AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಮಪತ್ರ ಸಲ್ಲಿಸುವ ಮಾದರಿಯಲ್ಲೇ ಬ್ಯಾಂಡು, ಜಾನಪದ ಕಲಾ ತಂಡ. ತಮಟೆ ವಾದ್ಯಗಳೊಂದಿಗೆ ಬಂದು ಟಿಕೇಟ್​ಗಾಗಿ ಅರ್ಜಿ ಸಲ್ಲಿಸಿದ ಕೈ ನಾಯಕ

ಕಾಂಗ್ರೆಸ್​ ನಾಯಕರೊಬ್ಬರು ಮುಂದಿನ ವಿಧಾನಸಭೆ ಚುನಾಚವಣೆ ಟಿಕೇಟ್​ಗಾಗಿ ಬ್ಯಾಂಡು, ಜಾನಪದ ಕಲಾ ತಂಡಗಳು, ತಮಟೆ ವಾದ್ಯಗಳೊಂದಿಗೆ ಬಂದು ಅರ್ಜಿ ಸಲ್ಲಿಸಿ ಗಮನಸೆಳೆದಿದ್ದಾರೆ.

ನಾಮಪತ್ರ ಸಲ್ಲಿಸುವ ಮಾದರಿಯಲ್ಲೇ ಬ್ಯಾಂಡು, ಜಾನಪದ ಕಲಾ ತಂಡ. ತಮಟೆ ವಾದ್ಯಗಳೊಂದಿಗೆ ಬಂದು ಟಿಕೇಟ್​ಗಾಗಿ ಅರ್ಜಿ ಸಲ್ಲಿಸಿದ ಕೈ ನಾಯಕ
ಟಿಕೇಟ್​ಗಾಗಿ ಶಕ್ತಿ ಪ್ರದರ್ಶನ ಮಾಡಿದ ಕೈ ನಾಯಕ
TV9 Web
| Edited By: |

Updated on: Nov 20, 2022 | 3:04 PM

Share

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ  (Karnataka Assembly Election 2023) ಇನ್ನೂ ಐದಾರು ತಿಂಗಳು ಇರುವಾಗಲೇ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅದರಲ್ಲೂ ಕಾಂಗ್ರೆಸ್​ನಲ್ಲಿ ಟಿಕೇಟ್​​ ಫೈಟ್ (Congress Ticket Fight)  ಜೋರಾಗಿದೆ. ಟಿಕೆಟ್​ಗಾಗಿ ಅರ್ಜಿ ಸಲ್ಲಿಸಲು ನಾಳೆ(ನ.21) ಕೊನೆ ದಿನವಾಗಿದ್ದರಿಂದ ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಮುಗಿಬಿದ್ದಿದ್ದಾರೆ. ಇನ್ನು ಇಲ್ಲೋರ್ವ ಟಿಕೇಟ್ ಆಕಾಂಕ್ಷಿ ಚುನಾವಣೆಗೆ ನಾಮಪತ್ರ ಸಲ್ಲಿಸುವ ಮಾದರಿಯಲ್ಲೇ ಕೆಪಿಸಿಸಿಗೆ ಬಂದು ಅರ್ಜಿ ಸಲ್ಲಿಸಿ ಗಮನಸೆಳೆದಿದ್ದಾರೆ.

ಮೂರು ಸರ್ವೆಗಳಲ್ಲಿ ಕಾಂಗ್ರೆಸ್ ಮುಂದೆ: ಬಿಜೆಪಿಗೆ ಎಷ್ಟು ಸ್ಥಾನ? ಮಾಹಿತಿ ಬಿಚ್ಚಿಟ್ಟ ಕೆಪಿಸಿಸಿ ಕಾರ್ಯಾಧ್ಯಕ್ಷ

ಹೌದು….ಧನಂಜಯ್. ಜಿ ಅವರು ಸುಮಾರು 300 ಬಸ್ ಗಳಲ್ಲಿ ಬೆಂಬಲಿಗರನ್ನು ಬಂದು ದಾಸರಹಳ್ಳಿ ಕ್ಷೇತ್ರದ ಟಿಕೇಟ್​ಗಾಗಿ ಇಂದು(ನ.20) ಅರ್ಜಿ ಸಲ್ಲಿಸಿದರು. ಬ್ಯಾಂಡು, ಜಾನಪದ ಕಲಾ ತಂಡಗಳು, ತಮಟೆ ವಾದ್ಯಗಳೊಂದಿಗೆ ಬಂದು ಅರ್ಜಿ ಸಲ್ಲಿಸುವ ಮೂಲಕ ಶಕ್ತಿ ಪ್ರದರ್ಶನ ಮಾಡಿದರು. ಚುನಾವಣೆಗೆ ನಾಮಪತ್ರ ಸಲ್ಲಿಸುವ ಮಾದರಿಯಲ್ಲೇ ಕೆಪಿಸಿಸಿಗೆ ಬಂದು ಟಿಕೆಟ್​ಗಾಗಿ ಅರ್ಜಿ ಸಲ್ಲಿಸಿರುವ ರೀತಿ ಕಂಡು ಕಾಂಗ್ರೆಸ್ ನಾಯಕರು ದಂಗಾದರು.

ಅಲ್ಲದೇ ಸುಮಾರು 300 ಬಸ್ ಗಳಲ್ಲಿ ಬೆಂಬಲಿಗರನ್ನು ಕೆಪಿಸಿಸಿ ಕಚೇರಿಗೆ ಕರೆತಂದಿರುವುದರಿಂದ ಕೆಪಿಸಿಸಿ ಕಂಟೋನ್ಮೆಂಟ್ ಸುತ್ತಮುತ್ತ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ಧನಂಜಯ್ ಬೆಂಬಲಿಗರನ್ನು ಕಂಟ್ರೋಲ್​ ಜೊತೆ ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರು ಸುಸ್ತಾದರು.

ದಾಸರಹಳ್ಳಿಯಿಂದ ಟಿಕೇಟ್ ಭರವಸೆ ಸಿಕ್ಕಿರುವ ಹಿನ್ನೆಲೆಯಲ್ಲಿ ಧನಂಜಯ್ ಅವರು ಭರ್ಜರಿ ಶಕ್ತಿ ಪ್ರದರ್ಶನ ಮಾಡಿದ್ದಾರೆ ಎನ್ನಲಾಗಿದೆ. ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರ ಗನ್‌ ಮ್ಯಾನ್‌ ಆಗಿದ್ದ ಮಂಜುನಾಥ್‌ 2018ರಲ್ಲಿ ಜೆಡಿಎಸ್‌ನಿಂದ ಕಣಕ್ಕಿಳಿದು ಗೆಲುವು ಸಾಧಿಸಿದ್ದಾರೆ.  ಈ ಮೂಲಕ ಈ ಹಿಂದೆ 2 ಬಾರಿ ಬಿಜೆಪಿಯಿಂದ ಗೆದ್ದಿದ್ದ ಮುನಿರಾಜು ಅವರ ಹ್ಯಾಟ್ರಿಕ್ ಗೆಲುವಿನ ಕನಸನ್ನು ಭಗ್ನಗೊಳಿಸಿದ್ದರು. ಈ ಬಾರಿ ಮಂಜುನಾಥ್ ವಿರುದ್ಧ ಕಾಂಗ್ರೆಸ್​ನಿಂದ ಕಣಕ್ಕಳಿಯಲು ಧನಂಜಯ್ ಅವರು ಭರ್ಜರಿ ಶಕ್ತಿ ಪ್ರದರ್ಶನದೊಂದಿಗೆ ಟಿಕೇಟ್​ಗಾಗಿ ಅರ್ಜಿ ಸಲ್ಲಿಸಿದ್ದು, ಹೈಕಮಾಂಡ್​ ಮಣೆ ಹಾಕುತ್ತಾ ಎನ್ನುವುದನ್ನು ಕಾದುನೋಡಬೇಕಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ