AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತವರು ಕ್ಷೇತ್ರದಲ್ಲೇ AICC ಅಧ್ಯಕ್ಷರಿಗೆ ಶಾಖ್: ಮಲ್ಲಿಕಾರ್ಜುನ್ ಖರ್ಗೆ ಆಪ್ತ ಬಿಜೆಪಿ ಸೇರ್ಪಡೆ

ಲೋಕಸಭಾ ಚುನಾವಣೆಗೆ 3-4 ತಿಂಗಳು ಬಾಕಿ ಉಳಿದಿವೆ. ಈ ಹಿನ್ನೆಲೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳು ತಯಾರಿ ಜೋರಾಗಿಯೇ ನಡೆಸಿವೆ. ಬಿಜೆಪಿಯನ್ನು ಈ ಬಾರಿ ಸೋಲಿಸಲು ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳು ಸಂಚು ರೂಪಿಸುತ್ತಿವೆ. ಆದರೆ ಈ ಮಧ್ಯೆ ಇಂಡಿಯಾ ಮೈತ್ರಿಕೂಟದ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ್ ಖರ್ಗೆ ಅವರ ಅತ್ಯಾಪ್ತ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ತವರು ಕ್ಷೇತ್ರದಲ್ಲೇ AICC ಅಧ್ಯಕ್ಷರಿಗೆ ಶಾಖ್: ಮಲ್ಲಿಕಾರ್ಜುನ್ ಖರ್ಗೆ ಆಪ್ತ ಬಿಜೆಪಿ ಸೇರ್ಪಡೆ
ಮಲ್ಲಿಕಾರ್ಜುನ್​ ಖರ್ಗೆ
TV9 Web
| Edited By: ವಿವೇಕ ಬಿರಾದಾರ|

Updated on:Jan 24, 2024 | 1:02 PM

Share

ಬೆಂಗಳೂರು, ಜನವರಿ 24: ಲೋಕಸಭೆ ಚುನಾವಣೆಗೆ (Lok Sabha Election) ದೇಶದಲ್ಲಿ ಅಖಾಡ ಸಿದ್ದವಾಗುತ್ತಿದೆ. ಈ ಬಾರಿ ಶತಾಯಗತಾಯ ಬಿಜೆಪಿಯನ್ನು (BJP) ಹಣಿಯಲು ವಿರೋಧ ಪಕ್ಷಗಳು ಒಂದಾಗಿ ಇಂಡಿಯಾ ಮೈತ್ರಿಕೂಟ ರಚಿಸಿಕೊಂಡಿವೆ. ಈ ಮೈತ್ರಿಕೂಟದ ಅಧ್ಯಕ್ಷರನ್ನಾಗಿ ಮಲ್ಲಿಕಾರ್ಜುನ ಖರ್ಗೆಯವರನ್ನು (Mallikarjun Kharge) ಆಯ್ಕೆ ಮಾಡಲಾಗಿದೆ. ಆದರೆ ಮಲ್ಲಿಕಾರ್ಜುನ್​ ಖರ್ಗೆ ಅವರಿಗೆ ತವರು ಕ್ಷೇತ್ರದಲ್ಲೇ ಬಿಗ್​​ ಶಾಕ್ ನೀಡಲಾಗಿದೆ. ​ಅದು ಮಲ್ಲಿಕಾರ್ಜುನ್ ಖರ್ಗೆ ಅವರ ಆಪ್ತ ಕಾಂಗ್ರೆಸ್ (Congress)​ ತೊರದು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಹೌದು ಮಲ್ಲಿಕಾರ್ಜುನ ಖರ್ಗೆ ಅವರ ಅತ್ಯಾಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಿವೃತ್ತ ಕೆಎಎಸ್ ಅಧಿಕಾರಿ ರುದ್ರಯ್ಯ ಅವರು ಬಿಜೆಪಿ ಬಾವುಟ ಹಿಡಿದು ಕೇಸರಿ ಮನೆಯನ್ನು ಪ್ರವೇಶಿಸಿದ್ದಾರೆ. ಇಂದು (ಬುಧವಾರ) ಬೆಳಿಗ್ಗೆ 11:30ಕ್ಕೆ ಮಲ್ಲೇಶ್ವರಂನಲ್ಲಿರುವ ಜಗನ್ನಾಥ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ವೇಳೆ ಸಂಸದ ಎಸ್. ಮುನಿಸ್ವಾಮಿ, ಶಾಸಕ ಡಾ. ಶಿವರಾಜ್ ಪಾಟೀಲ್ ಮತ್ತು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಉಪಸ್ಥಿತರಿದ್ದರು.

ಇದನ್ನೂ ಓದಿ: Lok Sabha Election: ಕೇಂದ್ರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸಲು 40 ಸಾವಿರ ಕಾರ್ಯಕರ್ತರನ್ನು ನಿಯೋಜಿಸಲಿದೆ ಬಿಜೆಪಿ

ಯಾರು ಈ ರುದ್ರಯ್ಯ

ದಲಿತ ಸಮುದಾಯದ ನಾಯಕರಾಗಿರುವ ರುದ್ರಯ್ಯ ಅವರು ನೀರಾವರಿ ಇಲಾಖೆಯಲ್ಲಿ ಹಿರಿಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ನಿವೃತ್ತಿ ಬಳಿಕ ಕಾಂಗ್ರೆಸ್​ ಸೇರ್ಪಡೆಯಾಗಿದ್ದರು. 2023ರ ವಿಧಾನಸಭಾ ಚುನಾವಣೆ ವೇಳೆ ಲಿಂಗಸೂಗೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಅಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕಾರಣ ಪಕ್ಷೇತರರಾಗಿ ಸ್ಫರ್ದಿಸಿದ್ದರು. ಇನ್ನು ತಮಗೆ ಟಿಕೆಟ್​ ತಪ್ಪಲು ಮಲ್ಲಿಕಾರ್ಜುನ್​ ಖರ್ಗೆ ಅವರೇ ಕಾರಣ ಎಂದು ಕಾಂಗ್ರೆಸ್​ ತೊರೆಯಲು ನಿರ್ಧರಿಸಿದ್ದಾರೆ ಮಾತುಗಳು ಕೇಳಿಬಂದಿದ್ದವು. ಆದರೆ ಯಾವ ಪಕ್ಷಕ್ಕೆ ಸೇರುತ್ತಾರೆ ಎಂಬುವುದು ಖಚಿತಪಡಿಸಿರಲಿಲ್ಲ. ಇದೀಗ ಕಮಲಪಾಳಯ ಸೇರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:00 pm, Wed, 24 January 24

Follow Us
TV9 Web
TV9 Web

TV9 Kannada

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು