AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Jodo Yatra: ಇಂದು ಉಜ್ಜಯಿನಿಯಲ್ಲಿ ಭಾರತ್ ಜೋಡೋ ಯಾತ್ರೆ ನಡೆಸಲಿರುವ ರಾಹುಲ್ ಗಾಂಧಿ

ಮಧ್ಯಪ್ರದೇಶದ ಇಂದೋರ್​ನಲ್ಲಿ ಭಾರತ್ ಜೋಡೋ ಯಾತ್ರೆ ಪೂರ್ಣಗೊಳಿಸಿದ ರಾಹುಲ್ ಗಾಂಧಿ ಇಂದು ಉಜ್ಜಯಿನಿಯಲ್ಲಿ ಯಾತ್ರೆ ಆರಂಭಿಸಿದ್ದಾರೆ.

Bharat Jodo Yatra: ಇಂದು ಉಜ್ಜಯಿನಿಯಲ್ಲಿ ಭಾರತ್ ಜೋಡೋ ಯಾತ್ರೆ ನಡೆಸಲಿರುವ ರಾಹುಲ್ ಗಾಂಧಿ
ಇಂದು ಉಜ್ಜಯಿನಿಯಲ್ಲಿ ಭಾರತ್ ಜೋಡೋ ಯಾತ್ರೆ ನಡೆಸಲಿರುವ ರಾಹುಲ್ ಗಾಂಧಿ
TV9 Web
| Edited By: Rakesh Nayak Manchi|

Updated on:Nov 29, 2022 | 7:37 AM

Share

ಭೋಪಾಲ್: ಮಹಾರಾಷ್ಟ್ರದ ಯಾತ್ರೆಯನ್ನು ಮುಕ್ತಾಯಗೊಳಿಸಿದ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ನೇತೃತ್ವದ ಭಾರತ್ ಜೋಡೋ ಯಾತ್ರೆ (Bharat Jodo Yatra) ಬುಧವಾರ ಮಧ್ಯಪ್ರದೇಶ (Madhya Pradesh) ಪ್ರವೇಶಿಸಿದೆ. ಆರು ದಿನಗಳ ಯಾತ್ರೆ ನಡೆಸಿದ ರಾಹುಲ್ ಗಾಂಧಿ ನೇತೃತ್ವದ ಯಾತ್ರೆಯು ಸೋಮವಾರ ಇಂದೋರ್‌ನಿಂದ ಉಜ್ಜಯಿನಿಗೆ ತಲುಪಿದೆ. ಭಾನುವಾರ ಮಧ್ಯಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆ ವೇಳೆ ಬಾಲಕನೊಬ್ಬ ರಾಹುಲ್ ಗಾಂಧಿಗೆ ಹುಂಡಿಯಲ್ಲಿ ಕೂಡಿಟ್ಟಿದ್ದ ಹಣವನ್ನು ಯಾತ್ರೆಗೆ ಬಳಸುವಂತೆ ಅರ್ಪಿಸಿದ್ದಾನೆ. ಧನ್ಯವಾದ ಪತ್ರದಲ್ಲಿ ವಯನಾಡ್ ಸಂಸದರೂ ಆಗಿರುವ ರಾಹುಲ್ ಗಾಂಧಿ, ತ್ಯಾಗ ಮತ್ತು ನಿಸ್ವಾರ್ಥತೆಯು ಬಾಲ್ಯದಲ್ಲಿ ರೂಢಿಸಿಕೊಂಡ ಮೌಲ್ಯಗಳಾಗಿವೆ ಎಂದು ಬಾಲಕನನ್ನು ಬಣ್ಣಿಸಿದ್ದರು.

ಅಲ್ಲದೆ, ರಾಹುಲ್ ಗಾಂಧಿ ನೇತೃತ್ವದ ಇದೇ ಪಾದಯಾತ್ರೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆಗಳನ್ನು ಕೂಗಲಾಯಿತು ಎಂದು ಬಿಜೆಪಿ ಆರೋಪಿಸಿತ್ತು. ಘಟನೆಯನ್ನು ಗಮನಿಸಿದ ಪೊಲೀಸರು ಮಧ್ಯಪ್ರದೇಶ ಕಾಂಗ್ರೆಸ್ ಐಟಿ ವಿಭಾಗದ ಮುಖ್ಯಸ್ಥ ಅಭಯ್ ತಿವಾರಿ ಮತ್ತು ಪತ್ರಕರ್ತ ಪಿಯೂಷ್ ಬಾಬೆಲೆ ವಿರುದ್ಧ ಭಾನುವಾರ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ ಕಾಂಗ್ರೆಸ್​ನಿಂದ ಪ್ರತಿದೂರು ಕೂಡ ದಾಖಲಿಸಲಾಗಿದೆ.

ಇದನ್ನೂ ಓದಿ: ಮೈನ್‌ಪುರಿ ಲೋಕಸಭಾ ಉಪಚುನಾವಣೆ: ಮುಲಾಯಂ ಸಿಂಗ್​​ ಹೆಸರಲ್ಲಿ ಅಖಿಲೇಶ್​​ ಮತ ಯಾಚನೆ

6ನೇ ದಿನದ ಪಾದಯಾತ್ರೆಯು ಇಂದೋರ್‌ನ ಬಡಾ ಗಣಪತಿ ಚೌಕದಿಂದ ಬೆಳಿಗ್ಗೆ ಪ್ರಾರಂಭವಾಯಿತು ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ. ಗ್ರ್ಯಾಂಡ್ ಓಲ್ಡ್ ಪಾರ್ಟಿ ಘೋಷಿಸಿದ ವೇಳಾಪಟ್ಟಿಯಂತೆ ಡಿಸೆಂಬರ್ 4 ರಂದು ರಾಜಸ್ಥಾನಕ್ಕೆ ಪ್ರವೇಶಿಸುವ ಮೊದಲು 12 ದಿನಗಳಲ್ಲಿ ಪಶ್ಚಿಮ ಮಧ್ಯಪ್ರದೇಶದ ಮಾಲ್ವಾ ನಿಮಾರ್ ಪ್ರದೇಶದಲ್ಲಿ 380 ಕಿ.ಮೀ ದೂರವನ್ನು ಈ ಯಾತ್ರೆ ಕ್ರಮಿಸಲಿದೆ.

ಕಾಂಗ್ರೆಸ್‌ನ ಸಾಮೂಹಿಕ ಉಪಕ್ರಮದ ಯಾತ್ರೆಯು ನೆರೆಯ ಮಹಾರಾಷ್ಟ್ರದಿಂದ ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯ ಬೋದರ್ಲಿ ಗ್ರಾಮಕ್ಕೆ ನವೆಂಬರ್ 23 ರಂದು ಪ್ರವೇಶಿಸಿತು. ಕಳೆದ ಆರು ದಿನಗಳಲ್ಲಿ ಮಧ್ಯಪ್ರದೇಶದಲ್ಲಿ ತನ್ನ ಅರ್ಧದಷ್ಟು ಪ್ರಯಾಣವನ್ನು ಪೂರ್ಣಗೊಳಿಸಿದೆ. ಈವರೆಗೆ ರಾಹುಲ್ ಗಾಂಧಿಯವರು ಬುರ್ಹಾನ್‌ಪುರ, ಖಾಂಡ್ವಾ, ಖಾರ್ಗೋನ್ ಮತ್ತು ಇಂದೋರ್ ಜಿಲ್ಲೆಗಳಲ್ಲಿ ಯಾತ್ರೆಯನ್ನು ಪೂರ್ಣಗೊಳಿಸಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:37 am, Tue, 29 November 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ