AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ

4 ವರ್ಷದ ಗುತ್ತಿಗೆ ನಂತರ ನಿವೃತ್ತಿಹೊಂದುವ ಸಾವಿರದಷ್ಟು ಅಗ್ನಿವೀರರ ಭವಿಷ್ಯವೇನು? ಪ್ರಧಾನಿ ಮೋದಿಯವರ ಪ್ರಯೋಗಾಲಯದಲ್ಲಿನ ಪರೀಕ್ಷೆಗಳಿಂದಾಗಿ ದೇಶದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ ಎಂದು ರಾಹುಲ್ ಗಾಂಧಿ...

ಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 24, 2022 | 2:57 PM

Share

ದೆಹಲಿ: ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯ (Agnipath scheme) ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರನ್ನು(PM Narendra Modi) ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi), ಪ್ರಧಾನಿಯವರ ಪ್ರಯೋಗಾಲಯದಲ್ಲಿನ ನೂತನ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವ ಜನಾಂಗದ ಭವಿಷ್ಯ ಅಪಾಯದಲ್ಲಿದೆ ಎಂದು ಹೇಳಿದ್ದಾರೆ. ಪ್ರತಿವರ್ಷ 60,000 ಯೋಧರು ನಿವೃತ್ತರಾಗುತ್ತಾರೆ. ಇವರ ಪೈಕಿ ಕೇವಲ 3,000 ಯೋಧರಿಗೆ ಸರ್ಕಾರಿ ಕೆಲಸ ಸಿಗುತ್ತದೆ. 4 ವರ್ಷದ ಗುತ್ತಿಗೆ ನಂತರ ನಿವೃತ್ತಿಹೊಂದುವ ಸಾವಿರದಷ್ಟು ಅಗ್ನಿವೀರರ ಭವಿಷ್ಯವೇನು? ಪ್ರಧಾನಿ ಮೋದಿಯವರ ಪ್ರಯೋಗಾಲಯದಲ್ಲಿನ ಪರೀಕ್ಷೆಗಳಿಂದಾಗಿ ದೇಶದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.  ಅಗ್ನಿಪಥ್ ಯೋಜನೆಯಡಿಯಲ್ಲಿ ಹದಿನೇಳೂವರೆ ಮತ್ತು 21 ವರ್ಷಗಳ ನಡುವಿನ ಯುವಕನ್ನು ನಾಲ್ಕು ವರ್ಷಗಳ ಗುತ್ತಿಗೆ ಆಧಾರದಲ್ಲಿ ಸೇನೆಗೆ ನಿಯೋಜನೆ ಮಾಡಲಾಗುತ್ತದೆ. ಈ ಪೈಕಿ ಶೇ 25 ಮಂದಿಯನ್ನು ಆಮೇಲೆ ಸೇನೆಗೆ ನಿಯೋಜನೆ ಮಾಡಲಾಗುತ್ತದೆ.

ಜೂನ್ 14ರಂದು ಈ ಯೋಜನೆಯನ್ನು ಸರ್ಕಾರ ಘೋಷಿಸಿದ್ದು, ಪ್ರಸ್ತುತ ಯೋಜನೆ ಖಂಡಿಸಿ ದೇಶದಾದ್ಯಂತ ನಡೆದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದವು. ಆನಂತರ ಜೂನ್ 16ರಂದು ಸರ್ಕಾರ ಅಗ್ನವೀರರ ಗರಿಷ್ಠ ವಯೋಮಿತಿ 21ರಿಂದ 23ಕ್ಕೆ ಏರಿಸಿತು.

ಕಾಂಗ್ರೆಸ್ ಅಗ್ನಿಪಥ್ ಯೋಜನೆ ಬಗ್ಗೆ ಪ್ರತಿಭಟನೆಯನ್ನು ವ್ಯಕ್ತಪಡಿಸುತ್ತಲೇ ಬಂದಿದೆ, ಶುಕ್ರವಾರ ವಿಪಕ್ಷ ಸದಸ್ಯರಾದ ವಿಕೆ ವೇಣುಗೋಪಾಲ್ ಮತ್ತು ಉತ್ತಮ್ ಕುಮಾರ್ ರೆಡ್ಡಿ ಶುಕ್ರವಾರ ನಡೆದ ರಕ್ಷಣಾ ಸಚಿವಾಲಯದ ಸಂಸದೀಯ ಸಮಿತಿ ಸಭೆಯಲ್ಲಿ ಅಗ್ನಿಪಥ್ ಯೋಜನೆ ಬಗ್ಗೆ ಚರ್ಚೆ ನಡೆಯದೇ ಇರುವುದನ್ನು ವಿರೋಧಿಸಿ ಸಭೆ ಬಹಿಷ್ಕರಿಸಿದ್ದಾರೆ.

ಕಾಂಗ್ರೆಸ್ ಸದಸ್ಯರು ಮತ್ತು ಬಿಎಸ್ ಪಿ ಸದಸ್ಯರು ಸಮಿತಿ ಅಧ್ಯಕ್ಷ ಜಾವುಲ್ ಓರಂ ಅವರಲ್ಲಿ ಅಗ್ನಿಪಥ್ ಯೋಜನೆ ಬಗ್ಗೆ ಚರ್ಚಿಸುವಂತೆ ಹೇಳಿದ್ದರೂ ಅವರು ಒಪ್ಪಲಿಲ್ಲ.

Published On - 2:55 pm, Sun, 24 July 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ