸಚಿವರಿಗೆ ಹಾಗೂ ಹಿರಿಯ ನಾಯಕರಾದ ಆರ್.ವಿ.ದೇಶಪಾಂಡೆ ಬಿ.ಕೆ.ಹರಿಪ್ರಸಾದ್, ಬಿ.ಎಲ್.ಶಂಕರ್ ಅವರಿಗೆ ದೆಹಲಿಗೆ ಬರುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಹೈಕಮಾಂಡ್ ಈ  ಶಾಸಕರು , ಸಚಿವರು, ಹಿರಿಯರ ನಾಯಕರ ಜತೆಗೆ ಕಾಂಗ್ರೆಸ್​ ಶಾಸಕರ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮತ್ತು ಶಾಸಕಾಂಗ ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​​ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ  ಚರ್ಚೆ ನಡೆಸಲಿದೆ ಎಂದು ನ್ಯೂಸ್​​9 ವರದಿ ಮಾಡಿದೆ.

ಇನ್ನೂ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ಕಾರ್ಯಕ್ರಮವೊಂದರಲ್ಲಿ ಶಾಸಕ ಹರಿಪ್ರಸಾದ್ ನನಗೆ ಸಿಎಂ ಮಾಡಲು ಗೊತ್ತು, ಸ್ಥಾನದಿಂದ ಇಳಿಸಲು ಗೊತ್ತು ಎಂಬ ಹೇಳಿಕೆಯ ಬಗ್ಗೆಯು ಹೈಕಮಾಂಡ್ ಈ ಸಭೆಯಲ್ಲಿ ಚರ್ಚೆ ನಡೆಸಬಹುದು ಎಂದು ವರದಿ ಹೇಳಿದೆ. ವರದಿಗಳ ಪ್ರಕಾರ ಶಾಸಕರ ಸಮಸ್ಯೆಗಳನ್ನು ಪರಿಹರಿಸಲು ಕಾಂಗ್ರೆಸ್ ಹೈಕಮಾಂಡ್ ಸಮನ್ವಯ ಸಮಿತಿಯನ್ನು ರಚಿಸಬಹುದು. ಸರ್ಕಾರ ಮತ್ತು ಪಕ್ಷದ ನಾಯಕರ ನಡುವೆ ಸೇತುವೆಯಾಗಿ ಕೆಲಸ ಮಾಡಲು ಗೃಹ ಸಚಿವ ಡಾ ಜಿ ಪರಮೇಶ್ವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಬಹುದು ಎಂದು ಹೇಳಲಾಗಿದೆ.

ಇದನ್ನೂ ಓದಿ: ಅಹಂಕಾರಿ ಸಚಿವರಿಂದ ಸ್ವಾಭಿಮಾನಕ್ಕೆ ಧಕ್ಕೆ; ಸಿದ್ದರಾಮಯ್ಯ ಬಳಿ ರಾಜೀನಾಮೆ ಬೆದರಿಕೆ ಹಾಕಿದ ಬಿಆರ್ ಪಾಟೀಲ್

ಈ ಸಭೆಯಲ್ಲಿ ಮಂಡಳಿ ಮತ್ತು ನಿಗಮಗಳ ಮುಖ್ಯಸ್ಥರನ್ನು ನೇಮಕಾ ಮಾಡುವ ಬಗ್ಗೆ ಸಭೆಯಲ್ಲಿ ಕಾಂಗ್ರೆಸ್​​ ನಾಯಕರು ಚರ್ಚೆ ಮಾಡಬಹುದು ಎಂದು ಹೇಳಲಾಗಿದೆ. ಕಾಂಗ್ರೆಸ್​ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಈ ಸಭೆ ನಡೆಸಲಾಗುವುದು ಮತ್ತು ಸಭೆಯಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​​ ಗಾಂಧಿ ಕೂಡ ಭಾಗವಹಿಸುವ ಸಾಧ್ಯತೆ ಇದೆ. ಇದರ ಜತೆಗೆ 2024ರ ಲೋಕಸಭೆ ಚುನಾವಣೆ ಕಾರ್ಯತಂತ್ರದ ಬಗ್ಗೆಯು ಚರ್ಚೆ ನಡೆಯಬಹುದು ಎಂದು ಹೇಳಲಾಗಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:24 am, Sat, 29 July 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್