AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಲಿತರು, ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷದ ಫೌಂಡೇಷನ್: ಜಿ ಪರಮೇಶ್ವರ್ ಹೇಳಿಕೆ

G Parameshwar: ಯಾರು ಬಡವರು ಇರ್ತಾರೊ ಅವರನ್ನ ಮೇಲೆ ತರಲು ಕಾಂಗ್ರೆಸ್ ಪಕ್ಷ ಕೆಲಸ ಮಾಡಿದೆ. ಕಾಂಗ್ರೆಸ್​ನಲ್ಲಿ ಯಾರನ್ನ ಕೂಡ ಕಡೆಗಣಿಸಿಲ್ಲ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಹೈಕಮಾಂಡ್ ಸಿಎಂ ಬಗ್ಗೆ ನಿರ್ಧಾರ ಮಾಡುತ್ತಾರೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.

ದಲಿತರು, ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷದ ಫೌಂಡೇಷನ್: ಜಿ ಪರಮೇಶ್ವರ್ ಹೇಳಿಕೆ
ಡಾ. ಜಿ. ಪರಮೇಶ್ವರ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Oct 16, 2021 | 3:37 PM

Share

ತುಮಕೂರು: ದಲಿತರು ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷದ ಫೌಂಡೇಷನ್. ಸಿ.ಎಂ. ಇಬ್ರಾಹಿಂ ಈ ಕ್ಷಣದವರೆಗೂ ನಮ್ಮ ಕಾಂಗ್ರೆಸ್​ನಲ್ಲೇ ಇದ್ದಾರೆ. ಮುಂದೆ ಏನು ಅಂತಾ ಗೊತ್ತಿಲ್ಲ ಎಂದು ತುಮಕೂರಿನಲ್ಲಿ ಮಾಜಿ ಡಿಸಿಎಂ ಹಾಗೂ ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಅಧಿವೇಶನ ಸಂದರ್ಭದಲ್ಲಿ ಅವರ ಹತ್ತಿರ ನಾನು ಮಾತನಾಡಿದೆ, ಪಕ್ಷ ಬಿಡುವ ಬಗ್ಗೆ ಹೇಳಿಲ್ಲ ಎಂದು ಹೇಳಿದ್ದಾರೆ.

ದಲಿತ ಹಾಗೂ ಮುಸ್ಲಿಂ ಮುಖ್ಯಮಂತ್ರಿ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಯಾವತ್ತೂ ಕೂಡ ದಲಿತರು ಹಾಗೂ ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷದ ಫೌಂಡೇಷನ್. ಎಲ್ಲಾ ಸಮುದಾಯದ ಬಡವರಿಗೆ ಕಾಂಗ್ರೆಸ್ ಪಕ್ಷ ಗುರುತಿಸಿಕೊಂಡಿದೆ. ಅವರು ಕೂಡ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಯಾರು ಬಡವರು ಇರ್ತಾರೊ ಅವರನ್ನ ಮೇಲೆ ತರಲು ಕಾಂಗ್ರೆಸ್ ಪಕ್ಷ ಕೆಲಸ ಮಾಡಿದೆ. ಕಾಂಗ್ರೆಸ್​ನಲ್ಲಿ ಯಾರನ್ನ ಕೂಡ ಕಡೆಗಣಿಸಿಲ್ಲ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಹೈಕಮಾಂಡ್ ಸಿಎಂ ಬಗ್ಗೆ ನಿರ್ಧಾರ ಮಾಡುತ್ತಾರೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಬಗ್ಗೆ ಮಾತನಾಡಿದ್ದ ಸಲೀಂ ಹಾಗೂ ವಿ.ಎಸ್. ಉಗ್ರಪಗೆ ಶಿಸ್ತು ಕ್ರಮದಲ್ಲಿ ತಾರತಮ್ಯ ವಿಚಾರವಾಗಿ ಕೂಡ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಒಂದು ವ್ಯವಸ್ಥೆ ಇದೆ, ಶಿಸ್ತು ಕ್ರಮದ ಸಮಿತಿಯಿದೆ. ಮಾಜಿ ಸಚಿವ, ರಾಜ್ಯ ಸಭೆ ಸದಸ್ಯ ರೆಹಮಾನ್ ಖಾನ್ ಅದರ ಅಧ್ಯಕ್ಷರು ಹಾಗೂ ಕೆಲ ಸದಸ್ಯರು ಇದಾರೆ. ಆ ಸಮಿತಿ ತಿರ್ಮಾನವೇ ಅಂತಿಮ ಆಗಿದೆ. ಅವರ ತೀರ್ಮಾನದಂತೆ ಸಲೀಂಗೆ ನೋಟಿಸ್ ನೀಡಿ ಆರು ವರ್ಷ ಉಚ್ಚಾಟನೆ ಮಾಡಲಾಗಿದೆ. ಉಗ್ರಪ್ಪ ಸಂಸದರಾಗಿದ್ದವರು. ಹೀಗಾಗಿ ಅವರ ವಿರುದ್ಧ ಕ್ರಮಕೈಗೊಳ್ಳಲು ಎಐಸಿಸಿಯಿಂದ ಅನುಮತಿ ಬೇಕು. ಹೀಗಾಗಿ ಅವರಿಗೆ ನೋಟಿಸ್ ನೀಡಿದ್ದಾರೆ ಅಷ್ಟೇ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿಗೆ RSS​ ಗಂಧಗಾಳಿ ಗೊತ್ತಿಲ್ಲ; ಯಾವುದೋ ಒಂದು ಪುಸ್ತಕ ಓದಿ ಅದೇ ಸತ್ಯ ಅಂತಾರೆ: ಆರ್ ಅಶೋಕ್

ಇದನ್ನೂ ಓದಿ: ಮಹಾತ್ಮ ಗಾಂಧಿ ಕಂಡ ರಾಮರಾಜ್ಯ ಮಾಡಬೇಕು; ಗ್ರಾಮಸ್ವರಾಜ್ಯ ನಮ್ಮ ಸರ್ಕಾರದ ಸಂಕಲ್ಪ: ಬಸವರಾಜ ಬೊಮ್ಮಾಯಿ

Follow Us
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ