AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಮಪತ್ರ ಸಲ್ಲಿಸುವ ಮಾದರಿಯಲ್ಲೇ ಬ್ಯಾಂಡು, ಜಾನಪದ ಕಲಾ ತಂಡ. ತಮಟೆ ವಾದ್ಯಗಳೊಂದಿಗೆ ಬಂದು ಟಿಕೇಟ್​ಗಾಗಿ ಅರ್ಜಿ ಸಲ್ಲಿಸಿದ ಕೈ ನಾಯಕ

ಕಾಂಗ್ರೆಸ್​ ನಾಯಕರೊಬ್ಬರು ಮುಂದಿನ ವಿಧಾನಸಭೆ ಚುನಾಚವಣೆ ಟಿಕೇಟ್​ಗಾಗಿ ಬ್ಯಾಂಡು, ಜಾನಪದ ಕಲಾ ತಂಡಗಳು, ತಮಟೆ ವಾದ್ಯಗಳೊಂದಿಗೆ ಬಂದು ಅರ್ಜಿ ಸಲ್ಲಿಸಿ ಗಮನಸೆಳೆದಿದ್ದಾರೆ.

ನಾಮಪತ್ರ ಸಲ್ಲಿಸುವ ಮಾದರಿಯಲ್ಲೇ ಬ್ಯಾಂಡು, ಜಾನಪದ ಕಲಾ ತಂಡ. ತಮಟೆ ವಾದ್ಯಗಳೊಂದಿಗೆ ಬಂದು ಟಿಕೇಟ್​ಗಾಗಿ ಅರ್ಜಿ ಸಲ್ಲಿಸಿದ ಕೈ ನಾಯಕ
ಟಿಕೇಟ್​ಗಾಗಿ ಶಕ್ತಿ ಪ್ರದರ್ಶನ ಮಾಡಿದ ಕೈ ನಾಯಕ
TV9 Web
| Edited By: |

Updated on: Nov 20, 2022 | 3:04 PM

Share

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ  (Karnataka Assembly Election 2023) ಇನ್ನೂ ಐದಾರು ತಿಂಗಳು ಇರುವಾಗಲೇ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅದರಲ್ಲೂ ಕಾಂಗ್ರೆಸ್​ನಲ್ಲಿ ಟಿಕೇಟ್​​ ಫೈಟ್ (Congress Ticket Fight)  ಜೋರಾಗಿದೆ. ಟಿಕೆಟ್​ಗಾಗಿ ಅರ್ಜಿ ಸಲ್ಲಿಸಲು ನಾಳೆ(ನ.21) ಕೊನೆ ದಿನವಾಗಿದ್ದರಿಂದ ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಮುಗಿಬಿದ್ದಿದ್ದಾರೆ. ಇನ್ನು ಇಲ್ಲೋರ್ವ ಟಿಕೇಟ್ ಆಕಾಂಕ್ಷಿ ಚುನಾವಣೆಗೆ ನಾಮಪತ್ರ ಸಲ್ಲಿಸುವ ಮಾದರಿಯಲ್ಲೇ ಕೆಪಿಸಿಸಿಗೆ ಬಂದು ಅರ್ಜಿ ಸಲ್ಲಿಸಿ ಗಮನಸೆಳೆದಿದ್ದಾರೆ.

ಮೂರು ಸರ್ವೆಗಳಲ್ಲಿ ಕಾಂಗ್ರೆಸ್ ಮುಂದೆ: ಬಿಜೆಪಿಗೆ ಎಷ್ಟು ಸ್ಥಾನ? ಮಾಹಿತಿ ಬಿಚ್ಚಿಟ್ಟ ಕೆಪಿಸಿಸಿ ಕಾರ್ಯಾಧ್ಯಕ್ಷ

ಹೌದು….ಧನಂಜಯ್. ಜಿ ಅವರು ಸುಮಾರು 300 ಬಸ್ ಗಳಲ್ಲಿ ಬೆಂಬಲಿಗರನ್ನು ಬಂದು ದಾಸರಹಳ್ಳಿ ಕ್ಷೇತ್ರದ ಟಿಕೇಟ್​ಗಾಗಿ ಇಂದು(ನ.20) ಅರ್ಜಿ ಸಲ್ಲಿಸಿದರು. ಬ್ಯಾಂಡು, ಜಾನಪದ ಕಲಾ ತಂಡಗಳು, ತಮಟೆ ವಾದ್ಯಗಳೊಂದಿಗೆ ಬಂದು ಅರ್ಜಿ ಸಲ್ಲಿಸುವ ಮೂಲಕ ಶಕ್ತಿ ಪ್ರದರ್ಶನ ಮಾಡಿದರು. ಚುನಾವಣೆಗೆ ನಾಮಪತ್ರ ಸಲ್ಲಿಸುವ ಮಾದರಿಯಲ್ಲೇ ಕೆಪಿಸಿಸಿಗೆ ಬಂದು ಟಿಕೆಟ್​ಗಾಗಿ ಅರ್ಜಿ ಸಲ್ಲಿಸಿರುವ ರೀತಿ ಕಂಡು ಕಾಂಗ್ರೆಸ್ ನಾಯಕರು ದಂಗಾದರು.

ಅಲ್ಲದೇ ಸುಮಾರು 300 ಬಸ್ ಗಳಲ್ಲಿ ಬೆಂಬಲಿಗರನ್ನು ಕೆಪಿಸಿಸಿ ಕಚೇರಿಗೆ ಕರೆತಂದಿರುವುದರಿಂದ ಕೆಪಿಸಿಸಿ ಕಂಟೋನ್ಮೆಂಟ್ ಸುತ್ತಮುತ್ತ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ಧನಂಜಯ್ ಬೆಂಬಲಿಗರನ್ನು ಕಂಟ್ರೋಲ್​ ಜೊತೆ ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರು ಸುಸ್ತಾದರು.

ದಾಸರಹಳ್ಳಿಯಿಂದ ಟಿಕೇಟ್ ಭರವಸೆ ಸಿಕ್ಕಿರುವ ಹಿನ್ನೆಲೆಯಲ್ಲಿ ಧನಂಜಯ್ ಅವರು ಭರ್ಜರಿ ಶಕ್ತಿ ಪ್ರದರ್ಶನ ಮಾಡಿದ್ದಾರೆ ಎನ್ನಲಾಗಿದೆ. ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರ ಗನ್‌ ಮ್ಯಾನ್‌ ಆಗಿದ್ದ ಮಂಜುನಾಥ್‌ 2018ರಲ್ಲಿ ಜೆಡಿಎಸ್‌ನಿಂದ ಕಣಕ್ಕಿಳಿದು ಗೆಲುವು ಸಾಧಿಸಿದ್ದಾರೆ.  ಈ ಮೂಲಕ ಈ ಹಿಂದೆ 2 ಬಾರಿ ಬಿಜೆಪಿಯಿಂದ ಗೆದ್ದಿದ್ದ ಮುನಿರಾಜು ಅವರ ಹ್ಯಾಟ್ರಿಕ್ ಗೆಲುವಿನ ಕನಸನ್ನು ಭಗ್ನಗೊಳಿಸಿದ್ದರು. ಈ ಬಾರಿ ಮಂಜುನಾಥ್ ವಿರುದ್ಧ ಕಾಂಗ್ರೆಸ್​ನಿಂದ ಕಣಕ್ಕಳಿಯಲು ಧನಂಜಯ್ ಅವರು ಭರ್ಜರಿ ಶಕ್ತಿ ಪ್ರದರ್ಶನದೊಂದಿಗೆ ಟಿಕೇಟ್​ಗಾಗಿ ಅರ್ಜಿ ಸಲ್ಲಿಸಿದ್ದು, ಹೈಕಮಾಂಡ್​ ಮಣೆ ಹಾಕುತ್ತಾ ಎನ್ನುವುದನ್ನು ಕಾದುನೋಡಬೇಕಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?