AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಮಪತ್ರ ಸಲ್ಲಿಸುವ ಮಾದರಿಯಲ್ಲೇ ಬ್ಯಾಂಡು, ಜಾನಪದ ಕಲಾ ತಂಡ. ತಮಟೆ ವಾದ್ಯಗಳೊಂದಿಗೆ ಬಂದು ಟಿಕೇಟ್​ಗಾಗಿ ಅರ್ಜಿ ಸಲ್ಲಿಸಿದ ಕೈ ನಾಯಕ

ಕಾಂಗ್ರೆಸ್​ ನಾಯಕರೊಬ್ಬರು ಮುಂದಿನ ವಿಧಾನಸಭೆ ಚುನಾಚವಣೆ ಟಿಕೇಟ್​ಗಾಗಿ ಬ್ಯಾಂಡು, ಜಾನಪದ ಕಲಾ ತಂಡಗಳು, ತಮಟೆ ವಾದ್ಯಗಳೊಂದಿಗೆ ಬಂದು ಅರ್ಜಿ ಸಲ್ಲಿಸಿ ಗಮನಸೆಳೆದಿದ್ದಾರೆ.

ನಾಮಪತ್ರ ಸಲ್ಲಿಸುವ ಮಾದರಿಯಲ್ಲೇ ಬ್ಯಾಂಡು, ಜಾನಪದ ಕಲಾ ತಂಡ. ತಮಟೆ ವಾದ್ಯಗಳೊಂದಿಗೆ ಬಂದು ಟಿಕೇಟ್​ಗಾಗಿ ಅರ್ಜಿ ಸಲ್ಲಿಸಿದ ಕೈ ನಾಯಕ
ಟಿಕೇಟ್​ಗಾಗಿ ಶಕ್ತಿ ಪ್ರದರ್ಶನ ಮಾಡಿದ ಕೈ ನಾಯಕ
TV9 Web
| Edited By: |

Updated on: Nov 20, 2022 | 3:04 PM

Share

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ  (Karnataka Assembly Election 2023) ಇನ್ನೂ ಐದಾರು ತಿಂಗಳು ಇರುವಾಗಲೇ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅದರಲ್ಲೂ ಕಾಂಗ್ರೆಸ್​ನಲ್ಲಿ ಟಿಕೇಟ್​​ ಫೈಟ್ (Congress Ticket Fight)  ಜೋರಾಗಿದೆ. ಟಿಕೆಟ್​ಗಾಗಿ ಅರ್ಜಿ ಸಲ್ಲಿಸಲು ನಾಳೆ(ನ.21) ಕೊನೆ ದಿನವಾಗಿದ್ದರಿಂದ ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಮುಗಿಬಿದ್ದಿದ್ದಾರೆ. ಇನ್ನು ಇಲ್ಲೋರ್ವ ಟಿಕೇಟ್ ಆಕಾಂಕ್ಷಿ ಚುನಾವಣೆಗೆ ನಾಮಪತ್ರ ಸಲ್ಲಿಸುವ ಮಾದರಿಯಲ್ಲೇ ಕೆಪಿಸಿಸಿಗೆ ಬಂದು ಅರ್ಜಿ ಸಲ್ಲಿಸಿ ಗಮನಸೆಳೆದಿದ್ದಾರೆ.

ಮೂರು ಸರ್ವೆಗಳಲ್ಲಿ ಕಾಂಗ್ರೆಸ್ ಮುಂದೆ: ಬಿಜೆಪಿಗೆ ಎಷ್ಟು ಸ್ಥಾನ? ಮಾಹಿತಿ ಬಿಚ್ಚಿಟ್ಟ ಕೆಪಿಸಿಸಿ ಕಾರ್ಯಾಧ್ಯಕ್ಷ

ಹೌದು….ಧನಂಜಯ್. ಜಿ ಅವರು ಸುಮಾರು 300 ಬಸ್ ಗಳಲ್ಲಿ ಬೆಂಬಲಿಗರನ್ನು ಬಂದು ದಾಸರಹಳ್ಳಿ ಕ್ಷೇತ್ರದ ಟಿಕೇಟ್​ಗಾಗಿ ಇಂದು(ನ.20) ಅರ್ಜಿ ಸಲ್ಲಿಸಿದರು. ಬ್ಯಾಂಡು, ಜಾನಪದ ಕಲಾ ತಂಡಗಳು, ತಮಟೆ ವಾದ್ಯಗಳೊಂದಿಗೆ ಬಂದು ಅರ್ಜಿ ಸಲ್ಲಿಸುವ ಮೂಲಕ ಶಕ್ತಿ ಪ್ರದರ್ಶನ ಮಾಡಿದರು. ಚುನಾವಣೆಗೆ ನಾಮಪತ್ರ ಸಲ್ಲಿಸುವ ಮಾದರಿಯಲ್ಲೇ ಕೆಪಿಸಿಸಿಗೆ ಬಂದು ಟಿಕೆಟ್​ಗಾಗಿ ಅರ್ಜಿ ಸಲ್ಲಿಸಿರುವ ರೀತಿ ಕಂಡು ಕಾಂಗ್ರೆಸ್ ನಾಯಕರು ದಂಗಾದರು.

ಅಲ್ಲದೇ ಸುಮಾರು 300 ಬಸ್ ಗಳಲ್ಲಿ ಬೆಂಬಲಿಗರನ್ನು ಕೆಪಿಸಿಸಿ ಕಚೇರಿಗೆ ಕರೆತಂದಿರುವುದರಿಂದ ಕೆಪಿಸಿಸಿ ಕಂಟೋನ್ಮೆಂಟ್ ಸುತ್ತಮುತ್ತ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ಧನಂಜಯ್ ಬೆಂಬಲಿಗರನ್ನು ಕಂಟ್ರೋಲ್​ ಜೊತೆ ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರು ಸುಸ್ತಾದರು.

ದಾಸರಹಳ್ಳಿಯಿಂದ ಟಿಕೇಟ್ ಭರವಸೆ ಸಿಕ್ಕಿರುವ ಹಿನ್ನೆಲೆಯಲ್ಲಿ ಧನಂಜಯ್ ಅವರು ಭರ್ಜರಿ ಶಕ್ತಿ ಪ್ರದರ್ಶನ ಮಾಡಿದ್ದಾರೆ ಎನ್ನಲಾಗಿದೆ. ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರ ಗನ್‌ ಮ್ಯಾನ್‌ ಆಗಿದ್ದ ಮಂಜುನಾಥ್‌ 2018ರಲ್ಲಿ ಜೆಡಿಎಸ್‌ನಿಂದ ಕಣಕ್ಕಿಳಿದು ಗೆಲುವು ಸಾಧಿಸಿದ್ದಾರೆ.  ಈ ಮೂಲಕ ಈ ಹಿಂದೆ 2 ಬಾರಿ ಬಿಜೆಪಿಯಿಂದ ಗೆದ್ದಿದ್ದ ಮುನಿರಾಜು ಅವರ ಹ್ಯಾಟ್ರಿಕ್ ಗೆಲುವಿನ ಕನಸನ್ನು ಭಗ್ನಗೊಳಿಸಿದ್ದರು. ಈ ಬಾರಿ ಮಂಜುನಾಥ್ ವಿರುದ್ಧ ಕಾಂಗ್ರೆಸ್​ನಿಂದ ಕಣಕ್ಕಳಿಯಲು ಧನಂಜಯ್ ಅವರು ಭರ್ಜರಿ ಶಕ್ತಿ ಪ್ರದರ್ಶನದೊಂದಿಗೆ ಟಿಕೇಟ್​ಗಾಗಿ ಅರ್ಜಿ ಸಲ್ಲಿಸಿದ್ದು, ಹೈಕಮಾಂಡ್​ ಮಣೆ ಹಾಕುತ್ತಾ ಎನ್ನುವುದನ್ನು ಕಾದುನೋಡಬೇಕಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ