AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಇತಿಹಾಸದಲ್ಲಿ ಅತ್ಯಂತ ದುರ್ಬಲ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು: ಆರ್ ಧ್ರುವನಾರಾಯಣ

ಸರ್ಕಾರ ಕಿರಿಯ ವೈದ್ಯರಿಗೆ ಗೌರವಧನ ನೀಡದ ಆರೋಪದಲ್ಲಿ ಕೊರೊನಾ ವೇಳೆ ಕೆಲಸ ಮಾಡಿದ ಗೌರವಧನಕ್ಕೆ ಒತ್ತಾಯ ಕೇಳಿಬಂದಿದೆ. ರಾಜ್ಯ ಸರ್ಕಾರದ ವಿರುದ್ಧ ಕಿರಿಯ ವೈದ್ಯರಿಂದ ಪ್ರತಿಭಟನೆ ನಡೆಸಲಾಗುತ್ತಿದೆ.

ಬಿಜೆಪಿ ಇತಿಹಾಸದಲ್ಲಿ ಅತ್ಯಂತ ದುರ್ಬಲ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು: ಆರ್ ಧ್ರುವನಾರಾಯಣ
ನಳಿನ್ ಕುಮಾರ್ ಕಟೀಲು, ಆರ್ ಧ್ರುವನಾರಾಯಣ
Follow us
TV9 Web
| Updated By: ganapathi bhat

Updated on:Nov 29, 2021 | 5:01 PM

ಚಾಮರಾಜನಗರ: ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಪಿಟೀಲ್ ಬಾರಿಸಲು ಲಾಯಕ್​ ಎಂದು ನಳಿನ್ ಕುಮಾರ್ ಕಟೀಲು ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಇತಿಹಾಸದಲ್ಲಿ ಅತ್ಯಂತ ದುರ್ಬಲ ರಾಜ್ಯಾಧ್ಯಕ್ಷ ಕಟೀಲು. ಬಿಜೆಪಿಯ ದುರ್ಬಲ ರಾಜ್ಯಾಧ್ಯಕ್ಷ ಅಂದ್ರೆ ಕಟೀಲು ಒಬ್ಬನೇ ಎಂದು ಧ್ರುವನಾರಾಯಣ ಹೇಳಿಕೆ ನೀಡಿದ್ದಾರೆ. ದೇಶಕ್ಕಾಗಿ ಪ್ರಾಣಕೊಟ್ಟ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಇವರ ಬಗ್ಗೆ ಕಟೀಲು ಬಹಳ ಹಗುರವಾಗಿ ಮಾತನಾಡುತ್ತಾರೆ. ಪಂಜಾಬ್ ಖಲಿಸ್ತಾನ್ ಆಗುವುದನ್ನು ತಪ್ಪಿಸಲು ಹೋಗಿ ಹತ್ಯೆ ಆಗಿತ್ತು. ತಮ್ಮ ಅಂಗರಕ್ಷಕರಿಂದಲೇ ಇಂದಿರಾ ಗಾಂಧಿ ಕೊಲೆಯಾದರು. ಶ್ರೀಲಂಕಾದಲ್ಲಿರುವ ತಮಿಳರ ರಕ್ಷಣೆಗೆ ಮುಂದಾಗಿ, ಪ್ರಧಾನಿಯಾಗಿದ್ದಾಗಲೇ ರಾಜೀವ್​ ಗಾಂಧಿ ಬಲಿಯಾದರು. ಇತಿಹಾಸ ಗೊತ್ತಿಲ್ಲದೆ ಬಾಯಿಗೆ ಬಂದಂತೆ ಮಾತಾಡುತ್ತಿದ್ದಾರೆ ಎಂದು ಚಾಮರಾಜನಗರದಲ್ಲಿ ಅವರು ಹೇಳಿಕೆ ನೀಡಿದ್ದಾರೆ.

ಗೌರವಧನ ನೀಡುವಂತೆ ಕಿರಿಯ ವೈದ್ಯರ ಧರಣಿ ವಿಚಾರವಾಗಿ ಧರಣಿ ಸ್ಥಳಕ್ಕೆ ಕಾಂಗ್ರೆಸ್ ನಾಯಕ ಆರ್. ಧ್ರುವನಾರಾಯಣ ಭೇಟಿ ನೀಡಿದ್ದಾರೆ. ಚಾಮರಾಜನಗರದ ಯಡಪುರ ಬಳಿಯ ಸಿಮ್ಸ್​ ಆಸ್ಪತ್ರೆಗೆ ಬೀಗ ಹಾಕಿ ಧರಣಿ ನಡೆಸುತ್ತಿದ್ದಾರೆ. ಧರಣಿ ನಡೆಸುತ್ತಿರುವ ಕಿರಿಯ ವೈದ್ಯರಿಗೆ ಆರ್​. ಧ್ರುವನಾರಾಯಣ ಬೆಂಬಲ ನೀಡಿದ್ದಾರೆ. ಕೊವಿಡ್ ವೇಳೆ ಕೆಲಸ ಮಾಡಿದ್ದ ವೈದ್ಯರಿಗೆ ಗೌರವಧನ ನೀಡುವುದಾಗಿ ಹೇಳಲಾಗಿತ್ತು. 6 ತಿಂಗಳ ಗೌರವಧನ ನೀಡುವುದಾಗಿ ಆದೇಶ ಮಾಡಿತ್ತು. ಆದರೆ ಈವರೆಗೆ ಹಣ ನೀಡದಿರುವುದು ಸೂಕ್ತ ಕ್ರಮವಲ್ಲ. ತಕ್ಷಣ ಹಣ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ. ಸರ್ಕಾರಕ್ಕೆ ಕೆಪಿಸಿಸಿ ಕಾಱಧ್ಯಕ್ಷ ಧ್ರುವನಾರಾಯಣ ಆಗ್ರಹಿಸಿದ್ದಾರೆ.

ಸರ್ಕಾರ ಕಿರಿಯ ವೈದ್ಯರಿಗೆ ಗೌರವಧನ ನೀಡದ ಆರೋಪದಲ್ಲಿ ಕೊರೊನಾ ವೇಳೆ ಕೆಲಸ ಮಾಡಿದ ಗೌರವಧನಕ್ಕೆ ಒತ್ತಾಯ ಕೇಳಿಬಂದಿದೆ. ರಾಜ್ಯ ಸರ್ಕಾರದ ವಿರುದ್ಧ ಕಿರಿಯ ವೈದ್ಯರಿಂದ ಪ್ರತಿಭಟನೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ನಳಿನ್ ಕುಮಾರ್ ಕಟೀಲು ಓರ್ವ ಭಯೋತ್ಪಾದಕ: ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ

ಇದನ್ನೂ ಓದಿ: ಕಾಂಗ್ರೆಸ್​ನ​ವರ ಅವಧಿಯಲ್ಲಿ ಭಯೋತ್ಪಾದನೆ ಆರಂಭವಾಗಿದೆ: ನಳಿನ್ ಕುಮಾರ್ ಕಟೀಲ್

Published On - 5:01 pm, Mon, 29 November 21

ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ