AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಸರ್ಕಾರ ಸಿದ್ದಗಂಗಾ ಮಠದ 10 ಕೋಟಿ ರೂ ಅನುದಾನ ತಡೆಹಿಡಿದಿದೆ: ಬಿಜೆಪಿ ಶಾಸಕ ಸುರೇಶ್ ಗೌಡ

ಕಾಂಗ್ರೆಸ್ ಸರ್ಕಾರ ಸಿದ್ದಗಂಗಾ ಮಠದ 10 ಕೋಟಿ ರೂ ಅನುದಾನ ತಡೆಹಿಡಿದಿದೆ. ಹಾಸ್ಟೆಲ್ ನಿರ್ಮಾಣಕ್ಕೆ ಬಿಜೆಪಿ ಸರ್ಕಾರ ಬಿಡುಗಡೆ ಮಾಡಿದ್ದ ಅನುದಾನವನ್ನು ತಡೆಹಿಡಿಯಲಾಗಿದೆ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಆರೋಪಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಸಿದ್ದಗಂಗಾ ಮಠದ 10 ಕೋಟಿ ರೂ ಅನುದಾನ ತಡೆಹಿಡಿದಿದೆ: ಬಿಜೆಪಿ ಶಾಸಕ ಸುರೇಶ್ ಗೌಡ
ರಮೇಶ್ ಬಿ. ಜವಳಗೇರಾ
|

Updated on:May 29, 2023 | 4:04 PM

Share

ತುಮಕೂರು: ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದ ಒಂದೇ ದಿನದಲ್ಲಿ ಬಿಜೆಪಿ ಸರ್ಕಾರದ ಎಲ್ಲ ಕಾಮಗಾರಿಗಳ ಅನುದಾನ ಬಿಡುಗಡೆ ತಡೆಹಿಡಿದಿದೆ. ಜತೆಗೆ ಆರಂಭವಾಗಬೇಕಿರುವ ಕಾಮಗಾರಿಗಳನ್ನೂ ತಡೆಹಿಡಿಯುವಂತೆ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಆರ್ಥಿಕ ಇಲಾಖೆ ಕಾರ್ಯದರ್ಶಿ ಏಕರೂಪ್ ಕೌರ್ ಅವರು ಸೋಮವಾರ ಸುತ್ತೋಲೆ ಹೊರಡಿಸಿದ್ದರು. ಇದು ಗುತ್ತಿಗೆದಾರರ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನು ಬಿಜೆಪಿ ನಾಯಕರು ಸಹ ಖಂಡಿಸಿದ್ದಾರೆ. ಇನ್ನು ಈ ಬಗ್ಗೆ ತುಮಕೂರು ಗ್ರಾಮೀಣ ಬಿಜೆಪಿ ಶಾಸಕ ಸುರೇಶ್ ಗೌಡ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಸರ್ಕಾರ ಸಿದ್ದಗಂಗಾ ಮಠದ 10 ಕೋಟಿ ರೂ ಅನುದಾನ ತಡೆಹಿಡಿದಿದೆ. ಹಾಸ್ಟೆಲ್ ನಿರ್ಮಾಣಕ್ಕೆ ಬಿಜೆಪಿ ಸರ್ಕಾರ ಬಿಡುಗಡೆ ಮಾಡಿದ್ದ ಅನುದಾನವನ್ನು ತಡೆಹಿಡಿಯಲಾಗಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: ಬಿಜೆಪಿ ಸರ್ಕಾರದ ಎಲ್ಲ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ತಡೆಹಿಡಿದ ಸಿದ್ದರಾಮಯ್ಯ ಸರ್ಕಾರ

ನನ್ನ ಕ್ಷೇತ್ರದ 20 ಕೋಟಿ ರೂ ಅನುದಾನ ತಡೆಹಿಡಿಯಲಾಗಿದೆ. ಅದರಲ್ಲಿ ಸಿದ್ದಗಂಗಾ ಮಠದ 10 ಕೋಟಿ ರೂ. ಸಹ ಸೇರಿದೆ. ಸಿದ್ದಗಂಗಾ ಮಠದ ಅನುದಾನವನ್ನು ಶಾಶ್ವತವಾಗಿ ತಡೆ ಹಿಡಿಯುವ ಧಮ್ಮು ಸರ್ಕಾರಕ್ಕೆ ಇಲ್ಲ. ಒಟ್ಟು 20 ಸಾವಿರ ಕೋಟಿ ರೂ, ತಡೆಹಿಡಿದಿದ್ದಾರೆ,ಇದರಲ್ಲಿ ಮಠದ್ದು ಸೇರಿದೆ. ಅದನ್ನ ಮತ್ತೆ ಮಠಕ್ಕೆ ಕೊಡುವ ವಿಶ್ವಾಸ ಇದೆ. ಒಂದು ವೇಳೆ ಅನುದಾನ ಬಿಡುಗಡೆ ಮಾಡದೇ ಇದ್ದರೆ ಬೀದಿಗಿಳಿದು ಹೊರಾಟ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದರು.

ಯಾವ ಸರ್ಕಾರ ರೀ…ಜನಗಳಿಂದ ಬಂದ ಸರ್ಕಾರ ರೀ. ಯಾಕೆ ಅನುದಾನ ಕೊಡಲ್ಲ. ಭ್ರಷ್ಟಾಚಾರ ಆಗಿದ್ದರೆ ತಡೆಹಿಡಿಯಲಿ. ಅದನ್ನು ಬಿಟ್ಟು ಅನಾವಶ್ಯಕವಾಗಿ ತಡೆಹಿಡಿಯಬಾರದು. ಆದರೂ ಮಠದ ಅನುದಾನ ತಡೆ ತೆರವು ಮಾಡುತ್ತಾರೆ ಎಂಬ ವಿಶ್ವಾಸ ಇದೆ ಎಂದರು.

ಕಾಂಗ್ರೆಸ್ ನವರು ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡದೇ ಜನರಿಗೆ ಮೋಸ ಮಾಡುತಿದ್ದಾರೆ. ಕರ್ನಾಟಕದ ಜನತೆ ಮೋಸ ಹೋಗಿದ್ದಾರೆ. ಕಾಂಗ್ರೆಸ್ ನವರು ಹೇಳಿದಂತೆ ನಾನೂ ಕೂಡ ಕರೆಂಟ್ ಬಿಲ್ ಕಟ್ಟಲ್ಲ. 200 ಯೂನಿಟ್ ವರೆಗೆ ಬಿಲ್ ಕಟ್ಟಲ್ಲ. ನಮ್ಮ ಯಾವ ಕಾರ್ಯಕರ್ತರು ಕರೆಂಟ್ ಬಿಲ್ ಕಟ್ಟಲ್ಲ. ಡಿಕೆ ಶಿವಕುಮಾರ್ ಅವರು ಮನೆ ಯಜಮಾನಿಗೆ 2 ಸಾವಿರ ಹಣ ಕೊಡುತ್ತೇನೆ ಎಂದು ಹೇಳಿದರು. ಈಗ ಅವರಿಗೆ ಸೊಸೆಗೆ ಹಣ ಹಾಕಬೇಕೋ ಅತ್ತೆಗೆ ಹಣ ಹಾಕಬೇಕೋ ಅನ್ನುವ‌ ಗೊಂದಲ ಶುರುವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸುತ್ತಾರೆ ಎಂದರು.

Published On - 4:02 pm, Mon, 29 May 23

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!