AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಸರ್ಕಾರ ಸಿದ್ದಗಂಗಾ ಮಠದ 10 ಕೋಟಿ ರೂ ಅನುದಾನ ತಡೆಹಿಡಿದಿದೆ: ಬಿಜೆಪಿ ಶಾಸಕ ಸುರೇಶ್ ಗೌಡ

ಕಾಂಗ್ರೆಸ್ ಸರ್ಕಾರ ಸಿದ್ದಗಂಗಾ ಮಠದ 10 ಕೋಟಿ ರೂ ಅನುದಾನ ತಡೆಹಿಡಿದಿದೆ. ಹಾಸ್ಟೆಲ್ ನಿರ್ಮಾಣಕ್ಕೆ ಬಿಜೆಪಿ ಸರ್ಕಾರ ಬಿಡುಗಡೆ ಮಾಡಿದ್ದ ಅನುದಾನವನ್ನು ತಡೆಹಿಡಿಯಲಾಗಿದೆ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಆರೋಪಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಸಿದ್ದಗಂಗಾ ಮಠದ 10 ಕೋಟಿ ರೂ ಅನುದಾನ ತಡೆಹಿಡಿದಿದೆ: ಬಿಜೆಪಿ ಶಾಸಕ ಸುರೇಶ್ ಗೌಡ
ರಮೇಶ್ ಬಿ. ಜವಳಗೇರಾ
|

Updated on:May 29, 2023 | 4:04 PM

Share

ತುಮಕೂರು: ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದ ಒಂದೇ ದಿನದಲ್ಲಿ ಬಿಜೆಪಿ ಸರ್ಕಾರದ ಎಲ್ಲ ಕಾಮಗಾರಿಗಳ ಅನುದಾನ ಬಿಡುಗಡೆ ತಡೆಹಿಡಿದಿದೆ. ಜತೆಗೆ ಆರಂಭವಾಗಬೇಕಿರುವ ಕಾಮಗಾರಿಗಳನ್ನೂ ತಡೆಹಿಡಿಯುವಂತೆ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಆರ್ಥಿಕ ಇಲಾಖೆ ಕಾರ್ಯದರ್ಶಿ ಏಕರೂಪ್ ಕೌರ್ ಅವರು ಸೋಮವಾರ ಸುತ್ತೋಲೆ ಹೊರಡಿಸಿದ್ದರು. ಇದು ಗುತ್ತಿಗೆದಾರರ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನು ಬಿಜೆಪಿ ನಾಯಕರು ಸಹ ಖಂಡಿಸಿದ್ದಾರೆ. ಇನ್ನು ಈ ಬಗ್ಗೆ ತುಮಕೂರು ಗ್ರಾಮೀಣ ಬಿಜೆಪಿ ಶಾಸಕ ಸುರೇಶ್ ಗೌಡ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಸರ್ಕಾರ ಸಿದ್ದಗಂಗಾ ಮಠದ 10 ಕೋಟಿ ರೂ ಅನುದಾನ ತಡೆಹಿಡಿದಿದೆ. ಹಾಸ್ಟೆಲ್ ನಿರ್ಮಾಣಕ್ಕೆ ಬಿಜೆಪಿ ಸರ್ಕಾರ ಬಿಡುಗಡೆ ಮಾಡಿದ್ದ ಅನುದಾನವನ್ನು ತಡೆಹಿಡಿಯಲಾಗಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: ಬಿಜೆಪಿ ಸರ್ಕಾರದ ಎಲ್ಲ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ತಡೆಹಿಡಿದ ಸಿದ್ದರಾಮಯ್ಯ ಸರ್ಕಾರ

ನನ್ನ ಕ್ಷೇತ್ರದ 20 ಕೋಟಿ ರೂ ಅನುದಾನ ತಡೆಹಿಡಿಯಲಾಗಿದೆ. ಅದರಲ್ಲಿ ಸಿದ್ದಗಂಗಾ ಮಠದ 10 ಕೋಟಿ ರೂ. ಸಹ ಸೇರಿದೆ. ಸಿದ್ದಗಂಗಾ ಮಠದ ಅನುದಾನವನ್ನು ಶಾಶ್ವತವಾಗಿ ತಡೆ ಹಿಡಿಯುವ ಧಮ್ಮು ಸರ್ಕಾರಕ್ಕೆ ಇಲ್ಲ. ಒಟ್ಟು 20 ಸಾವಿರ ಕೋಟಿ ರೂ, ತಡೆಹಿಡಿದಿದ್ದಾರೆ,ಇದರಲ್ಲಿ ಮಠದ್ದು ಸೇರಿದೆ. ಅದನ್ನ ಮತ್ತೆ ಮಠಕ್ಕೆ ಕೊಡುವ ವಿಶ್ವಾಸ ಇದೆ. ಒಂದು ವೇಳೆ ಅನುದಾನ ಬಿಡುಗಡೆ ಮಾಡದೇ ಇದ್ದರೆ ಬೀದಿಗಿಳಿದು ಹೊರಾಟ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದರು.

ಯಾವ ಸರ್ಕಾರ ರೀ…ಜನಗಳಿಂದ ಬಂದ ಸರ್ಕಾರ ರೀ. ಯಾಕೆ ಅನುದಾನ ಕೊಡಲ್ಲ. ಭ್ರಷ್ಟಾಚಾರ ಆಗಿದ್ದರೆ ತಡೆಹಿಡಿಯಲಿ. ಅದನ್ನು ಬಿಟ್ಟು ಅನಾವಶ್ಯಕವಾಗಿ ತಡೆಹಿಡಿಯಬಾರದು. ಆದರೂ ಮಠದ ಅನುದಾನ ತಡೆ ತೆರವು ಮಾಡುತ್ತಾರೆ ಎಂಬ ವಿಶ್ವಾಸ ಇದೆ ಎಂದರು.

ಕಾಂಗ್ರೆಸ್ ನವರು ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡದೇ ಜನರಿಗೆ ಮೋಸ ಮಾಡುತಿದ್ದಾರೆ. ಕರ್ನಾಟಕದ ಜನತೆ ಮೋಸ ಹೋಗಿದ್ದಾರೆ. ಕಾಂಗ್ರೆಸ್ ನವರು ಹೇಳಿದಂತೆ ನಾನೂ ಕೂಡ ಕರೆಂಟ್ ಬಿಲ್ ಕಟ್ಟಲ್ಲ. 200 ಯೂನಿಟ್ ವರೆಗೆ ಬಿಲ್ ಕಟ್ಟಲ್ಲ. ನಮ್ಮ ಯಾವ ಕಾರ್ಯಕರ್ತರು ಕರೆಂಟ್ ಬಿಲ್ ಕಟ್ಟಲ್ಲ. ಡಿಕೆ ಶಿವಕುಮಾರ್ ಅವರು ಮನೆ ಯಜಮಾನಿಗೆ 2 ಸಾವಿರ ಹಣ ಕೊಡುತ್ತೇನೆ ಎಂದು ಹೇಳಿದರು. ಈಗ ಅವರಿಗೆ ಸೊಸೆಗೆ ಹಣ ಹಾಕಬೇಕೋ ಅತ್ತೆಗೆ ಹಣ ಹಾಕಬೇಕೋ ಅನ್ನುವ‌ ಗೊಂದಲ ಶುರುವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸುತ್ತಾರೆ ಎಂದರು.

Published On - 4:02 pm, Mon, 29 May 23

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ