AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಬಣ ಬಡಿದಾಟ: ದಿಲ್ಲಿಯಲ್ಲಿ ರಾಜೀ ಸಂಧಾನ, 50:50 ಫಾರ್ಮುಲಾ

ಕರ್ನಾಟಕ ಕಾಂಗ್ರೆಸ್​ನಲ್ಲಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವಿನ ಮುನಿಸು ಮತ್ತೆ ಹೊರಬಿದ್ದಿದೆ. ಅತ್ತ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಕರ್ನಾಟಕದಿಂದ ಆಂಧ್ರ ಪ್ರದೇಶದತ್ತ ಸಾಗಿದೆ. ಇತ್ತ ಬಂಡೆ-ಟಗರು ಬಣ ಬಡಿದಾಟಕ್ಕೆ ನಿಂತಿದ್ದು, ಈ ಬಗ್ಗೆ ದಿಲ್ಲಿಯಲ್ಲಿ ರಾಜೀ ಪಂಚಾಯಿತಿ ಆಗಿದೆ.

ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಬಣ ಬಡಿದಾಟ: ದಿಲ್ಲಿಯಲ್ಲಿ ರಾಜೀ ಸಂಧಾನ, 50:50 ಫಾರ್ಮುಲಾ
ಸಿದ್ದರಾಮಯ್ಯ, ಡಿಕೆ ಶಿವಕುಮಾರ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Oct 26, 2022 | 4:38 PM

ನವದೆಹಲಿ: ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ (Siddaramaiah And DK Shivakumar) ತಬ್ಬಿಕೊಳ್ಳುವಂತೆ ರಾಹುಲ್ ಗಾಂಧಿ ಮಾಡಿದ್ದರು. ಚಾಮರಾಜನಗರದಲ್ಲಿ ಸಿದ್ದು ಡಿಕೆ ಕೈ ಹಿಡಿದು ನಗಾರಿ ಬಾರಿಸಿದ್ದರು ಭಾರತ್ ಜೋಡೋ ಯಾತ್ರೆಯಲ್ಲೂ ಸಿದ್ದು- ಡಿಕೆ ಕೈ ಹಿಡಿದು ಜೊತೆ ಜೊತೆಯಲಿ ಸಾಗಿ ಎನ್ನುವ ಸಂದೇಶ ಸಾರಿದ್ದರು. ಆದ್ರೆ, ರಾಹುಲ್ ಗಾಂಧಿ ಜೋಡೋ ಯಾತ್ರೆ ಕರ್ನಾಟಕ(Karnataka) ದಾಟಿ ಆಂಧ್ರಕ್ಕೆ ಹೋಗುವಷ್ಟರಲ್ಲೇ ಸಿದ್ದ-ಡಿಕೆ ಬಣದ ಮಧ್ಯೆ ಮೂಡಿರೋ ಬಿರುಕು ಮತ್ತೆ ಕಾಣಿಸಿಕೊಂಡಿದ್ದು, ಉಭಯ ನಾಯಕರ ನಡುವಿನ ಜಂಗೀ ಕುಸ್ತಿ ದಿಲ್ಲಿ ಮುಟ್ಟಿದೆ.

ಹೌದು….ಸಿದ್ದರಾಮಯ್ಯರ ಹುಟ್ಟಹಬ್ಬನ್ನ ಉತ್ಸವದ ರೀತಿ ಮಾಡಿದ್ದ ಟಗರು ಪಡೆ ಇದೀಗ ತಮ್ಮ ನಾಯಕನ ವರ್ಚಸ್ಸು ಹೆಚ್ಚಿಸುವುದಕ್ಕೆ ಬೀದರ್​ನಿಂದ ಚಾಮರಾಜನಗರವರೆಗೆ ಬಸ್ ಯಾತ್ರೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಸಿದ್ದರಾಮಯ್ಯ ಒಬ್ಬರೇ ಬಸ್ ಯಾತ್ರೆ ಮಾಡಿ ಎಲೆಕ್ಷನ್ ವೇಳೆಗೆ ನಾಡಿನಲ್ಲಿ ಮಿಂಚಿನ ಸಂಚಲನ ಎಬ್ಬಿಸಬೇಕು ಅನ್ನೋದು ಸಿದ್ದು ಬಣದ ಪ್ಲ್ಯಾನ್ ಆಗಿದೆ.

ಭಾರತ್ ಜೋಡೋ ಯಾತ್ರೆ ಬಳಿಕ ಸಿದ್ದು-ಡಿಕೆಶಿ ಜಂಟಿ ಯಾತ್ರೆ; ಡಿ.ಕೆ.ಶಿವಕುಮಾರ್ ಹೇಳಿದ್ದೇನು?

ಆದ್ರೆ, ಇದಕ್ಕೆ ಡಿಕೆ ಶಿವಕುಮಾರ್ ಬಣ ಸೇರಿದಂತೆ ಇತರೆ ಕೆಲ ಹಿರಿಯ ಕೈ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿದ್ದು ಬಸ್ ಯಾತ್ರೆಗೆ ಸಮನಾಗಿ ಡಿಕೆಶಿ ಬಣವೂ ಸಹ ಬಸ್ ಯಾತ್ರೆ ಕೈಗೊಳ್ಳಲು ತೆರೆ ಮರೆಯಲ್ಲೇ ತಂತ್ರರೂಪಿಸುತ್ತಿದೆ. ಹೀಗಾಗಿ ಚುನಾವಣೆ ಹೊತ್ತಿಗೆ ಎರಡು ಬಣದ ಫೈಟ್ ತಾರಕಕ್ಕೇರಿದ್ದು, ಪಕ್ಷವೇ ಇಬ್ಬರ ಪ್ರವಾಸದ ಪಟ್ಟಿ ತಯಾರಿಸಲಿ ಎಂದು ಹಿರಿಯ ನಾಯಕರು, ಈ ಬಗ್ಗೆ ಹೈಕಮಾಂಡ್​ನಿಂದ ಅನುಮತಿ ಪಡೆಯಲು ನವದೆಹಲಿಗೆ ತೆರಳಿದೆ. ಅಂತಿಮವಾಗಿ ದಿಲ್ಲಿಯಲ್ಲಿ ಈ ಬಗ್ಗೆ ರಾಜೀ ಪಂಚಾಯಿತಿ ಆಗಿದೆ.

50:50 ಫಾರ್ಮುಲಾ

ಇಬ್ಬರು ನಾಯಕರ ಬಣ ರಾಜಕೀಯವನ್ನು ಸೂಕ್ಷ್ಮವಾಗಿ ಗಮನಿಸಿರುವ ಕೈಪಡೆಯ ಹಿರಿಯ ನಾಯಕರ ತಂಡ, ಚುನಾವಣೆ ಹೊತ್ತಲ್ಲಿ ಎರಡು ಬಣ ಕಿತ್ತಾಡೋದು ಬೇಡ. ನಾಯಕರೆಲ್ಲ ಒಗ್ಗಟ್ಟಾಗಿ ಯಾತ್ರೆ ಮಾಡಿ, ಇಲ್ಲದಿದ್ದರೆ ತಪ್ಪು ಸಂದೇಶ ರವಾನೆಯಾಗುತ್ತೆ ಅನ್ನೋ ಸಲಹೆ ಕೊಟ್ಟಿದ್ದಾರಂತೆ. ಈ ಸಂಬಂಧ ನವದೆಹಲಿಯಲ್ಲಿ ಕೆಸಿ ವೇಣುಗೋಪಾಲ್​ ಅವರು ಕರ್ನಾಟಕ ಉಸ್ತುವಾರಿ ಸುರ್ಜೆವಾಲಾ, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜತೆ ಸುದೀರ್ಘವಾಗಿ ಸರ್ಚೆ ನಡೆಸಿದ್ದು, 50:50 ಫಾರ್ಮುಲಾ ಬಳಸಲು ಮುಂದಾಗಿದೆ. 28 ಲೋಕಸಭಾ ಪೈಕಿ 14 ಸಿದ್ದರಾಮಯ್ಯ ಮತ್ತು 14 ಡಿಕೆ ಶಿವಕುಮಾರ್ ಪ್ರಚಾರ ಮಾಡುವ ಬಗ್ಗೆ ಚರ್ಚೆ ನಡೆದಿದ್ದು, ಹೈಕಮಾಂಡ್​ ನಿರ್ಧಾರದ ಬಳಿಕ ಯಾತ್ರೆ ಬಗ್ಗೆ ಸ್ಪಷ್ಟತೆ ತಿಳಿಯಲಿದೆ.

ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮಧ್ಯೆ ಎಷ್ಟು ಹೊಂದಾಣಿಕೆ ಮಾಡಲು ಹೈಕಮಾಂಡ್ ಪ್ರಯತ್ನಿಸುತ್ತಿದ್ದರೂ ಒಂದಲ್ಲ ಒಂದು ವಿಚಾರಕ್ಕೆ ಉಭಯ ನಾಯಕರ ಮಧ್ಯೆ ಬಿರುಕು ಕಾಣಿಸಿಕೊಳ್ಳುತ್ತಿದೆ. ಇದು ಹೈಕಮಾಂಡ್​ಗೆ ದೊಡ್ಡ ತಲೆನೋವಾಗಿಪರಿಣಮಿಸಿದೆ.

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ