AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ

4 ವರ್ಷದ ಗುತ್ತಿಗೆ ನಂತರ ನಿವೃತ್ತಿಹೊಂದುವ ಸಾವಿರದಷ್ಟು ಅಗ್ನಿವೀರರ ಭವಿಷ್ಯವೇನು? ಪ್ರಧಾನಿ ಮೋದಿಯವರ ಪ್ರಯೋಗಾಲಯದಲ್ಲಿನ ಪರೀಕ್ಷೆಗಳಿಂದಾಗಿ ದೇಶದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ ಎಂದು ರಾಹುಲ್ ಗಾಂಧಿ...

ಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
TV9 Web
| Edited By: |

Updated on:Jul 24, 2022 | 2:57 PM

Share

ದೆಹಲಿ: ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯ (Agnipath scheme) ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರನ್ನು(PM Narendra Modi) ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi), ಪ್ರಧಾನಿಯವರ ಪ್ರಯೋಗಾಲಯದಲ್ಲಿನ ನೂತನ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವ ಜನಾಂಗದ ಭವಿಷ್ಯ ಅಪಾಯದಲ್ಲಿದೆ ಎಂದು ಹೇಳಿದ್ದಾರೆ. ಪ್ರತಿವರ್ಷ 60,000 ಯೋಧರು ನಿವೃತ್ತರಾಗುತ್ತಾರೆ. ಇವರ ಪೈಕಿ ಕೇವಲ 3,000 ಯೋಧರಿಗೆ ಸರ್ಕಾರಿ ಕೆಲಸ ಸಿಗುತ್ತದೆ. 4 ವರ್ಷದ ಗುತ್ತಿಗೆ ನಂತರ ನಿವೃತ್ತಿಹೊಂದುವ ಸಾವಿರದಷ್ಟು ಅಗ್ನಿವೀರರ ಭವಿಷ್ಯವೇನು? ಪ್ರಧಾನಿ ಮೋದಿಯವರ ಪ್ರಯೋಗಾಲಯದಲ್ಲಿನ ಪರೀಕ್ಷೆಗಳಿಂದಾಗಿ ದೇಶದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.  ಅಗ್ನಿಪಥ್ ಯೋಜನೆಯಡಿಯಲ್ಲಿ ಹದಿನೇಳೂವರೆ ಮತ್ತು 21 ವರ್ಷಗಳ ನಡುವಿನ ಯುವಕನ್ನು ನಾಲ್ಕು ವರ್ಷಗಳ ಗುತ್ತಿಗೆ ಆಧಾರದಲ್ಲಿ ಸೇನೆಗೆ ನಿಯೋಜನೆ ಮಾಡಲಾಗುತ್ತದೆ. ಈ ಪೈಕಿ ಶೇ 25 ಮಂದಿಯನ್ನು ಆಮೇಲೆ ಸೇನೆಗೆ ನಿಯೋಜನೆ ಮಾಡಲಾಗುತ್ತದೆ.

ಜೂನ್ 14ರಂದು ಈ ಯೋಜನೆಯನ್ನು ಸರ್ಕಾರ ಘೋಷಿಸಿದ್ದು, ಪ್ರಸ್ತುತ ಯೋಜನೆ ಖಂಡಿಸಿ ದೇಶದಾದ್ಯಂತ ನಡೆದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದವು. ಆನಂತರ ಜೂನ್ 16ರಂದು ಸರ್ಕಾರ ಅಗ್ನವೀರರ ಗರಿಷ್ಠ ವಯೋಮಿತಿ 21ರಿಂದ 23ಕ್ಕೆ ಏರಿಸಿತು.

ಕಾಂಗ್ರೆಸ್ ಅಗ್ನಿಪಥ್ ಯೋಜನೆ ಬಗ್ಗೆ ಪ್ರತಿಭಟನೆಯನ್ನು ವ್ಯಕ್ತಪಡಿಸುತ್ತಲೇ ಬಂದಿದೆ, ಶುಕ್ರವಾರ ವಿಪಕ್ಷ ಸದಸ್ಯರಾದ ವಿಕೆ ವೇಣುಗೋಪಾಲ್ ಮತ್ತು ಉತ್ತಮ್ ಕುಮಾರ್ ರೆಡ್ಡಿ ಶುಕ್ರವಾರ ನಡೆದ ರಕ್ಷಣಾ ಸಚಿವಾಲಯದ ಸಂಸದೀಯ ಸಮಿತಿ ಸಭೆಯಲ್ಲಿ ಅಗ್ನಿಪಥ್ ಯೋಜನೆ ಬಗ್ಗೆ ಚರ್ಚೆ ನಡೆಯದೇ ಇರುವುದನ್ನು ವಿರೋಧಿಸಿ ಸಭೆ ಬಹಿಷ್ಕರಿಸಿದ್ದಾರೆ.

ಕಾಂಗ್ರೆಸ್ ಸದಸ್ಯರು ಮತ್ತು ಬಿಎಸ್ ಪಿ ಸದಸ್ಯರು ಸಮಿತಿ ಅಧ್ಯಕ್ಷ ಜಾವುಲ್ ಓರಂ ಅವರಲ್ಲಿ ಅಗ್ನಿಪಥ್ ಯೋಜನೆ ಬಗ್ಗೆ ಚರ್ಚಿಸುವಂತೆ ಹೇಳಿದ್ದರೂ ಅವರು ಒಪ್ಪಲಿಲ್ಲ.

Published On - 2:55 pm, Sun, 24 July 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ